ಕಿಮ್ಸ್‌ ಸೇರಿ 8 ಕೇಂದ್ರಗಳಲ್ಲಿ 24×7 ಒಪಿಡಿ

ಜಿಲ್ಲಾಸ್ಪತ್ರೆ, ಕಿಮ್ಸ್‌, ರೈಲ್ವೆ ಆಸ್ಪತ್ರೆಗಳಲ್ಲಿ ದಿನದ 24 ಗಂಟೆ ಸ್ವಾಬ್‌ ಸಂಗ್ರಹ ವ್ಯವಸ್ಥೆ ಮಾಡಿದೆ.

Team Udayavani, Jan 21, 2022, 6:01 PM IST

ಕಿಮ್ಸ್‌ ಸೇರಿ 8 ಕೇಂದ್ರಗಳಲ್ಲಿ 24×7 ಒಪಿಡಿ

ಧಾರವಾಡ: ಕೋವಿಡ್‌-19 ಪ್ರಕರಣ ಹೆಚ್ಚಳದಿಂದ ಕೋವಿಡ್‌ ಸೋಂಕಿತರ ಮತ್ತು ಶಂಕಿತರ ಪರೀಕ್ಷೆ, ಚಿಕಿತ್ಸೆಗೆ ಅನುಕೂಲವಾಗುವಂತೆ ದಿನದ 24 ಗಂಟೆಗಳ ಕಾಲವೂ ಸೇವೆ ನೀಡುವ ಹೊರರೋಗಿ ಚಿಕಿತ್ಸಾ (ಒಪಿಡಿ) ಕೌಂಟರ್‌ಗಳನ್ನು ಜಿಲ್ಲಾಸ್ಪತ್ರೆ, ಕಿಮ್ಸ್‌ ಸೇರಿದಂತೆ ಎಂಟು ಕೇಂದ್ರಗಳಲ್ಲಿ ಸೇವೆ ಆರಂಭಿಸಲಾಗಿದೆ ಎಂದು ಡಿಸಿ ನಿತೇಶ್‌ ಪಾಟೀಲ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್‌ ಲಕ್ಷಣ ಹೊಂದಿರುವ ಮತ್ತು ಲಕ್ಷಣ ಇಲ್ಲದಿರುವ ಸೋಂಕಿತರು ಕೋವಿಡ್‌ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವುದರಿಂದ ಸೋಂಕು ಇತರರಿಗೆ ಹರಡುವ, ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಅಂತಹವರ ಸಂಚಾರ ಕಡಿಮೆ ಮಾಡಲು, ಗಂಟಲು ದ್ರವ ಸಂಗ್ರಹ, ಫಿವರ್‌ ಕ್ಲಿನಿಕ್‌ ಹಾಗೂ ಒಪಿಡಿ ಘಟಕಗಳನ್ನು ವಿವಿಧ ಸ್ಥಳಗಳಲ್ಲಿ ವಿಕೇಂದ್ರೀಕರಿಸಿ ಆರಂಭಿಸಲಾಗಿದೆ. ಕೋವಿಡ್‌ ಸೋಂಕಿತರು, ಸೋಂಕಿನ ಲಕ್ಷಣ ಹೊಂದಿರುವ, ಲಕ್ಷಣ ಹೊಂದಿರದ ಸೋಂಕಿತರು ತಮಗೆ ಸಮೀಪದ ಕೇಂದ್ರಗಳಿಗೆ ಭೇಟಿ ನೀಡಿ ಚಿಕಿತ್ಸೆ, ಔಷಧ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

24 ಗಂಟೆ ತೆರೆದಿರುವ ಒಪಿಡಿ ಕೌಂಟರ್‌: ಕೋವಿಡ್‌ ಸೋಂಕಿತರು ಮತ್ತು ಶಂಕಿತರಿಗೆ ಚಿಕಿತ್ಸೆ ಹಾಗೂ ಔಷಧ ನೀಡಲು ದಿನದ 24 ಗಂಟೆ ಸೇವೆಗೆ ಲಭ್ಯವಿರುವ ಎಂಟು ಕೇಂದ್ರಗಳನ್ನು ಜಿಲ್ಲಾಡಳಿತ ಆರಂಭಿಸಿದೆ. ಜಿಲ್ಲಾಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್‌, ರೈಲ್ವೆ ಆಸ್ಪತ್ರೆ, ಚಿಟಗುಪ್ಪಿ, ಇಎಸ್‌ಐ ಆಸ್ಪತ್ರೆ ಮತ್ತು ಹುಬ್ಬಳ್ಳಿಯ ಅಂಜುಮನ್‌ ಹಾಸ್ಟೇಲ್‌, ಸಂಗೊಳ್ಳಿ ರಾಯಣ್ಣ ನಗರದ ಡಾ|ಬಿ.ಆರ್‌. ಅಂಬೇಡ್ಕರ್‌ ಸಮುದಾಯ ಭವನ, ಅಂಚಟಗೇರಿಯ ಮೊರಾರ್ಜಿ ದೇಸಾಯಿ ವಸತಿ ನಿಲಯಗಳಲ್ಲಿ ಸ್ಥಾಪಿಸಿರುವ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಹೊರ ರೋಗಿ ಚಿಕಿತ್ಸಾ (ಒಪಿಡಿ) ಕೌಂಟರ್‌ ತೆರೆಯಲಾಗಿದ್ದು, ಅಲ್ಲಿ ವೈದ್ಯರು ಆರೋಗ್ಯ ಸೇವೆ, ಔಷಧಗಳನ್ನು ನೀಡುತ್ತಿದ್ದಾರೆ.

24 ಗಂಟೆ ತೆರೆದಿರುವ ಫೀವರ್‌ ಕ್ಲಿನಿಕ್‌: ಸರಕಾರದ ಜಿಲ್ಲಾಸ್ಪತ್ರೆ, ಕಿಮ್ಸ್‌ ಆಸ್ಪತ್ರೆ, ಚಿಟಗುಪ್ಪಿ, ಇಎಸ್‌ಐ ಆಸ್ಪತ್ರೆ, ರೈಲ್ವೆ ಆಸ್ಪತ್ರೆ ಮತ್ತು ಎಸ್‌ಡಿಎಂ ಖಾಸಗಿ ಆಸ್ಪತ್ರೆಯಲ್ಲಿ 24 ಗಂಟೆ ಸೇವೆ ನೀಡುವ ಫೀವರ್‌ ಕ್ಲಿನಿಕ್‌ಗಳನ್ನು ತೆರೆಯಲಾಗಿದೆ. ಇಲ್ಲಿ ಸೋಂಕಿತರ ಸ್ವಾಬ್‌ ಸಂಗ್ರಹ ಮಾಡಿ ಪ್ರಾಥಮಿಕ ಚಿಕಿತ್ಸೆ, ಔಷಧ ನೀಡಲಾಗುತ್ತದೆ.

58 ಸ್ವಾಬ್‌ ಸಂಗ್ರಹ ಕೇಂದ್ರಗಳು: ಜಿಲ್ಲೆಯ 51 ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕಲಘಟಗಿ, ಕುಂದಗೋಳ, ನವಲಗುಂದ ತಾಲೂಕು ಆಸ್ಪತ್ರೆಗಳು ಹಾಗೂ ರೈಲ್ವೆ ಆಸ್ಪತ್ರೆಗಳಲ್ಲಿ ಮತ್ತು ಎಸ್‌ಡಿಎಂ ಖಾಸಗಿ ಆಸ್ಪತ್ರೆಯಲ್ಲಿ ಪ್ರತಿದಿನ ಬೆಳಿಗ್ಗೆ 10:00 ರಿಂದ ಸಂಜೆ 4:00 ಗಂಟೆವರೆಗೆ ಸ್ವಾಬ್‌ ಸಂಗ್ರಹ ಮಾಡಲಾಗುತ್ತದೆ. ಜಿಲ್ಲಾಸ್ಪತ್ರೆ, ಕಿಮ್ಸ್‌, ರೈಲ್ವೆ ಆಸ್ಪತ್ರೆಗಳಲ್ಲಿ ದಿನದ 24 ಗಂಟೆ ಸ್ವಾಬ್‌ ಸಂಗ್ರಹ ವ್ಯವಸ್ಥೆ ಮಾಡಿದೆ. ಒಟ್ಟು 58 ಸ್ಥಳಗಳಲ್ಲಿ ಸ್ವಾಬ್‌ ಸಂಗ್ರಹಿಸಲಾಗುತ್ತದೆ. ಇದರೊಂದಿಗೆ ಸ್ವಾಬ್‌ ಸಂಗ್ರಹಕ್ಕಾಗಿ 5 ಸಂಚಾರಿ ವಾಹನಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ತಾಲೂಕಿಗೆ ತಲಾ ಒಂದು ವಾಹನ ನೀಡಲಾಗಿದೆ.

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರ ಜತೆಗೆ ವಿವಿಧ ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದ್ದು, ಸೌಲಭ್ಯಗಳನ್ನು ನೀಡುತ್ತಿದೆ. ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡಬೇಕು. ಸೌಲಭ್ಯಗಳ ಸದುಪಯೋಗ ಪಡೆಯಬೇಕು ಎಂದು ಡಿಸಿ ನಿತೇಶ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

698 ಜನರಲ್ಲಿ ಕೊರೊನಾ ಸೋಂಕು ಪತ್ತೆ
ಧಾರವಾಡ: ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 698 ಜನರಲ್ಲಿ ಸೋಂಕು ಪತ್ತೆಯಾಗುವುದರ ಜತೆಗೆ ಗುರುವಾರ ಏಕಾಏಕಿ 800 ಜನ ಸೋಂಕಿತರು ಗುಣಮುಖರಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3787ಕ್ಕೆ ಇಳಿದಿದೆ. ಗುಣಮುಖರಾದವರ ಸಂಖ್ಯೆ 62,266 ಹಾಗೂ ಒಟ್ಟು ಪಾಸಿಟಿವ್‌ ಸೋಂಕಿತರ ಸಂಖ್ಯೆ 67,382ಕ್ಕೆ ಏರಿಕೆಯಾಗಿದೆ. ಈ ಪೈಕಿ 5 ಜನರಿಗೆ ಐಸಿಯುನಲ್ಲಿ ಮುಂದುವರಿಸಲಾಗಿದ್ದು, ಸೋಂಕಿತರ ಸಾವಿನ ಸಂಖ್ಯೆ 1327ಕ್ಕೆ ನಿಂತಿದೆ.

ಟಾಪ್ ನ್ಯೂಸ್

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.