ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ


Team Udayavani, Jan 18, 2022, 7:51 PM IST

ವಕಾರ ಸಾಲು ಮಾರಾಟ ಪ್ರಕ್ರಿಯೆಗೆ ಚಾಲನೆ! ನಗರಸಭೆ ಕೋಟ್ಯಂತರ ರೂ. ಆಸ್ತಿ ಕೈತಪುವ ಆತಂಕ

ಗದಗ: ನಗರದ ಹೃದಯ ಭಾಗದಲ್ಲಿರುವ ವಕಾರ ಸಾಲು ವಿವಾದ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವ ಮುನ್ನವೇ ರಾಜ್ಯ ಸರಕಾರ ಭೂಬಾಡಿಗೆದಾರರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯ
ಸರಕಾರ ಸದ್ದಿಲ್ಲದೇ ವಕಾರ ಸಾಲು ಮಾರಾಟಕ್ಕೆ ಚಾಲನೆ ನೀಡಿರುವುದು ಇದೀಗ ಬೆಳಕಿಗೆ ಬಂದಿದ್ದು, ನಗರಸಭೆಯ ಕೋಟ್ಯಂತರ ಮೌಲ್ಯದ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲಾಗುವ ಆತಂಕವೂ ಎದುರಾಗಿದೆ.

ಇಲ್ಲಿನ ಕಾಟನ್‌ ಮಾರ್ಕೆಟ್‌ನಲ್ಲಿರುವ ಜಾಗೆಯನ್ನು ಕಾಯಂ ಆಗಿ ಭೂಬಾಡಿಗೆದಾರರಿಗೆ ಮಂಜೂರು ಮಾಡಲು ನಿಯಮಾವಳಿಯನ್ನು ಪರಿಶೀಲಿಸಿ, ತಮ್ಮ ಹಂತದಲ್ಲೇ ಬಗೆಹರಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಪೌರಾಡಳಿತ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಕೋರ್ಟ್‌ ಅಂಗಳದಲ್ಲಿರುವ ವಿಚಾರವನ್ನು ಅಧಿ ಕಾರಿಗಳ ಹಂತದಲ್ಲೇ ಬಗೆಹರಿಸಿಕೊಳ್ಳಲು ಮುಂದಾಗಿರುವ ಸರಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಏನಿದು ವಕಾರ ಸಾಲು ವಿವಾದ?: ನಗರದ ಭೂಮರಡ್ಡಿ ವೃತ್ತದಿಂದ ಕೆ.ಎಚ್‌. ಪಾಟೀಲ ವೃತ್ತ ಸುತ್ತಲಿನ ಅಕ್ಕಪಕ್ಕದಲ್ಲಿರುವ ನಗರಸಭೆಯ 54 ವಕಾರ ಸಾಲುಗಳನ್ನು 99 ವರ್ಷದ ಅವಧಿಗೆ ಖಾಸಗಿ ವ್ಯಕ್ತಗಳಿಗೆ ಲೀಸ್‌ ನೀಡಲಾಗಿತ್ತು. ಈ ಹಿಂದೆಯೇ ವಕಾರ ಸಾಲುಗಳ ಲೀಸ್‌ ಅವಧಿ ಮುಗಿದಿದ್ದರೂ, ಅ ಧಿಕಾರಿಗಳ ಜಾಣಕುರುಡುತನ, ಪ್ರಭಾವಿಗಳ ಒತ್ತಡ ಹಾಗೂ ಲೀಸ್‌ದಾರರು ನ್ಯಾಯಾಲಯದ ಮೊರೆ ಹೋಗಿದ್ದರಿಂದ ವಕಾರ ಸಾಲುಗಳ ತೆರವು ನನೆಗುದಿಗೆ ಬಿದ್ದಿತ್ತು. ಕೊನೆಗೆ 54 ವಕಾರ ಸಾಲುಗಳನ್ನು ನಗರಸಭೆ ಸ್ವಾಧೀನ ಪಡಿಸಿಕೊಳ್ಳುವಂತೆ 2014ರಲ್ಲಿ
ನ್ಯಾಯಾಲಯ ಅಂತಿಮ ತೀರ್ಪು ನೀಡಿತ್ತು.

ನಂತರವೂ ಅಧಿಕಾರಿಗಳು ನಿರುತ್ಸಾಹದಿಂದ ವಕಾರ ಸಾಲುಗಳ ತೆರವು ಕಾರ್ಯ ಮತ್ತೆ ನನೆಗುದಿಗೆ ಬಿದ್ದಿತ್ತು. ಕೊನೆಗೆ 13-7-2019ರಂದು ಜಿಲ್ಲಾಡಳಿತ ಹಾಗೂ ನಗರಸಭೆ ಅಧಿ ಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ವಕಾರ ಸಾಲುಗಳನ್ನು ತೆರವುಗೊಳಿಸಿದ್ದರು. ಸುಮಾರು ಮೂರು ದಿನಗಳ ಕಾಲ ನಡೆದ ತೆರವು ಕಾರ್ಯದಲ್ಲಿ 54 ವಕಾರ ಸಾಲುಗಳು ನೆಲಕ್ಕುರುಳಿದ್ದು
ಈಗ ಇತಿಹಾಸ. ಜಿಲ್ಲಾಡಳಿತ ಏಕಾಏಕಿ ತೆರವು ಕಾರ್ಯಾಚರಣೆ ಕೈಗೊಂಡಿದ್ದನ್ನು ಖಂಡಿಸಿ ಸೆಕ್ಷನ್‌ 144 ಮಧ್ಯೆಯೂ ವಕಾರ ಸಾಲುಗಳ ಭೂ ಬಾಡಿಗೆದಾರರು ಪ್ರತಿಭಟನೆಗೆ ಯತ್ನಿಸಿದ್ದರು. ಅದು ಫಲಿಸದಿದ್ದಾಗ ಹೈಕೋರ್ಟ್‌ ಮೊರೆ ಹೋಗಿದ್ದರು.

ದೊಡ್ಡ ಮಟ್ಟದಲ್ಲಿ ಲಾಬಿ?
ವಕಾರ ಸಾಲು ಜಾಗೆಯನ್ನು ಭೂಬಾಡಿಗೆದಾರರು, ಅನುಭೋಗದಾರರಿಗೆ ಮಂಜೂರು ಮಾಡುವಂತೆ ಕೋರಿ 26-9-2021ರಂದು ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರನ್ವಯ ಪರಿಶೀಲಿಸಿ ಮಂಜೂರು ಮಾಡುವಂತೆ ನಿರ್ದೇಶಿಸಿ ಕೇವಲ 72 ದಿನಗಳಲ್ಲಿ ಪೌರಾಡಳಿತ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ದೊಡ್ಡಮಟ್ಟದ ಲಾಭಿ ನಡೆದಿರುವ ಬಗ್ಗೆ ಅವಳಿ ನಗರದಲ್ಲಿ ಸಂಶಯದ ಮಾತುಗಳು ಕೇಳಿಬರುತ್ತಿವೆ.

ಪತ್ರದಲ್ಲೇನಿದೆ?
ಗದಗ-ಬೆಟಗೇರಿ ನಗರಸಭೆಯ ಕಾಟನ್‌ ಮಾರ್ಕೆಟ್‌ನಲ್ಲಿ 120 ವರ್ಷಗಳಿಂದ ಇದ್ದ ಅನುಭೋಗದಾರರು, ಭೂಬಾಡಿಗೆದಾರರಿಗೆ ಇರುವ ಜಾಗವನ್ನು ಕಾಯಂ ಆಗಿ ಮಂಜೂರು ಮಾಡಲು ದಿ ಕಾಟನ್‌ ಮಾರ್ಕೆಟ್‌ ವಕಾರ ಮಾಲೀಕರ ಸಂಘ ಕೋರಿದೆ. ಈ ಕುರಿತು ಕರ್ನಾಟಕ ಪುರಸಭೆಗಳ ಅಧಿ ನಿಯಮ 1964ರ ಮನವಿಗೆ ಅನ್ವಯವಾಗುವ ಸುತ್ತೋಲೆಗಳನ್ವಯ ನಿಯಮಾನುಸಾರ
ಪರಿಶೀಲಿಸಿ ತಮ್ಮ ಹಂತದಲ್ಲಿಯೇ ಅಗತ್ಯ ಕ್ರಮವಹಿಸುವಂತೆ ಕೋರಿದ್ದಾರೆ. ಈ ಬಗ್ಗೆ ಸರಕಾರದ ಮತ್ತು ಪೌರಾಡಳಿತ ನಿರ್ದೇಶನಾಲಯದ ಹಂತದಲ್ಲಿ ತೆಗೆದುಕೊಳ್ಳಬೇಕಾದ ಕ್ರಮವೇನಾದರೂ ಇದ್ದಲ್ಲಿ, ಶಿಫಾರಸು, ಸ್ಪಷ್ಟ ಹಾಗೂ ನಿರ್ದಿಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆ ಕೋರಿ ಪೌರಾಡಳಿತ ನಿರ್ದೇಶನಾಲಯದ ಸಹಾಯಕ ನಿರ್ದೇಶಕರು(ಅಭಿವೃದ್ಧಿ) ಕಳೆದ ಡಿ.7ರಂದು ಪತ್ರ ಬರೆದಿದ್ದು, ಇದೀಗ ಬೆಳಕಿಗೆ ಬಂದಿದೆ.

– ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.