ತೊಗರಿ ಬೆಳೆಯಲ್ಲಿ ಆಧುನಿಕ ಕೃಷಿ ತಾಂತ್ರಿಕತೆ ಬಳಸಿ
Team Udayavani, Jan 15, 2022, 3:16 PM IST
ಯಾದಗಿರಿ: ತೊಗರಿ ಬೆಳೆಯಲ್ಲಿ ಆಧುನಿಕ ಕೃಷಿ ತಾಂತ್ರಿಕ ಪದ್ಧತಿ ಅನುಸರಿಸಬೇಕು ಎಂದು ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ| ಅಮರೇಶ ವೈ.ಎಸ್ ಹೇಳಿದರು.
ವಡಗೇರಾ ತಾಲೂಕಿನ ಗಡ್ಡೆಸೂಗೂರು ಗ್ರಾಮದಲ್ಲಿ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ಹಮ್ಮಿಕೊಂಡ ತೊಗರಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತೊಗರಿ ಬೆಳೆಯ ಉತ್ಪಾದಕತೆ ಹೆಚ್ಚಿಸಲು ಆಧುನಿಕ ಕೃಷಿ ತಾಂತ್ರಿಕತೆ ಬಳಸಬೇಕು. ಅಧಿಕ ಇಳುವರಿ ನೀಡುವ ತೊಗರಿ ಬೆಳೆಯ ತಳಿಗಳಾದ ಜಿ.ಆರ್.ಜಿ-811 ಬಿ.ಎಸ್. ಎಂ.ಆರ್, ಟಿ.ಎಸ್-3 ಆರ್ ಇತರೆ ತಳಿಗಳ ಬಗ್ಗೆ ಮಾಹಿತಿ ನೀಡಿದರು. ಕೃಷಿ ವಿಜ್ಞಾನಿ ಡಾ| ದೇವಿಂದ್ರ ಬೀರಲದಿನ್ನಿ ಅವರು ತೊಗರಿಯ ಮಾರುಕಟ್ಟೆ ಹಾಗೂ ಮೌಲ್ಯವರ್ದನೆ ಬಗ್ಗೆ ವಿವರಿಸಿದರು.
ರೈತರು ಸಂಘಟಿತರಾಗಿ ರೈತ ಉತ್ಪಾದಕರ ಸಂಘಗಳ ಎಫ್.ಪಿ.ಒ. ಸ್ಥಾಪನೆ ಮಾಡಿ ಅದರ ಮುಖಾಂತರ ರೈತರ ಲಾಭ ಪಡೆಯಬೇಕೆಂದು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ಉಮೇಶ ಭರಿಕರ್ ಮತ್ತು ವಡಗೇರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಗದೀಶ ಮಾತನಾಡಿದರು. ರೈತ ವೀರರೆಡ್ಡಿ ಚಿಗನೂರ್ ಗಡೆಸೂಗುರು, ಬಸವರಾಜಪ್ಪಗೌಡ ಮಾಲಿಪಾಟೀಲ್, ಚನ್ನಪ್ಪಗೌಡ ಪೋ.ಪಾಟಿಲ, ಮಲ್ಲನಗೌಡ ಪೋ. ಪಾಟೀಲ, ಭೀಮರಾಯ ದೋರನಹಳ್ಳಿ, ಶರಣಗೌಡ ಕುಮನೂರ, ಚನ್ನವೀರಯ್ಯ ಸಾಹುಕಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
MUST WATCH
ಹೊಸ ಸೇರ್ಪಡೆ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ