ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ: ಶಾಸಕ ಸಿದ್ದು ಸವದಿ
Team Udayavani, Jan 19, 2022, 5:21 PM IST
ರಬಕವಿ-ಬನಹಟ್ಟಿ : ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗುವಂತಾಗಬೇಕು ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು, ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.
ಅವರು ರಾಮಪುರ ನಗರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ , 2019-20 ನೇ ಸಾಲಿನ 8443 ನಬಾರ್ಡ್ 25ರ ಯೋಜನೆಯ ರೂ. 12.00 ಲಕ್ಷಗಳಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಶಾಲೆಯೇ ಜೀವಂತ ದೇಗುಲವಾಗದ್ದು, ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು ಎಂದು ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ. ಕ್ಷೇತ್ರದಲ್ಲಿನ ಎಲ್ಲ ಸರಕಾರಿ ಶಾಲೆಗಳಲ್ಲಿನ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ. ಜಿ. ಹಟ್ಟಿ, ನಗರಸಭಾ ಸದಸ್ಯರಾದ ವಿಜಯ ಕಲಾಲ, ಶ್ರೀಶೈಲ ಆಲಗೂರ, ಎಸ್ಡಿಎಂಸಿ ಅಧ್ಯಕ್ಷ ಖಲೀಲ ರಾಜನ್ನವರ, ಆಂಜುಮನ್ ಅಧ್ಯಕ್ಷ ಶಕೀಲ್ ನದಾಫ್, ಕ್ಷೇತ್ರ ಸಮನ್ವಯಾಧಿಕಾರಿ ವಿಜಯಕುಮಾರ ವಂದಾಲ, ಶಿಕ್ಷಣ ಸಂಯೋಜಕಾರದ ಶ್ರೀಶೈಲ ಬುರ್ಲಿ, ಡಿ. ಬಿ. ಜಾಯಗೊಂಡ, ಸಮೀನಾಕೌಸರ ಸೌದಾಗರ, ವೈಷ್ಣವಿ ಬಾಗೇವಾಡಿ, ಬಾಷಾಸಾಬ ಮುಲ್ಲಾ, ಅಲ್ಲಾವುದ್ದೀನ ತಾಂಬೋಳಿ, ನೂರ ಜರ್ಮನ, ಮುಖ್ಯಗುರುಗಳಾದ ಎಂ. ಎಚ್. ಲಾಡಖಾನ, ಎ. ಜಿ. ಕಾಖಂಡಕಿ, ಬಿ. ಡಿ. ನೇಮಗೌಡ, ಐ. ಎ. ಡಾಂಗೆ, ಎ. ಜಿ. ಕಡ್ಲಿ, ಎಂ. ಎಸ್. ಗಡೆನ್ನವರ, ಬಸು ಮುಧೋಳ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ