Watch; ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ 1 ತಿಂಗಳ ಮಗು, ಆಸ್ಪತ್ರೆಯಿಂದ ಡಿಸ್ ಚಾರ್ಜ್
ಮಗುವನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನ ಪರೀಕ್ಷೆ ನಡೆಸಿದಾಗ ಕೋವಿಡ್ 19 ಪಾಸಿಟಿವ್ ವರದಿ ಬಂದಿತ್ತು.
Team Udayavani, Jan 15, 2022, 4:12 PM IST
ನವದೆಹಲಿ: ದೆಹಲಿಯಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದ್ದ ಒಂದು ತಿಂಗಳ ಹಸುಳೆ ಸಂಪೂರ್ಣವಾಗಿ ಗುಣಮುಖವಾಗಿ, ಆಸ್ಪತ್ರೆಯಿಂದ ಡಿಸ್ ಚಾರ್ಚ್ ಆಗಿರುವುದಾಗಿ ವರದಿಯೊಂದು ತಿಳಿಸಿದೆ.
ಇದನ್ನೂ ಓದಿ:ವೃಷಾನನ ಯೋಗಿನಿ ಮೂರ್ತಿಯನ್ನು ಭಾರತಕ್ಕೆ ಹಸ್ತಾಂತರಿಸಿದ ಇಂಗ್ಲೆಂಡ್
ಕಿವಿಯ ಸೋಂಕಿನಿಂದಾಗಿ ಒಂದು ತಿಂಗಳ ಮಗುವನ್ನು ದೆಹಲಿಯ ಮೂಲ್ ಚಂದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಗುವನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನ ಪರೀಕ್ಷೆ ನಡೆಸಿದಾಗ ಕೋವಿಡ್ 19 ಪಾಸಿಟಿವ್ ವರದಿ ಬಂದಿತ್ತು.
ಒಂದು ತಿಂಗಳ ಮಗು ಕೋವಿಡ್ ನಿಂದ ಸಂಪೂರ್ಣವಾಗಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದೆ. ಈ ಕುರಿತು ವಿಡಿಯೋವೊಂದನ್ನು ಆಸ್ಪತ್ರೆ ಶೇರ್ ಮಾಡಿದ್ದು, ಆರೋಗ್ಯ ಕಾರ್ಯಕರ್ತೆಯೊಬ್ಬರು ಪಿಪಿಇ ಕಿಟ್ ಧರಿಸಿ ಮಗುವನ್ನು ಆರೈಕೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.
Covid-19 update :
One month old baby , came with ear infection and tested positive on admission . Getting discharged with full recovery .
Well taken care of by the Neonatologists and NICU staff in COVID isolation unit.@PMOIndia @ndtv @PTI_News @ANI @timesofindia pic.twitter.com/7bPYcND3GL— Moolchand Healthcare (@Moolchand_Hosp) January 14, 2022
ಕೋವಿಡ್ 3ನೇ ಅಲೆಯಲ್ಲಿ ದೇಶದ ವಿವಿಧ ಭಾಗದಲ್ಲಿ ಮಕ್ಕಳ ಮೇಲೂ ಹೆಚ್ಚಿನ ಪರಿಣಾಮ ಬೀರತೊಡಗಿದೆ. ಈಗಾಗಲೇ 15ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ನೀಡಲು ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ.
ಜನವರಿ 13ರವರೆಗೆ ದೇಶದಲ್ಲಿ 3 ಕೋಟಿ ಮಂದಿ ಯುವಕ, ಯುವತಿಯರು ಕೋವಿಡ್ 19 ಮೊದಲ ಡೋಸ್ ಪಡೆದಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕೂಡಲೇ ಯುವಸಮೂಹ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು ಎಂದು ಸಚಿವ ಮನ್ ಸುಖ್ ಮಾಂಡವಿಯಾ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…