ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ
Team Udayavani, Jan 18, 2022, 10:11 PM IST
ಗಜೇಂದ್ರಗಡ: ನಾಗೇಂದ್ರಗಡ ಭಾಗದ ಗುಡ್ಡದಲ್ಲಿನ ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ತ್ವರಿತಗತಿಯ ಕಾರ್ಯಚರಣೆಗೆ ಮುಂದಾಗಿ, ಚಿರತೆಯನ್ನು ಸೆರೆ ಹಿಡಿದು ಗ್ರಾಮಸ್ಥರಲ್ಲಿನ ಭೀತಿ ದೂರ ಮಾಡಲು ಮುಂದಾಗಬೇಕು ಎಂದು ಮಾಜಿ ಶಾಸಕ ಜಿ.ಎಸ್. ಪಾಟೀಲ ಒತ್ತಾಯಿಸಿದರು.
ನಾಗೇಂದ್ರಗಡದ ರೈತ ನಿಂಗಪ್ಪ ಹಂಡಿ ಯವರಿಗೆ ಸೇರಿದ ಆಕಳನ್ನು ಚಿರತೆ ಕೊಂದ ಹಿನ್ನೆಲೆಯಲ್ಲಿ ಪಶುವಿನ ಮಾಲೀಕರಿಗೆ ಸಹಾ ಯಧನ ನೀಡಿ ಮಾತನಾಡಿದ ಅವರು, ಈಗಾಗಲೇ ಕಳೆದೊಂದು ತಿಂಗಳಿಂದ ಈ ಭಾಗದಲ್ಲಿ ಚಿರತೆಯ ಭೀತಿ ಶುರುವಾಗಿದೆ. ಹಲವಾರು ಪ್ರಾಣಿಗಳ ಸಾವು-ನೋವು ಸಹ ಸಂಭವಿಸಿದೆ. ಆದರೂ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕೈಗೊಳ್ಳಬೇಕಾದ ಕ್ಷಿಪ್ರ ಕಾರ್ಯಾಚರಣೆ ನಡೆಸಿಲ್ಲ.
ಮನೆ ಮುಂದೆ ಕಟ್ಟಿರುವ ಮೆಕೆ, ಹಸು, ಕುದುರೆಗಳ ಮಾರಣಹೋಮವಾಗುತ್ತಿದೆ. ಸರ್ಕಾರ ಕೂಡಲೇ ರೈತ ಕುಟುಂಬಕ್ಕೆ ಪರಿಹಾರ ನೀಡಲು ಮುಂದಾಗಬೇಕು ಎಂದರು. ವೈಯಕ್ತಿಕವಾಗಿ 10 ಸಾವಿರ ರೂ. ಸಹಾಯಧನ ನೀಡಿದರು. ರೋಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೆಟ್ಟರ, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಭೀಮಪ್ಪ ಹಂಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ