ನಾಲ್ಕು ತಿಂಗಳಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

ಹುಟ್ಟಿದ ಮಗುವಿಗೆ ನಂಜು, ಕಾಮಾಲೆ ಇರುವ ಶಿಶುವಿಗೆ ಇನ್ನು ಮುಂದೆ ಚಿಕಿತ್ಸೆ ಲಭಿಸಲಿದೆ.

Team Udayavani, Jan 19, 2022, 2:05 PM IST

ನಾಲ್ಕು ತಿಂಗಳಲ್ಲಿ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ

ಜಮಖಂಡಿ: ತಾಲೂಕಿಗೆ 24 ಗಂಟೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೇವೆ ಸಲ್ಲಿಸುವ ಜಮಖಂಡಿ ಸರಕಾರಿ ಆಸ್ಪತ್ರೆಗೆ ಹೊಸದಾಗಿ ಇನ್ನೊಂದು ಆಂಬ್ಯುಲೆನ್ಸ್‌ ನೀಡಲಾಗಿದ್ದು, ಇಂದಿನಿಂದ ಆರೋಗ್ಯ ಸೇವೆ ಆರಂಭಿಸಲಿದೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ನಗರದ ಉಪವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕ ಸೇವೆಗೆ ನೂತನ ಆಂಬ್ಯುಲೆನ್ಸ್‌ಗೆ ಪೂಜೆ ಸಲ್ಲಿಸಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಾಲ್ಕು ತಿಂಗಳಲ್ಲಿ ಹೊಸದಾಗಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಇದರಿಂದ ಈ ಭಾಗದ ಜನತೆಗೆ ಎಲ್ಲ ತರಹದ ಸರಕಾರಿ ಸೌಲಭ್ಯಗಳು ಲಭಿಸಿದಂತಾಗುತ್ತದೆ ಎಂದರು.

ತಾಲೂಕಿನ ಯಾವುದೇ ಭಾಗದಿಂದ ರೋಗಿಗಳು ಆರೋಗ್ಯ ತಪಾಸಣೆಗೆ ಬಂದರೆ ಅಂತಹವರಿಗೆ ಈ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯ ಸಿಗುವಂತೆ ಮಾಡಲಾಗಿದೆ. ರಕ್ತ ಭಂಡಾರ, ಡಯಾಲಾಸಿಸ್‌ ಮತ್ತು ನವಜಾತ ಶಿಶುಸ್ಥಿರಿಕರಣ ಘಟಕ ಕೂಡಾ ನಾಗರಿಕರಿಗೆ ಅನುಕೂಲವಾಗಲಿದ್ದು, ಹುಟ್ಟಿದ ಮಗುವಿಗೆ ನಂಜು, ಕಾಮಾಲೆ ಇರುವ ಶಿಶುವಿಗೆ ಇನ್ನು ಮುಂದೆ ಚಿಕಿತ್ಸೆ ಲಭಿಸಲಿದೆ. ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಬಿಪಿ, ಇಸಿಜಿ, ಸ್ತ್ರೀರೋಗಕ್ಕೆ ಸಂಬಂಧಿಸಿದ ಎಲ್ಲ ಉಪಕರಣಗಳು ಲಭ್ಯತೆ ಇರುವ ಮೂರು ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಿದೆ. ಇದರಿಂದ ಕ್ಷೇತ್ರದ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈಗಾಗಲೇ ಬಾಗಲಕೋಟೆಯಲ್ಲಿ ಪ್ರತಿ ನಿಮಿಷಕ್ಕೆ ಒಂದು ಸಾವಿರ ಲೀಟರ್‌ ಆಕ್ಸಿಜನ್‌ ತಯಾರಿಸುವ ಪ್ಲಾಂಟೇಶನ್‌ ಇದ್ದು, ಜಮಖಂಡಿ ಕ್ಷೇತ್ರದಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್‌ ಆಕ್ಸಿಜನ್‌ ಪ್ಲಾಂಟೇಶನ್‌ ಸಿದ್ಧವಾಗಿದೆ. ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿದ್ದು, ಅದನ್ನು ತಡೆಗಟ್ಟಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಕ್ತ ಭಂಡಾರ ಮತ್ತೆ ಪ್ರಾರಂಭಿಸಿ ಸೋಮವಾರದಿಂದ ಸಾರ್ವಜನಿಕರಿಗೆ ರಕ್ತ ಸಿಗುವ ಹಾಗೆ ವ್ಯವಸ್ಥೆ ಮಾಡಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್‌, ಐಸಿಯು ಹೀಗೆ ಎಲ್ಲ ರೀತಿಯ ಸೌಲಭ್ಯಗಳಿವೆ. ಜಮಖಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲ ತರಹದ ವ್ಯವಸ್ಥೆಗಳಿದ್ದು, ಉತ್ತಮ ಚಿಕಿತ್ಸೆ ನೀಡಿ ಶ್ರೇಷ್ಠ ಗುಣಮಟ್ಟದ ಆಸ್ಪತ್ರೆಯನ್ನಾಗಿಸಬೇಕೆಂದು ಸಲಹೆ ನೀಡಿದರು.

ತಾಲೂಕು ವೈದ್ಯಾಧಿ ಕಾರಿ ಡಾ| ಜಿ.ಎಸ್‌.ಗಲಗಲಿ, ಸರಕಾರಿ ಆಸ್ಪತ್ರೆ ಮುಖ್ಯವೈದ್ಯಾಧಿ ಕಾರಿ ಡಾ| ಟಿ.ಎಂ. ವೆಂಕಟರಾಜು, ಸ್ತ್ರೀ ರೋಗತಜ್ಞ ಡಾ| ಎಸ್‌.ಜಿ. ಜಮಖಂಡಿ ಇದ್ದರು.

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.