ಇಡಿ ದಾಳಿ: ಪಂಜಾಬ್ ಸಿಎಂ ಚೆನ್ನಿ ಸಂಬಂಧಿಯಿಂದ 10 ಕೋಟಿ ರೂ ನಗದು ವಶ
Team Udayavani, Jan 19, 2022, 4:56 PM IST
ಚಂಡೀಗಢ: ಚುನಾವಣಾ ಕಾವು ಏರಿರುವ ರಾಜ್ಯ ಪಂಜಾಬ್ ನಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ನಡೆಸಿದ ದಾಳಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಯೊಬ್ಬರಿಗೆ ಸೇರಿದ
ನಿವೇಶನಗಳಿಂದ 8 ಕೋಟಿ ರೂಪಾಯಿ ಸೇರಿದಂತೆ ಸುಮಾರು 10 ಕೋಟಿ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ರಾಜ್ಯದ ಹನ್ನೆರಡು ಸ್ಥಳಗಳಲ್ಲಿ ನಡೆಸಲಾದ ದಾಳಿಗಳು ಇಂದು ಮುಂಜಾನೆ ಪೂರ್ಣಗೊಂಡಿದ್ದು, ಸಂಸ್ಥೆಯು ಹಲವಾರು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದೆ.
ಕಾರ್ಯಾಚರಣೆಯ ವೇಳೆ ಸುಮಾರು 10 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಅಲಿಯಾಸ್ ಹನಿಗೆ ಸಂಬಂಧಿಸಿದ ನಿವೇಶನಗಳಿಂದ ಸುಮಾರು 8 ಕೋಟಿ ರೂಪಾಯಿ ಹಣ ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಸಂದೀಪ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಗೆ ಸಂಬಂಧಿಸಿದ ನಿವೇಶನದಿಂದ ಸುಮಾರು 2 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಕಳೆದ 24 ಗಂಟೆಗಳಲ್ಲಿ ದಾಳಿಗೆ ಒಳಗಾದವರ ಪ್ರಾಥಮಿಕ ವಿಚಾರಣೆ ನಡೆಸಲಾಗಿದೆ ಎಂದು ಅವರು ಹೇಳಿದರು.ಒಟ್ಟಾರೆಯಾಗಿ, ಚಂಡೀಗಢ, ಮೊಹಾಲಿ, ಲುಧಿಯಾನ ಮತ್ತು ಪಠಾಣ್ಕೋಟ್ ಸೇರಿದಂತೆ ರಾಜ್ಯದ12 ಕ್ಕೂ ಫೆಡರಲ್ ಏಜೆನ್ಸಿಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ.
ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಚನ್ನಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ”ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿಕರ ಮೇಲೆ ಆ ರಾಜ್ಯದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ದಾಳಿ ನಡೆಸಲಾಯಿತು ಮತ್ತು ಪಂಜಾಬ್ನಲ್ಲಿ ಇಡಿ ಅದೇ ಮಾದರಿಯನ್ನುಅನುಸರಿಸುತ್ತಿದೆ, ಒತ್ತಡ ಹೇರುತ್ತಿದೆ. ಇದು ರಾಜಕೀಯ ಪಿತೂರಿ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್