ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು
Team Udayavani, Jan 19, 2022, 9:05 PM IST
ನಂಜನಗೂಡು : ರಸ್ತೆ ತುಂಬೆಲ್ಲಾ ಹರಡಿದ್ದ ಹುರಳಿ ಸೊಪ್ಪುನಿಂದಾಗಿ ಗರ್ಭಿಣಿಯನ್ನು ಹೊತ್ತ ಅಂಬ್ಯುಲೆನ್ಸ್ ವಾಹನವೊಂದು ಸಿಲುಕಿಕೊಂಡು ಹುರುಳಿ ಸೊಪ್ಪಿನಿಂದ ಬಿಡಿಸಿಕೊಂಡು ಮುಂದೆ ಸಾಗಲು ಚಾಲಕ ಹರಸಾಹಸ ಪಡಬೇಕಾಯಿತು.
ಸಾರ್ವಜನಿಕ ರಸ್ತೆಯಲ್ಲಿ ಹುರಳಿ ಒಕ್ಕಣೆ ಮಾಡುವುದಕ್ಕೆ ಸರಕಾರ ಈ ಹಿಂದೆ ನಿರ್ಬಂಧ ಹೇರಿದ್ದರೂ ಅದು ಕೇವಲ ಪುಸ್ತಕದ ಬದನೆಕಾಯಿಯಂತಾಗಿದೆ. ಬುಧವಾರ ಗರ್ಭಿಣಿಯೊಬ್ಬಳನ್ನ ಹೊತ್ತುಸಾಗುತ್ತಿದ್ದ ಆಂಬ್ಯುಲೆನ್ಸ್ ಗೆ ಒಕ್ಕಣೆ ಮಾಡುತ್ತಿದ್ದ ಸೊಪ್ಪು ಸಿಲುಕಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಾಪುರ ಬಳಿ ಈ ಘಟನೆ ನಡೆದಿದೆ.
ತಾಲೂಕಿನ ತರದಲೆ ಗ್ರಾಮದ ಗರ್ಭಿಣಿಯನ್ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.ರಸ್ತೆಯಲ್ಲಿ ರೈತರು ಹುರಳಿ ಒಕ್ಕಣೆ ಮಾಡುತ್ತಿದ್ದಾಗ ಸೊಪ್ಪು ಆಂಬುಲೆನ್ಸ್ ಕೆಳಭಾಗಕ್ಕೆ ಸುತ್ತಿಕೊಂಡು ಮುಂದಕ್ಕೆ ಸಾಗಲಾರದೆ ನಿಲ್ಲುವಂತಾಯಿತು. ಬಳಿಕ ಸ್ಥಳೀಯರ ನೆರವಿನೊಂದಿಗೆ ಹುರಳಿ ಸೊಪ್ಪನ್ನು ಬಿಡಿಸಿ ನಂತರ ಮುಂದೆ ಸಾಗಲು ಕೆಲವು ಸಮಯ ವ್ಯರ್ಥವಾಗಿದೆ.
ರಸ್ತೆ ಮಧ್ಯದಲ್ಲಿ ಹುರಳಿ ಸೊಪ್ಪು ಹಾಕಿ ಒಕ್ಕಣೆ ಮಾಡಿದ ಇಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಿದೆ…
ಇದನ್ನೂ ಓದಿ : ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ