ಸರಕಾರಕ್ಕೆ ಅನಿರೀಕ್ಷಿತ ಸವಾಲು; ಮನೆಯಲ್ಲೇ ಇದ್ದಾರೆ ಶೇ. 90 ಪೀಡಿತರು!

ಔಷಧ ಕಿಟ್‌ ಒದಗಿಸುವ ಅನಿವಾರ್ಯ

Team Udayavani, Jan 20, 2022, 7:05 AM IST

ಸರಕಾರಕ್ಕೆ ಅನಿರೀಕ್ಷಿತ ಸವಾಲು; ಮನೆಯಲ್ಲೇ ಇದ್ದಾರೆ ಶೇ. 90 ಪೀಡಿತರು!

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೊನಾ 3ನೇ ಅಲೆ ತಜ್ಞರು ಮತ್ತು ಸರಕಾರದ ಲೆಕ್ಕಾಚಾರ ವನ್ನೇ ತಲೆಕೆಳಗಾಗಿಸಿದೆ. ಶೇ. 90ರಷ್ಟು ಸೋಂಕು ಪೀಡಿತರು ಹೋಂ ಐಸೋಲೇಶನ್‌ ಆಗಿರುವುದೇ ಇದಕ್ಕೆ ಕಾರಣ. ಆಸ್ಪತ್ರೆ, ಹಾಸಿಗೆ, ಆಮ್ಲಜನಕ, ಐಸಿಯು ಹೆಚ್ಚಳ ಮಾಡಿಕೊಂಡು ಸಜ್ಜಾಗಿದ್ದ ಸರಕಾರಕ್ಕೆ ಈಗ ಔಷಧ ಕಿಟ್‌ಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಸವಾಲು ಎದುರಾಗಿದೆ.

3ನೇ ಅಲೆಯು ಮಕ್ಕಳನ್ನು ಹೆಚ್ಚು ಕಾಡಲಿದೆ ಎಂದು ಅಂದಾಜಿಸಲಾಗಿತ್ತು. 2ನೇ ಅಲೆಯಲ್ಲಿ ಆಮ್ಲಜನಕ ಕೊರತೆ ಯಿಂದ ಸಂಭವಿಸಿದ್ದ ಸಾವುನೋವು ಪುನರಾವರ್ತನೆ ಆಗಬಾರದು ಎಂದು ಆ ಮೂಲಸೌಕರ್ಯ ಕಲ್ಪಿಸುವತ್ತ ಗಮನ ಕೇಂದ್ರೀಕರಿಸಲಾಗಿತ್ತು. ಆದರೆ 3ನೇ ಅಲೆ ಈ ಲೆಕ್ಕಾಚಾರವನ್ನು ಬುಡಮೇಲಾಗಿಸಿದೆ. ಸದ್ಯ ಸೋಂಕಿನ ಲಕ್ಷಣಗಳು ಸೌಮ್ಯ ರೂಪ ದಲ್ಲಿರುವ ಕಾರಣ ಸೋಂಕುಪೀಡಿತರನ್ನು ಹೋಂ ಐಸೋಲೇಶನ್‌ ಮಾಡಿ ಕಿಟ್‌ ವಿತರಿಸಬೇಕಿದ್ದು, ಇದು ಸರಕಾರಕ್ಕೆ ಸವಾಲಾಗಿದೆ.

ಕಿಟ್‌, ಸಲಹೆ ಮಾತ್ರ ಸಾಕು
ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು, ಆಸ್ಪತ್ರೆಗೆ ಬರುವ ಅಗತ್ಯವಿಲ್ಲ ಎಂದು ಸರಕಾರ ಹೇಳಿದೆ. ಆದರೆ ಹೋಂ ಐಸೋಲೇಶನ್‌ ಆಗಿರುವವರಿಗೆ ಸರಕಾರ ಔಷಧ ಕಿಟ್‌ ಮತ್ತು ವೈದ್ಯರ ಸಲಹೆ ಒದಗಿಸಬೇಕಾಗಿದೆ.

2.60 ಲಕ್ಷ ಕಿಟ್‌ ಅಗತ್ಯ
ಪ್ರಸ್ತುತ ರಾಜ್ಯದಲ್ಲಿ 2,67,650 ಸೋಂಕು ಪೀಡಿತರಿದ್ದು, ಸುಮಾರು 2.62 ಲಕ್ಷ ಮಂದಿ ಹೋಂ ಐಸೋಲೇಶನ್‌ ನಲ್ಲಿದ್ದಾರೆ. ಆಯಾ ಜಿಲ್ಲಾಡಳಿತಕ್ಕೆ ಔಷಧ ಕಿಟ್‌ ವಿತರಣೆಯ ಜವಾಬ್ದಾರಿಯನ್ನು ನೀಡಲಾಗಿದೆ. ಇದುವರೆಗೆ 55 ಸಾವಿರ ಕಿಟ್‌ ವಿತರಿಸಲಾಗಿದ್ದು, ಇನ್ನೂ 90 ಸಾವಿರ ಕಿಟ್‌ ಲಭ್ಯ ಇವೆ. ಮೊದಲ ಮತ್ತು 2ನೇ ಹಂತದ ನಗರಗಳಿಗೆ ಈ ಕಿಟ್‌ ತಲುಪಬಹುದು. ಆದರೆ ಗ್ರಾಮೀಣ ಭಾಗಗಳ ಮನೆ ಬಾಗಿಲಿಗೆ ಹೋಗುವುದು ಸದ್ಯ ಅನುಮಾನ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಶೀತ, ಜ್ವರದವರಿಗೂ ಸಲಹೆ ಅಗತ್ಯ
ಕೊರೊನಾದಿಂದ ಹೋಂ ಐಸೋಲೇಶನ್‌ನಲ್ಲಿ ಇರುವವರಿಗೆ ಔಷಧ ಕಿಟ್‌ ನೀಡಲು ಸರಕಾರ ಮುಂದಾಗಿದೆ. ಆದರೆ ಇತ್ತೀಚೆಗೆ ರಾಜ್ಯಾದ್ಯಂತ ಲಕ್ಷಾಂತರ ಮಂದಿ ಜ್ವರ, ಕೆಮ್ಮು, ನೆಗಡಿ, ಮೈಕೈ-ತಲೆನೋವು ಮತ್ತಿತರ ಸಮಸ್ಯೆಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆ ಯುತ್ತಿದ್ದಾರೆ. ಅವರಿಗೂ ವೈದ್ಯರ ಸಲಹೆ, ಔಷಧ ಅಗತ್ಯ ಇದೆ. ಈ ಬಗ್ಗೆಯೂ ಗಮನ ಹರಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಆಸ್ಪತ್ರೆಯಲ್ಲಿ ಬರೀ
4,795 ಮಂದಿ!
ರಾಜ್ಯದಲ್ಲಿ ಜ. 18ರ ವರೆಗೆ ಸರಕಾರಿ ಆಸ್ಪತ್ರೆ ಗಳಲ್ಲಿ ಕೊರೊನಾ ಸೋಂಕಿನಿಂದ 2,761 ಮಂದಿ ದಾಖಲಾಗಿದ್ದಾರೆ. ಅವರಲ್ಲಿ 1,610 ಮಂದಿ ಸಾಮಾನ್ಯ ಬೆಡ್‌, 871 ಮಂದಿ ಆಮ್ಲಜನಕ ಬೆಡ್‌, 180 ಮಂದಿ ಐಸಿಯು, 100 ಮಂದಿ ಐಸಿಯು ವೆಂಟಿಲೇಟರ್‌ ಬೆಡ್‌ನ‌ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ 2,034 ಸೋಂಕು ಪೀಡಿತರಿದ್ದು, ಇವರಲ್ಲಿ 1,841 ಮಂದಿ ಸಾಮಾನ್ಯ ಬೆಡ್‌, 64 ಮಂದಿ ಆಮ್ಲಜನಕ ಬೆಡ್‌, 117 ಮಂದಿ ಐಸಿಯು ಬೆಡ್‌, 12 ಮಂದಿ ಐಸಿಯು ವೆಂಟಿಲೇಟರ್‌ ಬೆಡ್‌ನ‌ಲ್ಲಿದ್ದಾರೆ.

ಕರ್ಫ್ಯೂ ತೆರವು ನಾಳೆ ನಿರ್ಧಾರ
ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರದ ಸಭೆಯಲ್ಲಿ ಸಂಪೂರ್ಣ ಚಿತ್ರಣ ಸಿಗಲಿದ್ದು, ಬಳಿಕ ತೀರ್ಮಾನಿಸಲಾಗುವುದು ಎಂದರು.

 

 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.