ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್
ಆಪ್ ಸಿಎಂ ಅಭ್ಯರ್ಥಿ ಮನ್ನ ಘೋಷಣೆ
Team Udayavani, Jan 18, 2022, 6:16 PM IST
ಪಂಜಾಬ್:ನಾನೊಬ್ಬ ಯೋಧ, ಪಂಜಾಬಿನ ಗತವೈಭವವನ್ನು ಮರಳಿ ಸ್ಥಾಪಿಸುವುದುದೇ ನನ್ನ ಗುರಿ ಎಂದು ಪಂಜಾಬ್ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿರುವ ಭಗವಂತ ಮಾನ್ ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂದು ಆಮ್ ಆದ್ಮಿ ಪಕ್ಷ ಜನತಾ ಸರ್ವೆ ನಡೆಸಿತ್ತು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಗವಂತ ಮಾನ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ಪಂಜಾಬ್ ಪುನರುತ್ಥಾನದ ಕನಸು ಬಿಚ್ಚಿಟ್ಟಿದ್ದಾರೆ.
ರಾಜಕೀಯ ಪ್ರವೇಶದ ಬಳಿಕ ನನ್ನ ಬದುಕೇ ಬದಲಾಗಿದೆ. ಈ ಹಿಂದೆ ನಾನು ಕಾಮಿಡಿ ಮಾಡುತ್ತಿದ್ದಾಗ ಜನ ನನ್ನತ್ತ ನಗೆ ಬೀರುತ್ತಿದ್ದರು. ಈಗ ನನ್ನತ್ತ ಭರವಸೆಯ ಕಣ್ಣುಗಳಿಂದ ನೋಡುತ್ತಿದ್ದಾರೆ. ನಮ್ಮ ರಕ್ಷಣೆ ಹೊಣೆ ನಿನ್ನದು ಎಂಬ ಭಾವ ಅವರ ನೋಟದಲ್ಲಿದೆ. ಭಗವಂತ ಸರ್ವ ರಕ್ಷಕ. ನಾನು ಕೇವಲ ಮಾಧ್ಯಮ ಮಾತ್ರ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಂಜಾಬ್ನ ಗತ ವೈಭವವನ್ನು ಮರಳಿ ಸ್ಥಾಪಿಸುವುದು ನನ್ನ ಗುರಿ. ನಾನೊಬ್ಬ ಯೋಧ. ಗುರಿ ಸಾಧನೆಯಲ್ಲಿ ಎಂದಿಗೂ ಹಿಂದೆ ಬೀಳುವುದಿಲ್ಲ ಎಂದು ಹೇಳಿದ್ದಾರೆ.ಸ್ಟ್ಯಾಂಡ್ ಅಪ್ ಕಾಮಿಡಿಯನ್ ಆಗಿ ಹೆಸರು ಮಾಡಿದ್ದ ಮಾನ್ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯ ಪಾದಾರ್ಪಣೆ ಮಾಡಿದ್ದರು. ಜನರಿಂದಲೇ ಸಿಎಂ ಅಭ್ಯರ್ಥಿಯಾಗಿ ಆಯ್ಕೆಗೊಂಡಿರುವ ಅವರಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈಗಾಗಲೇ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ