ಚುನಾವಣಾ ರ್ಯಾಲಿ ಬ್ಯಾನ್ನಿಂದ ಹಿಂದೆ ಸರಿಯುವುದೇ ಆಯೋಗ
ಕೇಂದ್ರ ಆರೋಗ್ಯ ಇಲಾಖೆ ಜತೆ ಸಭೆ ಬಳಿಕ ನಿಯಮ ಸಡಿಲಿಕೆ ಸಾಧ್ಯತೆ
Team Udayavani, Jan 15, 2022, 12:14 PM IST
ನವದೆಹಲಿ: ಕೋವಿಡ್ ಹರಡುವಿಕೆ ಹಿನ್ನೆಲೆಯಲ್ಲಿ ಚುನಾವಣಾ ಹೊಸ್ತಿಲಲ್ಲಿರುವ ಪಂಚರಾಜ್ಯಗಳಲ್ಲಿ ರ್ಯಾಲಿ, ಬೃಹತ್ ಸಮಾವೇಶಗಳನ್ನು ರದ್ದುಗೊಳಿಸಿದ್ದ ಕೇಂದ್ರ ಚುನಾವಣಾ ಆಯೋಗ ತನ್ನ ನಿರ್ಧಾರವನ್ನು ಪುನರ್ ಪರಾಮರ್ಶಿಸುವ ಸಾಧ್ಯತೆ ಇದೆ.
ಈ ಐದು ರಾಜ್ಯಗಳಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಹಾಗೂ ನಿಯಂತ್ರಣ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆಯುವುದಕ್ಕಾಗಿ ಆಯೋಗ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಜತೆ ಸಭೆ ನಡೆಸಲಿದ್ದು ಆ ಬಳಿಕ ತನ್ನ ಹಿಂದಿನ ನಿರ್ಣಯದಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಪಂಚರಾಜ್ಯಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಯಾವುದೇ ರ್ಯಾಲಿ ಹಾಗೂ ಸಮಾವೇಶ ನಡೆಸಬಾರದೆಂದು ಆಯೋಗ ಐತಿಹಾಸಿಕ ನಿರ್ಣಯ ತೆಗೆದುಕೊಂಡಿತ್ತು. ಆದರೆ ಭಾರತದಲ್ಲಿ ಚುನಾವಣೆ ಎಂದರೆ ಹಬ್ಬದಂತೆ ಎಂದು ಕೆಲ ರಾಜಕೀಯ ಪಕ್ಷಗಳು ಖ್ಯಾತೆ ತೆಗೆದಿದ್ದವು.
ನಿರ್ಬಂಧದ ಮಧ್ಯೆಯೂ ಉತ್ತರ ಪ್ರದೇಶದಲ್ಲಿ ಶುಕ್ರವಾರ ಸಮಾಜವಾದಿ ಪಕ್ಷ ಬೃಹತ್ ಸಮಾವೇಶ ಆಯೋಜಿಸಿ ಆಯೋಗದ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಕೇಂದ್ರ ಆರೋಗ್ಯ ಇಲಾಖೆಯ ಜತೆ ಸಭೆ ನಡೆಸಲಿದೆ. ಜನವರಿ 15 ರ ನಂತರ ಈಗಿರುವ ನಿಯಮಾವಳಿಗಳಿಗೆ ಕೊಂಚ ರಿಯಾಯಿತಿ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ