ಭಟ್ಕಳ: 5 ಕೋಟಿ ರೂ.ಜೀವ ವಿಮೆ ಲಪಟಾಯಿಸಲು ನಕಲಿ ಮರಣ ದಾಖಲೆ ಸೃಷ್ಟಿ!


Team Udayavani, Jan 20, 2022, 6:52 PM IST

1-sadsad

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್‍ನಲ್ಲಿ ಈ ಹಿಂದೆ ನಕಲಿ ಅನಾಪೇಕ್ಷಣಾ ಪತ್ರ ನೀಡಿಕೆಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು ಜೀವಂತ ವ್ಯಕ್ತಿಯೇ ಮರಣ ಹೊಂದಿದ್ದಾನೆಂದು ನಕಲಿ ಮರಣ ದಾಖಲೆ ಸೃಷ್ಟಿಸಿದ್ದು ಆತನ ಹೆಸರಿನಲ್ಲಿದ್ದ 5 ಕೋಟಿ ರೂಪಾಯಿ ಜೀವ ವಿಮೆಯನ್ನು ಲಪಟಾಯಿಸಲು ಹವಣಿಸಿದಾಗ ಬೆಳಕಿಗೆ ಬಂದಿದೆ.

ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ಜನನ ಮರಣ ನೋಂದಣಿ ವಿಭಾಗದಲ್ಲಿ 2021ರ ಅಗಸ್ಟ್ 4ನೇ ತಾರೀಖಿನಂದು ಹಾಸನದ ಎಚ್.ಡಿ. ದೇವೇಗೌಡ ನಗರ ಎನ್ನುವ ವಿಳಾಸವುಳ್ಳ ಮಹಿಳೆ ಮೀನಾಕ್ಷಿ ಡಿ.ಎಚ್. ಎನ್ನುವವರು ಬಂದು ತನ್ನ ಮಗ ತೀರಿಕೊಂಡಿದ್ದು ಮರಣ ಪ್ರಮಾಣ ಪತ್ರವನ್ನು ನೀಡುವಂತೆ ಮನವಿ ಮಾಡಿದ್ದರು. ಆ ನಂತರ ಜನನ ಮರಣ ವಿಭಾಗದ ಸಿಬ್ಬಂದಿಗಳು ಕ್ರಮ ತೆಗೆದುಕೊಂಡಿದ್ದು ಸೆಪ್ಟಂಬರ್ 2021ರ 13ರಂದು ಹರ್ಷವರ್ಧನ್ ಎನ್ನುವ ವ್ಯಕ್ತಿಯ ಮರಣ ಪ್ರಮಾಣ ಪತ್ರವನ್ನು ನೀಡಲಾಗಿತ್ತು.

ಜಾಲಿಯ ಜಂಗನಗದ್ದೆಯಲ್ಲಿನ ವಿಳಾಸ ನೀಡಿದ್ದ ಮಹಿಳೆ ಇಲ್ಲಿನ ನಕಲಿ ಆಧಾರ್ ಕಾರ್ಡ ಕೂಡಾ ಹಾಜರುಪಡಿಸಿರುವುದು ಇದು ಹೇಗೆ ಸಾಧ್ಯವಾಯಿತು ಎನ್ನುವುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಹರ್ಷವರ್ಧನ್ ಎನ್ನುವವರು ಹಾಸನದವರಾಗಿದ್ದು ಉತ್ತಮ ವ್ಯವಹಾರ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಆತನ ಹೆಸರಿನಲ್ಲಿ 5 ಕೋಟಿ ವಿಮಾ ಮಾಡಿಸಲಾಗಿದ್ದು ವಿಮಾ ಹಣವನ್ನ ಲಪಟಾಯಿಸಲು ಜಾಲಿ ಪಟ್ಟಣ ಪಂಚಾಯತ್ ಸಿಬ್ಬಂದಿಯೋರ್ವರನ್ನು ಬಳಸಿಕೊಂಡು ನಕಲಿ ದಾಖಲೆ ಸೃಷ್ಟಿಸಲಾಗಿದೆ ಎನ್ನಲಾಗಿದೆ.

ಆತನ ತಾಯಿ ಎಂದು ಹೇಳಿಕೊಂಡು ಜಾಲಿಯ ಜಂಗನಗದ್ದೆಯ ವಿಳಾಸ ನೀಡಿದ ಮಹಿಳೆ ಯಾರು ಎನ್ನುವುದು ತಿಳಿದು ಬರಬೇಕಿದೆ. ಆಕೆಯು ಜಂಗನಗದ್ದೆಯ ವಿಳಾಸದ ದಾಖಲೆಗಳನ್ನು ನೀಡಿದ ನಂತರ ಜಾಲಿ ಪಟ್ಟಣ ಪಂಚಾಯತ್ ಆರೋಗ್ಯ ವಿಭಾಗದ ವತಿಯಿಂದ ಸ್ಥಳ ಪಂಚನಾಮೆ ಮಾಡಿ ಖಚಿತಪಡಿಸಿಕೊಂಡು ಮರಣ ದಾಖಲೆಯನ್ನು ನೀಡಲಾಗಿದ್ದು ಎಲ್ಲವೂ ನಕಲಿ ಎನ್ನುವುದು ತಿಳಿದು ಬಂದಿದೆ.

ವ್ಯಕ್ತಿಯು ಓರ್ವ ಉತ್ತಮ ವ್ಯವಹಾರಸ್ಥನಾಗಿದ್ದು ಆತನ ಹೆಸರಿನಲ್ಲಿರುವ ವಿಮಾ ಹಣವನ್ನು ಹೊಡೆಯುವುದಕ್ಕೆ ಇಂತಹ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮರಣ ಪ್ರಮಾಣ ಪತ್ರವನ್ನು ಪಡೆಯಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು ಈ ಕೃತ್ಯಕ್ಕೆ ಆರೋಗ್ಯ ವಿಭಾಗದ ಸಿಬ್ಬಂದಿಗಳ ಕೈವಾಡವಿರುವುದು ಕೂಡಾ ಬೆಳಕಿಗೆ ಬಂದಿದ್ದು ಇನ್ನಷ್ಟೇ ಸಂಪೂರ್ಣ ವಿಷಯ ತಿಳಿದು ಬರಬೇಕಿದೆ.

ಈ ಬಗ್ಗೆ ಜಾಲಿ ಪಟ್ಟಣ ಪಂಚಾಯತ್ ಹಿರಿಯ ಆರೋಗ್ಯ ನಿರೀಕ್ಷಕ ವಿನಾಯಕ ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ದೂರನ್ನು ಆಧರಿಸಿ ನಗರ ಠಾಣೆಯ ಇನ್ಸಪೆಕ್ಟರ್ ದಿವಾಕರ ಪಿ.ಎಂ. ಅವರು ಸಿಬ್ಬಂದಿಗಳೊಂದಿಗೆ ಜಾಲಿ ಪಟ್ಟಣ ಪಂಚಾಯತಕ್ಕೆ ತೆರಳಿ ಅಲ್ಲಿನ ಕಂಪ್ಯೂಟರ್, ಕಡತಗಳನ್ನು ವಶಕ್ಕೆ ಪಡೆದು ತನಿಖೆ ಆಂಭಿಸಿದ್ದಾರೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

5-sirsi

Sirsi: ಕರ್ನಾಟಕ ಜಾನಪದ ಪರಿಷತ್‌ನ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ವೆಂಕಟೇಶ ನಾಯ್ಕ ಆಯ್ಕೆ

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.