ಅಜ್ಜನ ಜಾತ್ರೆಗೆ 72 ಕಿ.ಮೀ. ನಡೆದು ಬಂದ ಭಕ್ತರು
Team Udayavani, Jan 17, 2022, 10:46 PM IST
ಕೊಪ್ಪಳ: ನಾಡಿನ ಪ್ರಸಿದ್ಧ ಶ್ರೀಗವಿಸಿದ್ದೇಶ್ವರ ಜಾತ್ರೆಯು ಕೋವಿಡ್ ಉಲ½ಣದ ಹಿನ್ನೆಲೆಯಲ್ಲಿ ರದ್ದಾಗಿದ್ದರೂ ನಾಡಿನ ವಿವಿಧ ಭಾಗಗಳಿಂದ ಕೊಪ್ಪಳದ ಗವಿಮಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ಈ ಮಧ್ಯೆ ಗದಗ ಜಿಲ್ಲೆಯ ರೋಣದ ನಾಲ್ವರು ಭಕ್ತರು 72 ಕಿ.ಮೀ. ಪಾದಯಾತ್ರೆ ಮೂಲಕ ಶ್ರೀಮಠಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದು ಗಮನ ಸೆಳೆದಿದ್ದಾರೆ.
ರೋಣದ ವೀರೇಶ ಬಾಲೊಳ್ಳಿ, ಭೀಮನಗೌಡ್ರ ಲಿಂಗನಗೌಡ್ರ, ಕಿರಣ್ ಗುರುಬಸತ್ತಿನಮಠ, ಬಸಯ್ಯ ಗುರುಬಸತ್ತಿಮಠ ಅವರು 72 ಕಿ.ಮೀ. ಕಾಲ್ನಡಿಗೆಯಲ್ಲೇ ಗವಿಮಠಕ್ಕೆ ಆಗಮಿಸಿ ಭಕ್ತಿಯ ಸೇವೆ ಸಲ್ಲಿಸಿದರು. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ರೋಣದಿಂದ ಹೊರಟ ಇವರು ಗವಿಸಿದ್ದೇಶ್ವರ ಸ್ವಾಮಿಗಳ ನಾಮಸ್ಮರಣೆ ಮಾಡುತ್ತಲೇ ಪಾದಯಾತ್ರೆ ಆಗಮಿಸಿ ರವಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶ್ರೀಮಠಕ್ಕೆ ತಲುಪಿದರು. ದಾರಿಯುದ್ದಕ್ಕೂ ಶ್ರೀಗಳ ಸೇವೆ, ಸಮಾಜಮುಖೀಕಾರ್ಯ,ಧಾರ್ಮಿಕಕಾರ್ಯ ನೆನೆಯುತ್ತಾ ನಾಮಸ್ಮರಣೆ ಮಾಡುತ್ತಲೇ ಆಗಮಿಸಿ ಶ್ರೀಗಳ ದರ್ಶನ ಪಡೆದರಲ್ಲದೇ, ಕತೃ ಗದ್ದುಗೆಯ ದರ್ಶನ ಪಡೆದು ಸಂಕಲ್ಪ ಈಡೇರಿಸಿದರು. ಎರಡು ವರ್ಷಗಳಿಂದ ಜಗತ್ತಿಗೆ ಆವರಿಸಿರುವ ಕೊರೊನಾ ಸೋಂಕಿನಿಂದಾಗಿ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ.
ಕೊರೊನಾ ಅಬ್ಬರದ ಮಧ್ಯೆಯೂ ಶ್ರೀಮಠಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ಎತ್ತಿನ ಬಂಡೆಯಲ್ಲಿ, ಟ್ರಾÂಕ್ಟರ್, ಟಂಟಂ, ಆಟೋ ಸೇರಿ ವಿವಿಧ ವಾಹನಗಳಲ್ಲಿ ದವಸ, ಧಾನ್ಯದೊಂದಿಗೆ ಆಗಮಿಸಿ ಶ್ರೀಮಠಕ್ಕೆ ಅರ್ಪಿಸಿ ತಮ್ಮದೇ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಇದ್ದರೂ ಮಠಕ್ಕೆ ಆಗಮಿಸಿ ಭಕ್ತಿಯ ಸೇವೆ ಸಲ್ಲಿಸಿದ್ದರು. ಈ ಬಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ cಳದಿಂದಾಗಿ ಜಾತ್ರೆಯ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಿದೆ. ಆದರೆ ಧಾರ್ಮಿಕಕಾರ್ಯಕ್ರಮಗಳು ಮಠದಲ್ಲೇ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ. ಇದ್ಯಾವುದನ್ನು ಲೆಕ್ಕಿಸದೇ ಸದ್ಭಕ್ತರು ಮಠಕ್ಕೆ ಕಾಲ್ನಡಿಗೆಯ ಪಾದಯಾತ್ರೆ ಆಗಮಿಸಿ ತಮ್ಮದೇ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್