ಭಯಗೊಳ್ಳದೆ ಚುನಾವಣೆ ಎದುರಿಸಿ: ಅರ್ಚನಾಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ


Team Udayavani, Jan 16, 2022, 1:49 PM IST

1wer

ಮೀರತ್ : ಉತ್ತರ ಪ್ರದೇಶದ ಹಸ್ತಿನಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಡೆಲ್ ಮತ್ತು ನಟಿ ಅರ್ಚನಾ ಗೌತಮ್ ಅವರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಧೈರ್ಯದ ಮಾತುಗಳನ್ನು ಹೇಳಿದ್ದು, ಭಯಪಡಬೇಡಿ, ಚುನಾವಣೆ ಎದುರಿಸಿ ಎಂದು ಸ್ಪೂರ್ತಿ ತುಂಬಿದ್ದಾರೆ.

ಅರ್ಚನಾ ಗೌತಮ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ಬಳಿಕ ಮಾಜಿ ‘ಮಿಸ್ ಬಿಕಿನಿ ಇಂಡಿಯಾ’ ಆಗಿದ್ದ ಅವರ ಮಾದಕ ಫೋಟೋಗಳು ಸಾಮಾಜಿಕ ತಾಣದಲ್ಲಿ ಹರಿದಾಡಿ ವೈರಲ್ ಆಗಿದ್ದವು. ಅವಹೇಳನಕಾರಿ ಕಾಮೆಂಟ್‌ಗಳಿಂದ ವ್ಯಾಪಕವಾಗಿ ಟೀಕಿಸಲಾಗಿತ್ತು.

ಪಶ್ಚಿಮ ಉತ್ತರ ಪ್ರದೇಶದ ಬಹುಪಾಲು ಗ್ರಾಮೀಣ ಭಾಗದ ಸಂಪ್ರದಾಯವಾದಿ ಮತದಾರರಿರುವ ಕ್ಷೇತ್ರದಲ್ಲಿ 26 ವರ್ಷದ ಅರ್ಚನಾ ರಾಜಕೀಯದಲ್ಲಿ ಚೊಚ್ಚಲ ಅವಕಾಶಕ್ಕಾಗಿ ಕಣಕ್ಕಿಳಿದಿದ್ದಾರೆ.

ಬಿಜೆಪಿ ಮತ್ತು ಅಖಿಲ ಭಾರತ ಹಿಂದೂ ಮಹಾಸಭಾದಂತಹ ಪಕ್ಷಗಳೂ ಅರ್ಚನಾ ಅವರ ಅಭ್ಯರ್ಥಿತನವನ್ನು ಟೀಕಿಸಿದ್ದವು. ಮೀರತ್ ಜಿಲ್ಲೆಯ ಕ್ಷೇತ್ರದಿಂದ ಅರ್ಚನಾ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ “ಅಗ್ಗದ ಪ್ರಚಾರ” ದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದರೆ, ಸಾಮಾಜಿಕ ಮಾಧ್ಯಮ ಬಳಕೆದಾರರು ಅವರನ್ನು ನಾಚಿಕೆಪಡಿಸಲು ಅವರ ಹಳೆಯ ಫೋಟೋಗಳು ಮತ್ತು ವಿಡಿಯೋಗಳನ್ನು ಹೊರ ಹಾಕಿದ್ದರು.

“ಗ್ರೇಟ್ ಗ್ರ್ಯಾಂಡ್ ಮಸ್ತಿ” ಮತ್ತು “ಹಸೀನಾ ಪಾರ್ಕರ್” ನಂತಹ ಚಲನಚಿತ್ರಗಳಲ್ಲಿ ನಟಿಸಿದ ಅರ್ಚನಾ ಕಳೆದ ವರ್ಷ ನವೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. 2018 ರ ಮಿಸ್ ಬಿಕಿನಿ ಇಂಡಿಯಾ ಸ್ಪರ್ಧೆಯಲ್ಲಿ ವಿಜೇತರಾಗಿರುವ ಅವರ ಹಿನ್ನೆಲೆಯನ್ನು ರಾಜಕೀಯ ಪ್ರತಿಸ್ಪರ್ಧಿಗಳು ಅದನ್ನೇ ಅಸ್ತ್ರವನ್ನಾಗಿ ಬಳಸುತ್ತಿದ್ದಾರೆ ಮತ್ತು ಟ್ರೋಲ್ ಮಾಡುತ್ತಿದ್ದಾರೆ.

“ನಾನು ಪ್ರಿಯಾಂಕಾ ದೀದಿಯೊಂದಿಗೆ ಮಾತನಾಡಿದಾಗ, ಅವರು ನನಗೆ ಹೇಳಿದರು, ‘ಅರ್ಚನಾ, ನೀವು ಈ ಜಗತ್ತಿಗೆ ಕಾಲಿಡುತ್ತಿದ್ದೀರಿ ಆದರೆ ಅರೆಮನಸ್ಸಿನಿಂದ ಬರಬೇಡಿ. ನಿಮ್ಮ ಚಿತ್ರಗಳು ಮತ್ತು ವಿಡಿಯೋಗಳಿಂದಾಗಿ ಟ್ರೋಲಿಂಗ್ ಇರುತ್ತದೆ. ಆದರೆ ನೀವು ಭಯಪಡುವ ಅಗತ್ಯವಿಲ್ಲ, ನೀವು ದೃಢವಾಗಿ ಉಳಿಯಬೇಕು’ ” ಎಂದಿದ್ದಾರೆ. ನಾನು ಈಗಾಗಲೇ ಪ್ರಿಯಾಂಕಾ ಅವರ ಮಾತುಗಳಿಂದ ಧೈರ್ಯಶಾಲಿಯಾಗಿದ್ದೇನೆ ಮತ್ತು ನನ್ನನ್ನು ತಡೆಯಲು ಆಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನನ್ನ ತಂದೆ ಒಬ್ಬ ರೈತ, ನನ್ನ ತಾಯಿ ಗೃಹಿಣಿ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಾನು ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ಜನರು ಹೆಮ್ಮೆಪಡಬೇಕು ಎಂದು ಅರ್ಚನಾ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ನನ್ನ ಬಗ್ಗೆ ನಿಂದನೆ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವ ಜನರಿಗೆ, ನಾನು ಎರಡು ವೃತ್ತಿಪರ ಜೀವನವನ್ನು ಹೊಂದಿದ್ದೇನೆ ಮತ್ತು ಎರಡೂ ಪರಸ್ಪರ ಭಿನ್ನವಾಗಿದೆ ಎಂದು ಹೇಳಲು ಬಯಸುತ್ತೇನೆ. ನಾನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರಿಂದ ಅವರು ಎರಡನ್ನೂ ಬೆರೆಸಬಾರದು ಎಂದು ನಾನು ಬಯಸುತ್ತೇನೆ. ನಾನು ನನ್ನ ದೇಶವನ್ನು ಹೆಮ್ಮೆ ಪಡುವಂತೆ ಮಾಡಿದ್ದೇನೆ ಎಂದು ಅರ್ಚನಾ ಹೇಳಿದ್ದಾರೆ.

ಟಾಪ್ ನ್ಯೂಸ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.