ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಶ್ರೀಕೃಷ್ಣ ಮಠದಲ್ಲಿ ದ್ವೈವಾರ್ಷಿಕ ಪೂಜೆ 501ನೇ ವರ್ಷಕ್ಕೆ ಪಾದಾರ್ಪಣೆ

Team Udayavani, Jan 19, 2022, 6:22 AM IST

ಕೃಷ್ಣಾಪುರ ಶ್ರೀಗಳ ಚತುರ್ಥ ಪರ್ಯಾಯ ಆರಂಭ

ಉಡುಪಿ: ಲೋಕದಲ್ಲಿ ಚಳಿ ಇದ್ದರೆ ಉಡುಪಿ ನಗರದಲ್ಲಿ ಪರ್ಯಾಯೋತ್ಸವವು ಚಳಿಯ ಬಾಧೆಯನ್ನು ದೂರೀಕರಿಸಿತು.

ಶ್ರೀಕೃಷ್ಣ ಮಠದಲ್ಲಿ 251ನೇ ದ್ವೈವಾರ್ಷಿಕ ಪರ್ಯಾಯ ಮತ್ತು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ ಪೂಜೆ ಮಂಗಳವಾರ ಶುಭಾರಂಭಗೊಂಡಿತು.

ಪೀಠಾರೋಹಣಕ್ಕೆ ಮುನ್ನ ಮುಂಜಾವ ಕಾಪು ಬಳಿಯ ದಂಡತೀರ್ಥದಲ್ಲಿ ಸ್ನಾನ ಮಾಡಿ ಬಂದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಇತರ ಮಠಾಧೀಶರಿಗೆ ಗೌರವ ಸಲ್ಲಿಸಲಾಯಿತು.

ಜೋಡುಕಟ್ಟೆಯಿಂದ ಮೆರವಣಿಗೆಯಲ್ಲಿ ಆಗಮಿಸಿದ ಮಠಾಧೀಶರು ರಥಬೀದಿಯಲ್ಲಿ ಹಾಸಿದ ಶ್ವೇತವಸ್ತ್ರದ ಮೇಲೆ ನಡೆದು ಬಂದರು. ಮೊದಲು ಪರ್ಯಾಯ ಪೀಠವೇರುವ ಸ್ವಾಮಿಗಳು ಆಗಮಿಸಿದರೆ ಅವರ ಹಿಂದೆ ಆಶ್ರಮ ಜ್ಯೇಷ್ಠತೆಯಲ್ಲಿ ವಿವಿಧ ಸ್ವಾಮೀಜಿಯವರು ಸಾಗಿದರು. ಕನಕನ ಕಿಂಡಿಯ ಹೊರಗೆ ದೇವರ ದರ್ಶನ ಮಾಡಿ ಅಲ್ಲಿ ನವಗ್ರಹ ದಾನ ನೀಡಿದರು. ಅಲ್ಲಿಂದ ಚಂದ್ರಮೌಳೀಶ್ವರ, ಅನಂತೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಶ್ರೀಕೃಷ್ಣಮಠಕ್ಕೆ ಪ್ರವೇಶಿಸುವಾಗ ನಿರ್ಗಮನ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಗಮನ ಪೀಠಾಧೀಶರನ್ನು ಸ್ವಾಗತಿಸಿದರು.

ದೇವರ ದರ್ಶನದ ಬಳಿಕ ಮಧ್ವಾಚಾರ್ಯ ಕರಾರ್ಚಿತ ಅಕ್ಷಯಪಾತ್ರೆ, ಬೆಳ್ಳಿ ಸಟ್ಟುಗವನ್ನು ಹಸ್ತಾಂತರಿಸಲಾಯಿತು. ಬೆಳಗ್ಗೆ 5.55ಕ್ಕೆ ಪವಿತ್ರ ಸರ್ವಜ್ಞ ಪೀಠಾರೋಹಣ ನೆರವೇರಿತು. ಬಡಗು ಮಾಳಿಗೆಯಲ್ಲಿ ಅರಳು ಗದ್ದಿಗೆಯಲ್ಲಿ ಗಂಧಾ ದ್ಯುಪಚಾರ, ಪಟ್ಟಕಾಣಿಕೆ ಸಮರ್ಪಣೆ ನಡೆ ಯಿತು. 6.20ಕ್ಕೆ ದರ್ಬಾರ್‌ ಸಭೆ ನಡೆಯಿತು.

ಬೆಳಗ್ಗೆ 10 ಗಂಟೆಗೆ ನೂತನ ಪೀಠಾಧೀಶರು ನಾಲ್ಕನೇ ಪರ್ಯಾಯ ಅವಧಿಯ ಮೊದಲ ದಿನದ ಮಹಾಪೂಜೆ ನಡೆಸಿದರು. ಬಳಿಕ ಪಲ್ಲಪೂಜೆ, ಅನ್ನಸಂತರ್ಪಣೆ ನಡೆಯಿತು.

ಅದಮಾರು ಶ್ರೀಗಳಿಂದ ಪೂಜೆ
ಅದಮಾರು ಕಿರಿಯ ಶ್ರೀಪಾದರು ಸೋಮವಾರ ರಾತ್ರಿಯಿಂದ ಸರ್ವಜ್ಞ ಪೀಠದಲ್ಲಿ ಕುಳಿತು ಭಕ್ತರಿಗೆ ಪ್ರಸಾದ ವಿತರಿಸಿದರು. ಪ್ರಾತಃಕಾಲ ಶ್ರೀಕೃಷ್ಣನಿಗೆ ನೈರ್ಮಾಲ್ಯ ವಿಸರ್ಜನೆ ಪೂಜೆ ನಡೆಸಿದರು. ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಹಕರಿಸಿದರು.

ಪರ್ಯಾಯ ದರ್ಬಾರ್‌ ಸಭೆ ಮುಗಿಸಿದ ಬಳಿಕ ಕೃಷ್ಣಾಪುರ ಶ್ರೀಪಾದರು ಚತುರ್ಥ ಪರ್ಯಾಯದ ಮೊದಲ ದಿನದ ಮಹಾಪೂಜೆ ನಡೆಸಿದರು. ಸಂಜೆ ಪರ್ಯಾಯ ಪೀಠಸ್ಥರೇ ನಡೆಸುವ ಇನ್ನೊಂದು ಪೂಜೆ ಚಾಮರಸೇವೆಯನ್ನು ನೆರವೇರಿಸಿದರು.

ಸರ್ವಜ್ಞ ಪೀಠಾರೋಹಣ
ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದ ರನ್ನು ಸರ್ವಜ್ಞ ಪೀಠದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಕುಳ್ಳಿರಿಸಿ ಶುಭ ಕೋರಿದರು. ಇದಾದ ಬಳಿಕ ಅರಳು ಗದ್ದಿಗೆ ದರ್ಬಾರ್‌ನಲ್ಲಿ ಮತ್ತು ಪರ್ಯಾಯ ದರ್ಬಾರ್‌ ಸಭೆಯಲ್ಲಿ ನೂತನ, ನಿರ್ಗಮನ ಪೀಠಾಧೀಶರಲ್ಲದೆ ಪಲಿಮಾರು ಹಿರಿಯ, ಕಿರಿಯ, ಪೇಜಾವರ, ಸೋದೆ, ಕಾಣಿಯೂರು, ಶೀರೂರು ಶ್ರೀಪಾದರು ಪಾಲ್ಗೊಂಡರು. ಸಂಜೆ ನಿರಂತರ ಧಾರ್ಮಿಕ ಪ್ರವಚನವನ್ನು ಕೃಷ್ಣಾಪುರ ಮತ್ತು ಕಾಣಿಯೂರು ಮಠಾಧೀಶರು ಉದ್ಘಾಟಿಸಿದರು. ಕಾಣಿಯೂರು ಮಠಾಧೀಶರು ಪ್ರಥಮ ದಿನದ ಉಪನ್ಯಾಸ ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮ ಗಳಿಗೂ ಚಾಲನೆ ನೀಡಲಾಯಿತು.

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಬಡಾನಿಡಿಯೂರು: ಊಟ ಮಾಡುತ್ತಿರುವಾಗಲೇ ವ್ಯಕ್ತಿ ಸಾವು

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

Cricket Betting: ಆ್ಯಪ್‌ನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌; ಪ್ರಕರಣ ದಾಖಲು

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.