ವಿವೇಕಾನಂದ ತತ್ವದಿಂದ ಭಾರತ ಸಮೃದ್ಧ
Team Udayavani, Jan 15, 2022, 1:18 PM IST
ಬೀದರ: ಸ್ವಾಮಿ ವಿವೇಕಾನಂದರ ತತ್ವಗಳ ಪಾಲನೆಯಿಂದ ಸಮೃದ್ಧ ಭಾರತ ಕಟ್ಟಲು ಸಾಧ್ಯವಿದೆ ಎಂದು ಜ್ಞಾನ ಸಂಗಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೀಪಕ ಮನ್ನಳ್ಳಿ ಅಭಿಪ್ರಾಯಪಟ್ಟರು.
ತಾಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಯುವಕರು ಮನಸ್ಸು ಮಾಡಿದರೆ ಏನು ಮಾಡಬಹುದು ಎಂಬುದನ್ನು ಸ್ವಾಮಿ ವಿವೇಕಾನಂದರು ತೋರಿಸಿದ್ದರು ಎಂದು ತಿಳಿಸಿದರು.
ಮನ್ನಳ್ಳಿಯ ಜ್ಞಾನ ಜ್ಯೋತಿ ಭವನದ ಸಂಚಾಲಕಿ ಮೀನಾ ಬಹೆನ್ಜಿ ಮಾತನಾಡಿ, ವಿವೇಕಾನಂದರ ಬದುಕು ಯುವಕರಿಗೆ ದಾರಿ ದೀಪವಾಗಿದೆ ಎಂದರು. ಬೀದರ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಗುರುದೇವಿ ಬಹೆನ್ಜಿ ಮಾತನಾಡಿದರು.
ಪ್ರಾಚಾರ್ಯ ಪ್ರೊ| ವಿನಾಯಕ ಕೊತಮಿರ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ ಎಸ್ ಅ ಧಿಕಾರಿ ಡಾ| ಹೇಮಾವತಿ ಪಾಟೀಲ, ಸೈಯದ್ ಮಕದುಮ್ ಅಹಮ್ಮದ್, ಸತ್ಯಶೀಲ, ಅಯೂಬ್ ಅಹಮ್ಮದ್, ಮಹಮ್ಮದ್ ಮುಸ್ತಫಾ ಇದ್ದರು. ಡಾ| ಸಂಜೀವಕುಮಾರ ತಾಂದಳೆ ಸ್ವಾಗತಿಸಿದರು. ಪ್ರೊ| ಮಹೇಶಕುಮಾರ ಆರ್. ನಿರೂಪಿಸಿದರು. ಊರ್ವಶಿ ಕೋಡ್ಲಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
MUST WATCH
ಹೊಸ ಸೇರ್ಪಡೆ
Kollywood: ಕಮಲ್ ಹಾಸನ್ ʼಇಂಡಿಯನ್ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?