ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಾಗಲೇ ಎದ್ದು ಕುಳಿತ ವ್ಯಕ್ತಿ!
Team Udayavani, Jan 21, 2022, 7:08 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ವಯೋಸಹಜ ಅಸ್ವಸ್ಥತೆಯ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯನ್ನು ಅವರು ಇನ್ನು ಹೆಚ್ಚು ಸಮಯ ಬದುಕಲಾರರು ಎಂದು ವೈದ್ಯರು ಹೇಳಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕರೆ ದೊಯ್ಯುತ್ತಿದ್ದಾಗ ದಾರಿ ಮಧ್ಯೆ ಆ ವ್ಯಕ್ತಿ ಎದ್ದು ಕುಳಿತು ಕಣ್ಣು ತೆರೆದ ಘಟನೆ ಬುಧವಾರ ನಡೆದಿದೆ.
ಕಾಸರಗೋಡಿನ ಬದಿಯಡ್ಕ ಸಮೀಪದ ವಾಂತಿಚ್ಚಾಲಿನ ವಯೋ ವೃದ್ಧರನ್ನು ಚಿಕಿತ್ಸೆಗಾಗಿ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನು ಬುಧವಾರ ಡಿಸ್ಚಾರ್ಜ್ ಮಾಡಲಾಗಿತ್ತು. ವ್ಯಕ್ತಿ ಹೆಚ್ಚು ಸಮಯ ಬದುಕಲಾರರು ಎಂದು ವೈದ್ಯರು ಹೇಳಿದ್ದರಿಂದ ಮನೆಗೆ ತಲಪುವಷ್ಟರಲ್ಲಿ ಸಾವನ್ನಪ್ಪುತ್ತಾರೆ ಎಂದು ತಪ್ಪಾಗಿ ಗ್ರಹಿಸಿದ ಮನೆ ಮಂದಿ ಮಂಗಳೂರಿನಿಂದ ಹೊರಡುವಾಗ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುವಂತೆ ಕುಟುಂಬಸ್ಥರಿಗೆ ತಿಳಿಸಿದ್ದರು.
ಆದರೆ ಆ್ಯಂಬುಲೆನ್ಸ್ ಉಪ್ಪಳ ತಲಪುವಷ್ಟರಲ್ಲಿ ಅಸ್ವಸ್ಥ ರೋಗಿ ಬೆಡ್ನಿಂದ ಎದ್ದು ಕುಳಿತಿದ್ದಾರೆ. ಬಳಿಕ ಬದಿಯಡ್ಕ ತಲುಪಿ ಅಲ್ಲಿನ ಆಸ್ಪತ್ರೆಗೆ ಕೊಂಡೊಯ್ದು ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯುವಂತೆ ಸೂಚಿಸಿದ್ದರು. ಅದರಂತೆ ಇದೀಗ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿದ್ದು ಚೇತರಿಸುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್