ನೈಟ್ ಕರ್ಫ್ಯೂ ಸಡಿಲಿಕೆ : ಇಕ್ಕಟ್ಟಿನಲ್ಲಿ ಸಿಎಂ,ಬೆಂಬಲಕ್ಕೆ ಅಶೋಕ್
ಶುಕ್ರವಾರದ ಸಭೆಯಲ್ಲಿ ನಿರ್ಧಾರ
Team Udayavani, Jan 20, 2022, 3:33 PM IST
ಬೆಂಗಳೂರು : ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಸಡಿಲಿಕೆ ವಿಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳದ ಮಧ್ಯೆಯೇ ಸಂಪುಟದ ಸದಸ್ಯರು ಹಾಗೂ ಸಂಸದರು ಕರ್ಫ್ಯೂ ಸಡಿಲಿಸುವಂತೆ ಸಿಎಂ ಮೇಲೆ ಒತ್ತಡ ಹಾಕಿದ್ದಾರೆ.
ಹೀಗಾಗಿ ಶುಕ್ರವಾರ ನಡೆಯುವ ಸಭೆಯಲ್ಲಿ ಸರಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಿದ್ದು, ಸೋಂಕು ನಿಯಂತ್ರಣದ ಜವಾಬ್ದಾರಿಯನ್ನು ಜಿಲ್ಲಾಡಳಿತದ ಹೆಗಲಿಗೆ ಏರಿಸುವ ಸಾಧ್ಯತೆ ಇದೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ವಾರಾಂತ್ಯದ ಕರ್ಫ್ಯೂ ಸಡಿಲಿಕೆ ಮಾಡುವಂತೆ ಸಿಎಂ ಮೇಲೆ ಒತ್ತಡ ಹೇರಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿ.ಟಿ.ರವಿ, ಪ್ರತಾಪ್ ಸಿಂಹ ಕೂಡಾ ಸರಕಾರದ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ವಪಕ್ಷೀಯರ ಟೀಕೆಯಿಂದ ಸಿಎಂ ಬೊಮ್ಮಾಯಿ ಬೇಸರಗೊಂಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಸಂದರ್ಭದಲ್ಲೂ ಬೊಮ್ಮಾಯಿ ಈ ವಿಚಾರ ಪ್ರಸ್ತಾಪಿಸಿದ್ದು, ತಜ್ಞರ ಸೂಚನೆಯಂತೆ ನಡೆದುಕೊಳ್ಳಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಬಲಕ್ಕೆ ಅಶೋಕ್
ಲಾಕ್ಡೌನ್ ವಿಚಾರದಲ್ಲಿ ಕಂದಾಯ ಸಚಿವ ಅಶೋಕ್ ಸಿಎಂ ಬೆಂಬಲಕ್ಕೆ ನಿಂತಿದ್ದಾರೆ. ಜೀವ, ಜೀವನದ ಪ್ರಶ್ನೆ ಬಂದಾಗ ಜೀವಕ್ಕೆ ಮೊದಲ ಆದ್ಯತೆ ನೀಡಬೇಕು. ಹೀಗಾಗಿ ಬಿಗಿ ನಿಯಮ ಸಡಿಲಿಕೆ ಮಾಡುವಾಗ ಹತ್ತು ಬಾರಿ ಯೋಚಿಸಬೇಕೆಂದು ಅಶೋಕ ಸಲಹೆ ನೀಡಿದ್ದಾರೆ.
ಜನರ ಜೀವನ ಉಳಿಸೋದು ಕೂಡ ಗಮನದಲ್ಲಿದೆ
ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ನಾಳೆ (ಶುಕ್ರವಾರ) ಕೋವಿಡ್, ಹೊಸ ಗೈಡ್ಲೈನ್ಸ್ ಬಗ್ಗೆ ಚರ್ಚೆಗೆ ಸಿಎಂ ನೇತೃತ್ವದಲ್ಲಿ 1ಗಂಟೆಗೆ ಸಭೆ ಕರೆದಿದ್ದು,ಕೋವಿಡ್ ತಜ್ಞರ ಸಮಿತಿ, ಸಚಿವರಾದ ಸುಧಾಕರ್, ಅಶ್ವಥ್ ನಾರಾಯಣ್, ಅರಗ ಮೊದಲಾದವರು ಭಾಗವಹಿಸುತ್ತಾರೆ.
ಈವರೆಗೆ ರಾಜಕೀಯವಾಗಿ ಮೂರು ಪಕ್ಷದವರು ವೈಯಕ್ತಿಕ ಹೇಳಿಕೆ ನೀಡಿದ್ದಾರೆ.ಸಂಘಸಂಸ್ಥೆಗಳು ಕೂಡ ಹೇಳಿಕೆ ನೀಡಿದಿವೆ.ಈ ನಡುವೆ ಕೇಂದ್ರ ಸರ್ಕಾರ ವಿದೇಶಿ ವಿಮಾನಯಾನ ರದ್ದು ಮಾಡಿದೆ ಎಂದರು.
ತಜ್ಞರು ವರದಿ ನೀಡಿರು ಬಗ್ಗೆಯೂ ಚರ್ಚೆ ಆಗಲಿದೆ.ಸೋಂಕು ಏರಿಕೆ ಆಗುತ್ತಾ ಇದೆ.ಬೆಂಗಳೂರು ನಗರದಲ್ಲಿ ಹೆಚ್ಚುತ್ತಿದ್ದು, ಒಮಿಕ್ರಾನ್ ಕೂಡ ಹೆಚ್ಚುತ್ತಿದೆ. ಸಚಿವ ಸುಧಾಕರ್ ಕೂಡ ಸೋಂಕು ಏರಿಕೆ ಬಗ್ಗೆ ಮಾತನಾಡಿದ್ದಾರೆ.
ಜೊತೆಯಲ್ಲಿ ಜನರ ಜೀವನ ಉಳಿಸೋದು ಕೂಡ ಗಮನದಲ್ಲಿದೆ, ಜೀವ, ಜೀವನ ಎರಡೂ ಗಮನದಲ್ಲಿಟ್ಟುಕೊಂಡು ಎಸ್ ಓ ಪಿ ಬಿಡುಗಡೆ ಮಾಡುತ್ತೇವೆ. ಬೀದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರ ವಿಚಾರವೂ ಗಮನದಲ್ಲಿದೆ. ನಾಳೆ ಮಧ್ಯಾಹ್ನ 2.30ರ ವೇಳೆಗೆ ನಿರ್ಧಾರ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ