ಶೌಚಾಲಯ, ನೀರಿನ ಅವ್ಯವಸ್ಥೆ: ಅಧಿಕಾರಿಗೆ ತರಾಟೆ

ಕೊರೊನಾ ಹಿನ್ನಲೆಯಲ್ಲಿ 80 ವಿದ್ಯಾರ್ಥಿಗಳು ಮಾತ್ರ ಬರುತ್ತಿದ್ದಾರೆ.

Team Udayavani, Jan 20, 2022, 6:15 PM IST

ಶೌಚಾಲಯ, ನೀರಿನ ಅವ್ಯವಸ್ಥೆ: ಅಧಿಕಾರಿಗೆ ತರಾಟೆ

ಕುಣಿಗಲ್‌: ಪಟ್ಟಣದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣಕ್ಕೆ ದಿಢೀರ್‌ ಭೇಟಿ ನೀಡಿದ ಪಿಕಾರ್ಡ್‌ ಬ್ಯಾಂಕ್‌ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್‌, ಅಲ್ಲಿನ ಶೌಚಾಲಯ, ಕುಡಿಯುವ ನೀರಿನ ಅವ್ಯವಸ್ಥೆಯನ್ನು ಕಂಡು ಸಾರಿಗೆ ನಿಯಂತ್ರಕ ರನ್ನು ತರಾಟೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಇಲ್ಲಿನ ಸಾರಿಗೆ ಬಸ್‌ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ ಡಿ.ಕೃಷ್ಣಕುಮಾರ್‌, ಶೌಚಾಲಯಗಳನ್ನು ಪರಿ ಶೀಲಿಸಿದರು. ಶೌಚಾಲಯಗಳ ಟೈಲ್ಸ್‌, ಟಾಯ್ಲೆಟ್‌ ಬೇಸಿನ್‌ ಹಾಗೂ ಬೇಸಿನ ಪೈಪ್‌ಗ್ಳು ಹೊಡೆದು ಗಬ್ಬೆದ್ದು ನಾರುತ್ತಾ, ಕಲುಷಿತ ನೀರು ಪ್ರಯಾಣಿಕರು ತಿರುಗಾಡುವ ನಿಲ್ದಾಣದ ಹೊರಗೆ ಹರಿಯುತ್ತಿತ್ತು. ಶೌಚಾಲ ಯದ ವಾಸನೆ ಹೊರಕ್ಕೂ ಬರುತ್ತಿತ್ತು. ಇದರಿಂದ ಆಕ್ರೋಶಗೊಂಡ ಕೃಷ್ಣಕುಮಾರ್‌, ಸಂಸ್ಥೆಯ ನಿಯಂತ್ರಕ ಬಿ.ಎಲ್‌.ಪಾತಲಿಂಗರೆಡ್ಡಿ ಅವರನ್ನು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಇದೇನು ಬಸ್‌ ನಿಲ್ದಾಣದ ಶೌಚಾಲಯವೋ, ಕೊಳಚೆ ಚರಂಡಿಯೋ, ನಿಮ್ಮ ಮನೆಯ ಶೌಚಾಲಯವನ್ನು ನೀವು ಹೀಗೆ ಇಟ್ಟು ಕೊಳ್ಳುತ್ತೀರ ಎಂದು ಕಾರವಾಗಿ ಪ್ರಶ್ನಿಸಿದರು.

ಕೊರೊನಾ ಸಂದರ್ಭದಲ್ಲಿ ಶೌಚಾಲಯ ಹಾಗೂ ನಿಲ್ದಾಣವನ್ನು ಸ್ವತ್ಛವಾಗಿ ಇಟ್ಟುಕೊಳ್ಳಬೇಕು, ನಿತ್ಯ ಸಾವಿರಾರು ಪ್ರಯಾಣಿಕರು ಇಲ್ಲಿಗೆ ಬಂದು ಪ್ರಯಾಣಿಸುತ್ತಾರೆ. ನಿಮ್ಮ ಬೇಜವಾಬ್ದಾರಿಯಿಂದ ಪ್ರಯಾಣಿಕ ರಿಗೆ ಸಾಂಕ್ರಾಮಿಕ ರೋಗ ಅಂಟುಕೊಳ್ಳಲಿದೆ. ಇದರ ಹೊಣೆಯನ್ನು ನೀವೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಲುಷಿತ ಕುಡಿಯುವ ನೀರು: ಬಳಿಕ ಶುದ್ಧ ಕುಡಿವ ನೀರಿನ ಘಟಕವನ್ನು ಕೃಷ್ಣಕುಮಾರ್‌ ಪರಿಶೀಲಿಸದರು. ನೆಪಕ್ಕೆ ಮಾತ್ರ ಶುದ್ಧ ನೀರಿನ ಘಟಕವಿದೆ. ಆದರೆ, ಶುದ್ಧಕುಡಿಯುವ ನೀರಿನ ಬದಲಿಗೆ ಕಲುಷಿತ ನೀರು ಬರುತ್ತಿದೆ. ಇದರ ಸುತ್ತಾ ಜಾಡು ಕಟ್ಟಿದೇ ಸ್ವಚ್ಛತೆ ಮಾಡಿಲ್ಲ. ಪ್ರಯಾಣಿಕರು ಈ ನೀರು ಕುಡಿದರೇ ಅವರ ಆರೋಗ್ಯ ಏನಾಗಬಹುದು ಎಂದು ಸಂಸ್ಥೆಯ ನಿಯಂತ್ರಕ ಬಿ.ಎಲ್‌. ಪಾತಲಿಂಗರೆಡ್ಡಿ ಅವರನ್ನು ಪ್ರಶ್ನಿಸಿದರು.

ಕೂಡಲೇ ಈ ಅವ್ಯವಸ್ಥೆಯನ್ನು ವಾರದೊಳಗಾಗಿ ಸರಿಪಡಿಸಬೇಕು. ಸಮಯಕ್ಕೆ ಸರಿಯಾಗಿ ಗ್ರಾಮೀಣ ಪ್ರದೇಶಕ್ಕೆ ಬಸ್‌ಗಳನ್ನು ಬಿಟ್ಟು ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮಕ್ಕೆ ಸಚಿವರಿಗೆ ದೂರು ನೀಡುವುದ್ದಾಗಿ ಎಚ್ಚರಿಕೆ ನೀಡಿದರು.

ಹಾಸ್ಟೆಲ್‌ ಪರಿಶೀಲನೆ: ಬಸ್‌ ನಿಲ್ದಾಣ ಪರಿಶೀಲಿಸಿದ ಬಳಿಕ ಪಟ್ಟಣದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಯಲಯಕ್ಕೆ ಭೇಟಿ ನೀಡಿದ ಕೃಷ್ಣಕುಮಾರ್‌, ಹಾಸ್ಟೆಲ್‌ ಸ್ವತ್ಛತೆ, ಅಡುಗೆ ಕೊಠಡಿ, ಗುಣಮಟ್ಟದ ಆಹಾರ ತಯಾರಿಕೆಯನ್ನು ಪರಿಶೀಲಿಸಿದರು. ಹಾಸ್ಟೆಲ್‌ನಲ್ಲಿ ಎಷ್ಟು ಜನ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಊಟ, ತಿಂಡಿ, ಏನೇನು ಕೊಡುತ್ತೀದ್ದೀರ ಎಂದು ಅಡಿಗೆ ತಯಾರಕರನ್ನು ಕೇಳಿದರು. 200 ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ದಾಖಲಾಗಿದ್ದಾರೆ. ಆದರೆ, ಕೊರೊನಾ ಹಿನ್ನಲೆಯಲ್ಲಿ 80 ವಿದ್ಯಾರ್ಥಿಗಳು ಮಾತ್ರ ಬರುತ್ತಿದ್ದಾರೆ. ಅವರಿಗೆ ಆಹಾರದ ಪಟ್ಟಿ ಪ್ರಕಾರ ಊಟ ನೀಡಲಾಗುತ್ತಿದೆ ಎಂದು ಅಡಿಗೆ ತಯಾರಕಿ ತಿಳಿಸಿದರು.

ಆಹಾರದ ಪಟ್ಟಿಯಲ್ಲಿ ಮಧ್ಯಾಹ್ನದ ಊಟಕ್ಕೆ ಮುದ್ದೆ ಕೊಡಲಾಗುವುದೆಂದು ಹಾಕಲಾಗಿದೆ. ಆದರೆ, ಮುದ್ದೆ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿ ಅನ್ನ ಸಾಂಬರ್‌ ಸವಿದರು. ಸಾಂಬರ್‌ ಚನ್ನಾಗಿದೆ. ಹೀಗೆ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ತಿಳಿಸಿದರು. ಸರ್ಕಾರ ನೀಡುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪಿಸುವಂತಹ ಕೆಲಸವನ್ನು ಇಲಾಖೆಯ ವಿಸ್ತರಣಾಧಿಕಾರಿ ಮಾಡುವಂತೆ ತಿಳಿಸಬೇಕೆಂದು ಸೂಚಿಸಿದರು.

ಕೊರೊನಾ ಬಗ್ಗೆ ಎಚ್ಚರವಹಿಸಿ: ಕೊರೊನಾ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕೈಗಳಿಗೆ ಸ್ಯಾನಿಟೈಸರ್‌ ಹಾಕಿಕೊಳ್ಳಬೇಕು ಎಂದು ಹೇಳಿದರು. ಪುರಸಭಾ ಸದಸ್ಯ ಆನಂದ್‌ಕುಮಾರ್‌, ಗ್ರಾಪಂ ಸದಸ್ಯ ಜೆಸಿಬಿ ನಾಗರಾಜು, ಮುಖಂಡ ತಿಮ್ಮೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.