ಸವಲತ್ತು ಮನೆ ಬಾಗಿಲಿಗೆ: ರೈತರ ಪರವಾಗಿ ಕಂದಾಯ ಇಲಾಖೆ ಮಹತ್ವದ ನಿರ್ಧಾರ
Team Udayavani, Jan 20, 2022, 7:43 PM IST
ಬೆಂಗಳೂರು : ಕರ್ನಾಟಕ ಇತಿಹಾಸದಲ್ಲಿ ಮೊದಲಬಾರಿಗೆ 45-50 ಲಕ್ಷ ರೈತರ ಪರವಾಗಿ ಕಂದಾಯ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಸರ್ಕಾರದ ಸವಲತ್ತು ಮನೆಗೆ ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಗುರುವಾರ ತಿಳಿಸಿದ್ದಾರೆ.
ಈ ಕುರಿತು ಮಹತ್ವದ ಸಭೆಯಲ್ಲಿ ಸಿಎಂ, ಕಂದಾಯ ಸಚಿವರು ಒಳಗೊಂಡಂತೆ, ಎಲ್ಲ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಒಂದು ದಿನ ಯೋಜನೆಗಳನ್ನು ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಲಾಗುವುದು.ಮ್ಯುಟೇಷನ್ , ಪಹಣಿ , ಖಾತೆ ನೀಡಲು ಹೋಗಲಾಗುವುದು. ಕಂದಾಯ ದಾಖಲೆಗಳಲ್ಲಿ ಅವರ ಜಮೀನಿಗೆ ಸಂಬಂಧಿಸಿದಂತೆ ಮಾಹಿತಿ ಸಿಗಬೇಕು. ಹಾಗಾಗಿ ಮಾಹಿತಿ ಹಕ್ಕನ್ನ ರೈತರಿಗೆ ತಲುಪಿಸಲಾಗುವುದು. ಅವರ ಮನೆ ಬಾಗಿಲಿಗೆ ತಲುಪಿಸುತ್ತೇವೆ.ಕೋವಿಡ್ ಹಿನ್ನೆಲೆಯಲ್ಲಿ ಸಿಎಂ ಮತ್ತು ನಾನು ದಾವಣಗೆರೆಗೆ ಹೋಗಿ ತಲುಪಿಸುತ್ತೇವೆ ಎಂದರು.
ಇನಾಮ್ತಿ ಜಮೀನು ಲಕ್ಷಾಂತರ ಎಕರೆ ರಾಜರಿಗೆ ವಿದೇಯಕರಾಗಿದ್ದಾಗ ನೀಡಲಾಗಿತ್ತು.ಅವರಿಗೆ ಕಾನೂನಿನ ಅರಿವಿಲ್ಲದ ಕಾರಣ ಅವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು.ಬಡ ರೈತರು ಇನಾಮ್ತಿ ಜಮೀನಿನಲ್ಲಿ ಉಳುಮೆ ಮಾಡ್ತಿದ್ದಾರೆ, ಅವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೇಂದ್ರ ಸರ್ಕಾರದ ಅನುದಾನದಲ್ಲಿ ಐದು ಜಿಲ್ಲೆಗಳಲ್ಲಿ ಡ್ರೋನ್ ಸರ್ವೆ ಮಾಡಲಾಗುವುದು. ರಾಮನಗರದಲ್ಲಿ ಮಾಡುವ ಸಾಧ್ಯತೆ ಇದೆ. ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಸಮೀನನ್ನ ಸರ್ವೆ ಮಾಡಿ, ಡಿಜಿಟಲ್ ಮೂಲಕ ದಾಖಲು ಮಾಡಿ ಇಡಲಾಗುವುದು.287 ಕೋಟಿ ವೆಚ್ಚದಲ್ಲಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen drive case: ತಾರಕಕ್ಕೇರಿದ ಕಾಂಗ್ರೆಸ್-ಜೆಡಿಎಸ್ ಗುದ್ದಾಟ
Prajwal Revanna: ಪ್ರಜ್ವಲ್ ಪಾಸ್ಪೋರ್ಟ್ ರದ್ದತಿಗೆ ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ
Prajwal Revanna: ಶೀಘ್ರದಲ್ಲೇ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ?
Sasya Shyamala; ಘೋಷಿಸಿದ್ದು 50 ಲಕ್ಷ, ಕೊಟ್ಟಿದ್ದು 4.39 ಲಕ್ಷ, ನೆಟ್ಟಿದ್ದು 3.79 ಲಕ್ಷ
Contaminated water cases; ರಾಜ್ಯದೆಲ್ಲೆಡೆ ಕುಡಿಯುವ ನೀರಿನ ಪರೀಕ್ಷೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
IPL 2024 Qualifier 2: ಫೈನಲ್ಗೇರಲು ಹೈದ್ರಾಬಾದ್-ರಾಜಸ್ಥಾನ್ ಸೆಣಸು
Pen drive case: ತಾರಕಕ್ಕೇರಿದ ಕಾಂಗ್ರೆಸ್-ಜೆಡಿಎಸ್ ಗುದ್ದಾಟ
T20 World Cup: ಭಾರತ-ಪಾಕ್ ಪಂದ್ಯದ ಟಿಕೆಟ್ ಬೆಲೆ 16 ಲಕ್ಷ ರೂ.!
Prajwal Revanna: ಪ್ರಜ್ವಲ್ ಪಾಸ್ಪೋರ್ಟ್ ರದ್ದತಿಗೆ ಕೇಂದ್ರ ಪ್ರಕ್ರಿಯೆ ಆರಂಭ; ಜೋಷಿ
Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ