ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?


Team Udayavani, Jan 17, 2022, 6:55 AM IST

thumb 2

ಹೊಸದಿಲ್ಲಿ: ನಾಯಕತ್ವ ತ್ಯಜಿಸಿದ ದಿಢೀರ್‌ ಬೆಳವಣಿಗೆಯನ್ನು ಗಮನಿಸಿದಾಗ ಕೊಹ್ಲಿ ಮತ್ತೆ ಬಿಸಿಸಿಐಗೆ ಸಡ್ಡು ಹೊಡೆದರೇ ಎಂಬ ಪ್ರಶ್ನೆ ಉದ್ಭವವಾಗುತ್ತದೆ.

ಮತ್ತೊಂದು ಬೌನ್ಸರ್‌?
ದಕ್ಷಿಣ ಆಫ್ರಿಕಾಕ್ಕೆ ವಿಮಾನ ಏರುವ ಮೊದಲು ವಿರಾಟ್‌ ಕೊಹ್ಲಿ ಬಿಸಿಸಿಐ ವಿರುದ್ಧ ಆಕ್ರೋಶ ಹಾಗೂ ಅಸಮಾಧಾನ ವ್ಯಕ್ತಪಡಿಸಿದ್ದರು. ಟಿ20 ನಾಯಕತ್ವದಲ್ಲಿ ಮುಂದುವರಿಯುವಂತೆ ತನಗೆ ಸೂಚಿಸಲಾಗಿತ್ತು ಎಂಬ ಗಂಗೂಲಿ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದರು.

ಇದೀಗ ಟೆಸ್ಟ್‌ ನಾಯಕತ್ವದ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಟ್‌ ಕೊಹ್ಲಿ, ಬಿಸಿಸಿಐ ಮತ್ತು ಆಯ್ಕೆ ಸಮಿತಿಯತ್ತ ಮತ್ತೊಂದು ಬೌನ್ಸರ್‌ ಎಸೆಯುವ ಎಲ್ಲ ಸಾಧ್ಯತೆ ಇದೆ. ಕೊಹ್ಲಿ ಇದಕ್ಕೆ ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದು ವರದಿಯಾಗಿದೆ. ಆಗ ಈ ಪ್ರಕರಣ ಇನ್ನೊಂದು ಟ್ವಿಸ್ಟ್‌ ಪಡೆಯುವುದರಲ್ಲಿ ಅನುಮಾನವಿಲ್ಲ.

ತಾನೇಕೆ ಟೆಸ್ಟ್‌ ತಂಡದ ನಾಯಕತ್ವ ತ್ಯಜಿಸಿದೆ ಎಂದು ವಿರಾಟ್‌ ಕೊಹ್ಲಿ ಎಲ್ಲೂ ಹೇಳಿಲ್ಲ ಎಂಬುದು ಉಲ್ಲೇಖನೀಯ. ಇದರ ಹಿನ್ನೆಲೆ ಬಹಳ ಕುತೂಹಲಕಾರಿ ಹಾಗೂ ಅಷ್ಟೇ ವಿವಾದಾತ್ಮಕವಾಗಿರುವ ಎಲ್ಲ ಸಾಧ್ಯತೆ ಇದೆ. ಇದರ ಹಿಂದಿನ “ರಾಜಕೀಯ’ ಕೂಡ ಬಯಲಾಗುವುದು ನಿಶ್ಚಿತ. “ಡೋಂಟ್‌ ಕೇರ್‌’ ಸ್ವಭಾವದ ಕೊಹ್ಲಿ ಕ್ರಿಕೆಟಿಗೂ ಗುಡ್‌ಬೈ ಹೇಳಿದರೆ ಅಚ್ಚರಿಯಿಲ್ಲ. ಭಾರತವಿನ್ನು ಕೆ.ಎಲ್‌. ರಾಹುಲ್‌ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ತಂಡದಲ್ಲಿ ಕೊಹ್ಲಿ ಕೂಡ ಇದ್ದಾರೆ.

ಶಾಕ್‌ ನೀಡಿತು: ರೋಹಿತ್‌
“ಕೊಹ್ಲಿ ಟೆಸ್ಟ್‌ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನಿಜಕ್ಕೂ ಆಘಾತವಾಯಿತು. ಆದರೆ ಭಾರತದ ನಾಯಕನಾಗಿ ಯಶಸ್ವಿ ಪ್ರದರ್ಶನ ನೀಡಿದಕ್ಕೆ ಅವರಿಗೆ ಅಭಿನಂದನೆಗಳು’ ಎಂದು ಟೀಮ್‌ ಇಂಡಿಯಾ ಸೀಮಿತ ಓವರ್‌ ತಂಡಗಳ ನಾಯಕ ರೋಹಿತ್‌ ಶರ್ಮ ಟ್ವೀಟ್‌ ಮಾಡಿದ್ದಾರೆ. ಜತೆಗೆ ಟೆಸ್ಟ್‌ ಪಂದ್ಯದಲ್ಲಿ ಕೊಹ್ಲಿ ಜತೆಗಿರುವ ಫೋಟೊ ಒಂದನ್ನು ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.