ಭಟ್ಕಳ: ಮಾಸ್ಕ್ ಹಾಕದೇ ವ್ಯಾಪಾರ ಮಾಡುವ ಅಂಗಡಿಕಾರರಿಗೆ ಬಿಸಿ ಮುಟ್ಟಿಸಿದ ಆಯುಕ್ತೆ


Team Udayavani, Jan 17, 2022, 5:28 PM IST

ಭಟ್ಕಳ: ಮಾಸ್ಕ್ ಹಾಕದೇ ವ್ಯಾಪಾರ ಮಾಡುವ ಅಂಗಡಿಕಾರರಿಗೆ ಬಿಸಿ ಮುಟ್ಟಿಸಿದ ಆಯುಕ್ತೆ

ಭಟ್ಕಳ: ತಾಲೂಕಿನಲ್ಲಿ ಜನತೆ ಕೋವಿಡ್ ನಿಯಮ ಪಾಲನೆಯಲ್ಲಿ ನಿರ್ಲಕ್ಷ ತೋರುತ್ತಿರುವದನ್ನು ತಡೆಗಟ್ಟಲು ಸ್ವತಹ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಭಟ್ಕಳ ನಗರದಲ್ಲಿ ಸಂಚರಿಸಿ ಮಾಸ್ಕ್ ಹಾಕದೇ ವ್ಯಾಪಾರ ಮಾಡುವ ಅಂಗಡಿಕಾರರಿಗೆ ಹಾಗೂ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಗಿರಾಕಿಗಳಿಗೆ ಬಿಸಿ ಮುಟ್ಟಿಸಿದರು.

ಬೆಳಿಗ್ಗೆ ಮುಖ್ಯ ರಸ್ತೆಯಲ್ಲಿ ಹೊರಟ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ತಹಸೀಲ್ದಾರ್ ರವಿಚಂದ್ರ, ನಗರ ಠಾಣೆಯ ಇನ್ಸಪೆಕ್ಟರ್ ಪಿ.ಎಂ. ದಿವಾಕರ ಹಾಗೂ ಪುರಸಭಾ ಮುಖ್ಯಾಧಿಕಾರಿ ರಾಧಿಕಾ ಎಸ್. ಎನ್., ಸಿಬ್ಬಂದಿಗಳು ಪ್ರತಿ ಅಂಗಡಿಗಳನ್ನು ಪರಿಶೀಲಿಸಿ ಅಂಗಡಿಕಾರರೇ ಮಾಸ್ಕ ಹಾಕದೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಲ್ಲಿ 500 ರೂಪಾಯಿ ಹಾಗೂ ಗಿರಾಕಿಗಳು ಮಾಸ್ಕ ಹಾಕದೇ ಇದ್ದಲ್ಲಿ 100 ರೂಪಾಯಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಕೇಸು ಹೆಚ್ಚುತ್ತಲೇ ಇದ್ದು, ತಾಲೂಕಿನಲ್ಲಿಯೂ ಸಹ ಕೋವಿಡ್ ಪೀಡಿತರ ಸಂಖ್ಯೆ ಏರುತ್ತಿದೆ. ಜನತೆಗೆ ಮಾಸ್ಕ ಹಾಕಿ ಅಂತರ ಕಾಪಾಡಿಕೊಳ್ಳುವಂತೆ ತಿಳಿಸಿದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಜನರು ಸರಕಾರದ ಆದೇಶವನ್ನು ನಿರ್ಲಕ್ಷ ಮಾಡುತ್ತಾ ಬಂದಿದ್ದು ಇದು ಮಾರುಕಟ್ಟೆಯಲ್ಲಿ ಕೂಡಾ ಹೊರತಾಗಿಲ್ಲ. ಜನತೆಗೆ ಕಾನೂನಿನ ಅರಿವು ಮೂಡಿಸುವುದಕ್ಕೆ ಹಾಗೂ ಕೋವಿಡ್ ನಿಯಮ ಪಾಲಿಸುವಂತೆ ತಿಳಿಸುವುದಕ್ಕೆ ನಗರದ ಮಾರುಕಟ್ಟೆಯಲ್ಲಿ ಚೆಕಿಂಗ್ ಮಾಡುತ್ತಿದ್ದೇವೆ ಎಂದರು.

ಅಂಗಡಿ ಮಾಲೀಕನ ಗದ್ದಲ: ಮಾರಿಕಟ್ಟೆ ಸಮೀಪ ಇರುವ ಟೈಲರ್ ಅಂಗಡಿಯೊಂದರಲ್ಲಿ ಮಾಲೀಕನೇ ಮಾಸ್ಕ್ ಹಾಕದೇ ಇರುವುದನ್ನು ಗಮನಿಸಿದ ಅಧಿಕಾರಿಗಳು ಆತನಿಗೆ 500 ರೂಪಾಯಿ ದಂಡ ವಿಧಿಸಲು ಹೇಳಿದರು. ಇದರಿಂದ ಕೋಪಗೊಂಡ ಆತ ನಾವು ದಂಡ ಕೊಡಲು ಸಿದ್ಧರಿದ್ದೇವೆ ಆದರೆ ನೀವು ದಿನಾ ಬರುತ್ತೀರಾ, ಯಾವಾಗಲೋ ಒಮ್ಮೆ ಬಂದು ದಂಡ ಹಾಕಿದರೆ ನಿಮ್ಮ ಉದ್ದೇಶ ಈಡೇರುತ್ತದೆಯೇ ಎಂದು ವಾಗ್ವಾದಕ್ಕಿಳಿದ. ಆತನಿಗೆ ಬುದ್ಧಿ ಹೇಳಿದ ಅಧಿಕಾರಿಗಳು ಮುಂದೆ ತೆರಳಿದರು.

ಟಾಪ್ ನ್ಯೂಸ್

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.