ಅಡುಗೆ ಸಿಬಂದಿ ಸ್ವಚ್ಛತೆಗೆ ಆದ್ಯತೆ ನೀಡಲಿ: ದೀಪಿಕಾ
Team Udayavani, Jan 15, 2022, 1:12 PM IST
ಭಾಲ್ಕಿ: ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರು ಸ್ವಚ್ಛತೆಗೆ ಮೊದಲಾದ್ಯತೆ ನೀಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್ ಹೇಳಿದರು.
ಪಟ್ಟಣದ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಜಿಪಂ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಾರ್ಯಾಲಯ ಹಾಗೂ ಅಕ್ಷರ ದಾಸೋಹ ಯೋಜನೆ ತಾ.ಪಂ. ಭಾಲ್ಕಿ ವತಿಯಿಂದ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಷರ ದಾಸೋಹ ಯೋಜನೆಯ ಮೂಲ ಉದ್ದೇಶ ಎಲ್ಲ ಮಕ್ಕಳು ಶಾಲೆಗೆ ಹಾಜರಾಗಿ ಅಕ್ಷರ ಕಲಿಯುವುದಾಗಿದೆ. ಹೀಗಾಗಿ ಬಿಸಿಯೂಟದ ಅಡುಗೆ ಸಿಬ್ಬಂದಿಯವರು ಮಕ್ಕಳಿಗೆ ಉತ್ತಮವಾದ ರುಚಿ, ರುಚಿಯಾದ ಅಡುಗೆ ಮಾಡಿ ಹಾಕಿದಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯುವುದಿಲ್ಲ. ಪ್ರಸ್ತುತ ಸಾಲಿನಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಮ್ಮೆಲ್ಲರನ್ನೂ ಕಾಡುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡುವುದರೊಂದಿಗೆ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂದು ಹೇಳಿದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಮಾತನಾಡಿ, ಅಕ್ಷರ ದಾಸೋಹ ಯೋಜನೆಯಡಿ ಆಹಾರ ಧಾನ್ಯ ಹಂಚುವಾಗ ನಿರಂತರವಾಗಿ ಗೈರು ಹಾಜರಿದ್ದ ಮಕ್ಕಳಿಗೆ ಶಾಲೆಗೆ ಬರುವಂತೆ ಮಾಡಿ ಆಹಾರ ಧಾನ್ಯ ಹಂಚಬೇಕು ಎಂದು ಸಲಹೆ ನೀಡಿದರು.
ಅಡುಗೆ ಸಿಬ್ಬಂದಿಯವರು ತಮ್ಮ ಗೌರವ ಧನ ಹೆಚ್ಚಿಸಬೇಕು ಎನ್ನುವ ಬೇಡಿಕೆ ಇಟ್ಟರು. ನಂತರ ಆರೋಗ್ಯ ಇಲಾಖೆಯ ಡಾ| ನಂದಿನಿ ಆರ್ಬಿಎಸ್ಕೆ ಬಿಸಿಯೂಟ ತಯಾರಿಸುವಾಗ ಅನುಸರಿಸಬೇಕಾದ ಆರೋಗ್ಯದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಕಾಂಬಳೆ ಬಿಸಿಯೂಟ ಯೋಜನೆಯ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ದತ್ತು ಕಾಟಕರ, ಉಪಾಧ್ಯಕ್ಷ ಜಯರಾಜ ದಾಬಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಅಶೋಕ ಕುಂಬಾರ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ವೀರಶೆಟ್ಟಿ ಇಟಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ