ಐಎಎಸ್‌ ಡೆಪ್ಯೂಟೇಶನ್‌: ಕೇಂದ್ರ Vs ರಾಜ್ಯ


Team Udayavani, Jan 22, 2022, 6:35 AM IST

ಐಎಎಸ್‌ ಡೆಪ್ಯೂಟೇಶನ್‌: ಕೇಂದ್ರ Vs ರಾಜ್ಯ

ಐಎಎಸ್‌ ಅಧಿಕಾರಿಗಳ ಡೆಪ್ಯೂಟೇಶನ್‌ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಮತ್ತೊಮ್ಮೆ ವಿವಾದವೇರ್ಪಟ್ಟಿದೆ. ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳನ್ನು ದಿಲ್ಲಿಗೆ ಕರೆಸಿಕೊಳ್ಳುವಲ್ಲಿ ಕೇಂದ್ರ ಸರಕಾರಕ್ಕೇ ಹೆಚ್ಚಿನ ಅಧಿಕಾರ ಸಿಗುವ ಸಂಬಂಧ ಇರುವ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದೆ. ಇದು ರಾಜ್ಯ ಸರಕಾರಗಳ ವಿರೋಧಕ್ಕೆ ಕಾರಣವಾಗಿದೆ.

ಸದ್ಯ ಇರುವ ನಿಯಮವೇನು?
ಐಎಎಸ್‌(ಕೇಡರ್‌)ನಿಯಮ- 1954ರ ನಿಯಮ 6(1)ರಂತೆ, ಸಂಬಂಧಿತ ರಾಜ್ಯ ಸರಕಾರದ ಒಪ್ಪಿಗೆಯ ಮೇರೆಗೆ ಕೇಂದ್ರ ಸರಕಾರ ಐಎಎಸ್‌ ಅಧಿಕಾರಿಗಳನ್ನು, ಕೇಂದ್ರ ಸೇವೆಗೆ ಅಥವಾ ಇತರ ರಾಜ್ಯಗಳು, ಅಥವಾ ಒಂದು ಕಂಪೆನಿ ಅಥವಾ ಸಂಸ್ಥೆ ಅಥವಾ ಸಂಘಟನೆಯ ಸೇವೆಗೆ ನಿಯೋಜಿಸಬಹುದು. ಒಂದು ವೇಳೆ ರಾಜ್ಯಗಳು ಕಳುಹಿಸಲು ನಿರಾಕರಣೆ ಮಾಡಿದಲ್ಲಿ, ಆಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಚರ್ಚಿಸಿ ಇದನ್ನು ಬಗೆಹರಿಸಿಕೊಳ್ಳಬಹುದಾಗಿದೆ.  ಅಲ್ಲದೆ ಈಗ ಪ್ರತೀ ವರ್ಷವೂ ಕೇಂದ್ರ ಸರಕಾರ, ಕೇಂದ್ರ ಸೇವೆಗೆ ಬರಬಹುದಾದಂಥ ಅಧಿಕಾರಿಗಳ ಪಟ್ಟಿ ಮಾಡಿ ರಾಜ್ಯಗಳಿಗೆ ಕಳುಹಿಸುತ್ತದೆ. ಕೆಲವೊಮ್ಮೆ ರಾಜ್ಯಗಳು ಕಳುಹಿಸಲು ಒಪ್ಪುವುದಿಲ್ಲ. ಇಂಥ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಘರ್ಷವೇರ್ಪಡುತ್ತದೆ.

ಸದ್ಯ ಕೇಂದ್ರ ಸೇವೆಯಲ್ಲಿ ಎಷ್ಟು ಮಂದಿ ಅಧಿಕಾರಿಗಳಿದ್ದಾರೆ?
2021ರ ಜನವರಿ 1ರ ಪ್ರಕಾರ ದೇಶದಲ್ಲಿ ಒಟ್ಟು 5,200 ಐಎಎಸ್‌ ಅಧಿಕಾರಿಗಳಿದ್ದು, ಇವರಲ್ಲಿ 458 ಅಧಿಕಾರಿಗಳು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ.

ತಿದ್ದುಪಡಿ ನಿಯಮದಲ್ಲೇನಿದೆ?
ನಿಯಮ 6(1)ರಲ್ಲಿ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರಕಾರ, ರಾಜ್ಯಗಳಿಗೆ ಡಿ.20ರಂದು ಪತ್ರ ಬರೆದಿದೆ. ರಾಜ್ಯಗಳ ಕೇಡರ್‌ನಲ್ಲಿರುವ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕಳುಹಿಸುತ್ತಿಲ್ಲ. ಇದರಿಂದ ಕೇಂದ್ರ ಸೇವೆಯಲ್ಲಿ ಅಧಿಕಾರಿಗಳ ಕೊರತೆ ಕಂಡು ಬಂದಿದೆ. ಹೀಗಾಗಿ, ರಾಜ್ಯಗಳು ಅರ್ಹ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಸಜ್ಜಾಗುವಂತೆ ನೋಡಿಕೊಳ್ಳಬೇಕು. ಎಷ್ಟು ಮಂದಿ ಕೇಂದ್ರ ಸೇವೆಗೆ ಬರಬೇಕು ಎಂಬ ಬಗ್ಗೆ ರಾಜ್ಯ ಸರಕಾರಗಳ ಜತೆ ಚರ್ಚಿಸಿ ಕೇಂದ್ರ ಸರಕಾರವೇ ನಿರ್ಧರಿಸುತ್ತದೆ. ಹಾಗೆಯೇ, ಒಂದು ವೇಳೆ ರಾಜ್ಯಗಳ ಒಪ್ಪಿಗೆ ಇಲ್ಲದೇ ಹೋದರೆ, “ನಿರ್ದಿಷ್ಟ ಸಮಯದಲ್ಲಿ’ ಮಾಹಿತಿ ನೀಡಬೇಕು ಎಂಬ ಹೊಸ ಪದವನ್ನು ಸೇರಿಸಲಾಗಿದೆ.

ರಾಜ್ಯಗಳ ವಿರೋಧವೇಕೆ?
ಕೇಂದ್ರ ಸರಕಾರ ಹೊಸ ತಿದ್ದುಪಡಿಯಿಂದಾಗಿ ರಾಜ್ಯಗಳ ಅಧಿಕಾರಕ್ಕೆ ಕೊಕ್ಕೆ ಇಟ್ಟಂತಾಗುತ್ತದೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ ಒಡಿಶಾ, ಎನ್‌ಡಿಎ ರಾಜ್ಯವಾದ ಬಿಹಾರ ಮತ್ತು ಬಿಜೆಪಿ ರಾಜ್ಯ ಮಧ್ಯ ಪ್ರದೇಶ ಕೂಡ ಹೊಸ ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಿದೆ.

ಹಿಂದಿನ ವಿವಾದಗಳು
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಲ ಮುಖ್ಯ ಕಾರ್ಯದರ್ಶಿಯವರ ಕೊನೆಯ ಕೆಲಸದ ದಿನದಂದು, ಕೇಂದ್ರ ಸರಕಾರ ಕೇಂದ್ರ ಸೇವೆಗೆ ಬರುವಂತೆ ಸೂಚಿಸಿತ್ತು. ಆದರೆ ಅವರನ್ನು ಸಿಎಂ ಮಮತಾ ಬ್ಯಾನರ್ಜಿ ಬಿಡುಗಡೆ ಮಾಡಲಿಲ್ಲ. ಅಲ್ಲದೆ ತಮಿಳುನಾಡಿನಲ್ಲಿ ಜಯಲಲಿತಾ ಸಿಎಂ ಆಗಿದ್ದ ವೇಳೆ ಮೂವರು ಐಪಿಎಸ್‌ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ಕಳುಹಿಸಲು ಒಪ್ಪಿಗೆ ನೀಡಿರಲಿಲ್ಲ. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.