ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು


Team Udayavani, Jan 17, 2022, 1:35 AM IST

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಉಡುಪಿ: ನಗರದಲ್ಲಿ ಕಳ್ಳತನ ಪ್ರಕರಣಗಳು ದಿನೇ ದಿನೇ ವರದಿಯಾಗುತ್ತಿದ್ದು, ಈ ನಡುವೆ ಪರ್ಯಾಯೋತ್ಸವ ನಡೆಯುತ್ತಿರುವುದರಿಂದ ಶ್ರೀಕೃಷ್ಣ ಮಠದ ಪರಿಸರಕ್ಕೆ ಎಚ್‌ಡಿ ಗುಣಮಟ್ಟದ 63 ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ. ಈ ಮೂಲಕ ಕಳ್ಳತನ ಸಹಿತ ಇತರ ಅಹಿತಕರ ಘಟನೆ ನಡೆಯದಂತೆ ಎಚ್ಚರವಹಿಸಲು ಪೊಲೀಸ್‌ ಇಲಾಖೆಯಿಂದ ಸಕಲ ಕ್ರಮ ತೆಗೆದುಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, 5 ಡಿವೈಎಸ್‌ಪಿಗಳು, 47 ಪಿಎಸ್‌ಐ, 62 ಎಎಸ್‌ಐ, 529 ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗ‌ಳು, 93 ಮಹಿಳಾ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ಕಾನ್‌ಸ್ಟೆಬಲ್‌ಗ‌ಳು, 7 ಡಿಎಆರ್‌, 2 ಕೆಎಸ್‌ಆರ್‌ಪಿ ತುಕಡಿ, 1 ಕ್ವಿಕ್‌ ರೆಸ್ಪಾನ್ಸ್‌ ಟೀಮ್‌, 3 ವಿಧ್ವಂಸಕ ವಿರೋಧಿ ತಪಾಸಣೆ ತಂಡಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜಿಲ್ಲೆಯಷ್ಟೇ ಅಲ್ಲದೆ ಹೊರಜಿಲ್ಲೆ ಗಳಿಂದಲೂ ಪೊಲೀಸರು ಭದ್ರತೆಗಾಗಿ ಆಗಮಿಸಿದ್ದಾರೆ.

ರಥಬೀದಿಯೊಳಗೆ ಪೊಲೀಸ್‌ ಚೌಕಿ
ರಥಬೀದಿಯ ಶ್ರೀ ಕೃಷ್ಣಾಪುರ ಮಠದ ಬಲಬದಿಯಲ್ಲಿ ಪೊಲೀಸ್‌ ಚೌಕಿ ಮಾಡಲಾಗಿದೆ. ಇಲ್ಲಿ ಸಿಸಿಟಿವಿ ದೃಶ್ಯಾವಳಿಗಳೆಲ್ಲವನ್ನೂ ಪೊಲೀಸರು ಮಾನಿಟರಿಂಗ್‌ ಮಾಡಲಿದ್ದಾರೆ. ಪಾಳಿ ಅವಧಿಯಲ್ಲಿ ಪೊಲೀಸರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ರಥಬೀದಿ ಸಂಪರ್ಕಿಸುವ ಎಲ್ಲ ದ್ವಾರಗಳು, ವಾಹನ ನಿಲುಗಡೆ ಪ್ರದೇಶ, ಪರ್ಯಾಯೋತ್ಸವ ಮೆರವಣಿಗೆ ಹಾದು ಹೋಗುವ ಭಾಗಗಳು ಸಹಿತ ಎಲ್ಲೆಡೆ ಪೊಲೀಸರು ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಚಂದು ಮೈದಾನದಲ್ಲಿ ಸಭೆ
ಪರ್ಯಾಯೋತ್ಸವ ಸಂದರ್ಭದಲ್ಲಿ ವಹಿಸಬೇಕಾಗಿರುವ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ನಗರದ ಚಂದು ಮೈದಾನದಲ್ಲಿ ಎಲ್ಲ ಪೊಲೀಸರಿಗೂ ರವಿವಾರ ಮಾಹಿತಿ ನೀಡಿದರು.

ಎಚ್ಚರಿಕೆ ಫ‌ಲಕ
ಉಡುಪಿ ಜಿಲ್ಲೆ ಸಹಿತ ನಗರ ಪೊಲೀಸ್‌ ಠಾಣೆಯ ಸಿಬಂದಿ ನಗರ, ಶ್ರೀಕೃಷ್ಣಮಠದ ಪರಿಸರದಲ್ಲಿ ಎಚ್ಚರಿಕೆ ಫ‌ಲಕಗಳನ್ನು ಅಳವಡಿಕೆ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸರಳಗಳ್ಳತನದ ಬಗ್ಗೆ ಎಚ್ಚರಿಕೆ ಸಂದೇಶ ಸಹಿತ ಮಕ್ಕಳು, ಬ್ಯಾಗ್‌, ಪರ್ಸ್‌ಗಳ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತಹ ಜಾಗೃತಿ ಫ‌ಲಕಗಳು ಶ್ರೀಕೃಷ್ಣ ಮಠ ಪರಿಸರದಲ್ಲಿ ರಾರಾಜಿಸುತ್ತಿವೆ.

ಎಲ್ಲೆಲ್ಲಿಸಿಸಿ ಕೆಮರಾ ಅಳವಡಿಕೆ ?
ಪರ್ಯಾಯೋತ್ಸವ ಮೆರವಣಿಗೆ ಹಾದುಹೋಗುವ ಮಾರ್ಗ, ಕಿನ್ನಿಮೂಲ್ಕಿಯಿಂದ ರಥಬೀದಿ ಪರಿಸರ ಸುತ್ತಮುತ್ತ, ಇಂದ್ರಾಳಿ, ಕಲ್ಸಂಕ, ಕುಕ್ಕಿಕಟ್ಟೆ ಸಹಿತ ಎಲ್ಲ ಪ್ರಮುಖ ಭಾಗಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಈ ಮೂಲಕ ಯಾರೂ ಕೂಡ ಸಿಸಿಟಿವಿ ಕಣ್ಣು ತಪ್ಪಿಸಿ ಪರಾರಿಯಾಗಲು ಸಾಧ್ಯವೇ ಇಲ್ಲ ಎಂಬಂತೆ ಭದ್ರತೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 

 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.