ದ.ಕ., ಉಡುಪಿ: ಕೋವಿಡ್ ದಿಂದ 13 ಮಕ್ಕಳು “ಅನಾಥ’!

ಬಿಟ್ಟು ಹೋದವರಿಗೆ ಪರಿಹಾರ ನೀಡಲು ಸಮಿತಿ

Team Udayavani, Jan 22, 2022, 7:20 AM IST

ದ.ಕ., ಉಡುಪಿ: ಕೋವಿಡ್ ದಿಂದ 13 ಮಕ್ಕಳು “ಅನಾಥ’!

ಮಂಗಳೂರು: ಕೊರೊನಾದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 13 ಮಂದಿ ಮಕ್ಕಳು ಅನಾಥರಾಗಿದ್ದಾರೆ.

ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿದ್ದರೆ ಅವರನ್ನು ಅನಾಥರೆಂದು ಗುರುತಿಸಲು ಸರಕಾರ ಸೂಚಿಸಿತ್ತು. ಒಂದು ವೇಳೆ ಅಂಥ ಮಕ್ಕಳಿಲ್ಲದಿದ್ದರೆ ಈ ಹಿಂದೆಯೇ ಒಬ್ಬರನ್ನು ಕಳೆದು ಕೊಂಡಿದ್ದು ಕೊರೊನಾ
ದಿಂದ ಮತ್ತೂಬ್ಬ ರನ್ನೂ ಕಳೆದು ಕೊಂಡ 18 ವರ್ಷ ದೊಳಗಿನವರನ್ನು ಗುರು ತಿಸಲು ಸೂಚಿಸಲಾಗಿತ್ತು.

302 ಏಕಪೋಷಕ ಮಕ್ಕಳು
ಹೆತ್ತವರ ಪೈಕಿ ಒಬ್ಬರನ್ನಷ್ಟೇ ಕಳೆದು ಕೊಂಡಿ ರುವವರನ್ನು ಏಕಪೋಷಕ ಮಕ್ಕಳೆಂದು ಗುರುತಿಸ ಲಾಗುತ್ತದೆ. ದ.ಕ.ದಲ್ಲಿ 172, ಉಡುಪಿಯಲ್ಲಿ 130 ಮಂದಿ ಏಕಪೋಷಕ ಮಕ್ಕಳಿದ್ದಾರೆ. ಅವರಿಗೆ ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಯೋಜನೆ ಇಲ್ಲ. ಈ ಹಿಂದೆಯೇ ಜಾರಿಯಲ್ಲಿರುವ ಪ್ರಾಯೋಜಕತ್ವ ಯೋಜನೆಯಡಿ ಸಹಾಯಧನ ದೊರೆಯುತ್ತದೆ.

ಇತರ 1,213 ಕುಟುಂಬಗಳಿಗೆ ಪರಿಹಾರ
18 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಕೋವಿಡ್‌ನಿಂದ ಮೃತಪಟ್ಟ ಇತರರ ಕುಟುಂಬಗಳಿಗೂ ಪರಿಹಾರ ನೀಡಲಾಗುತ್ತಿದ್ದು ದ.ಕ. ದಲ್ಲಿ ಜ.14ರ ವರೆಗೆ 1,213 ಮಂದಿಗೆ ಪರಿಹಾರ ನೀಡಲಾಗಿದೆ. ಎಪಿಎಲ್‌ ಮತ್ತು ಬಿಪಿಎಲ್‌ ಕುಟುಂಬಗಳಿಗೆ ಎನ್‌ಡಿಎಫ್ ಮಾರ್ಗಸೂಚಿಯಂತೆ ಕೇಂದ್ರ ಸರಕಾರದಿಂದ 50,000 ರೂ., ಬಿಪಿಎಲ್‌ ಕುಟುಂಬ ಗಳಿಗೆ ಹೆಚ್ಚುವರಿಯಾಗಿ 1 ಲ.ರೂ. ನೀಡಲಾಗುತ್ತಿದೆ.

ತಪ್ಪಿ ಹೋದವರ ಹೊಣೆ ಸಮಿತಿಗೆ
ಕೊರೊನಾದಿಂದಲೇ ಮೃತಪಟ್ಟಿದ್ದರೂ ಪ್ರಮಾಣಪತ್ರ ದೊರೆಯದೇ ಇರುವವರು, ಬೇರೆ ಜಿಲ್ಲೆಗೆ ಚಿಕಿತ್ಸೆಗಾಗಿ ತೆರಳಿ ಅಲ್ಲಿ ಮೃತಪಟ್ಟಿರುವ ಪ್ರಕರಣಗಳು, ಆರೋಗ್ಯ ಇಲಾಖೆಯ ಪಟ್ಟಿಯಲ್ಲಿ ನಮೂದಾಗದೇ ಇರುವವರು ಸೇರಿದಂತೆ ವಿವಿಧ ಗೊಂದಲಗಳಿಂದಾಗಿ ಅನೇಕ ಕುಟುಂಬಕ್ಕೆ ಪರಿಹಾರ ಪಡೆಯಲು ಅಡ್ಡಿಯಾಗಿದೆ. ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಗೊಂದಲಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದ.ಕ., ಉಡುಪಿಯಲ್ಲಿ ಇಂತಹ 500ಕ್ಕೂ ಅಧಿಕ ಪ್ರಕರಣಗಳಿವೆ.

ಸೌಲಭ್ಯಗಳೇನು?
ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿಎಂ ಕೇರ್‌ ಯೋಜನೆಯಡಿ ಪ್ರತೀ ತಿಂಗಳು 3,500 ರೂ.ಗಳನ್ನು 18 ವರ್ಷದ ವರೆಗೆ ಮಕ್ಕಳ ಖಾತೆಗೆ ಜಮೆ ಮಾಡಲಾಗುತ್ತದೆ. ಎಸೆಸೆಲ್ಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, 21 ವರ್ಷ ತುಂಬಿದಾಗ 1 ಲ.ರೂ., 23 ವರ್ಷಗಳಾದಾಗ 10 ಲ.ರೂ. ನೀಡಲಾಗುತ್ತದೆ. ಉನ್ನತ ಶಿಕ್ಷಣಕ್ಕೂ ಸಹಾಯ ಒದಗಿಸಲಾಗುತ್ತದೆ.

ಅನಾಥರಿವರು
ದ.ಕ., ಉಡುಪಿಯಲ್ಲಿ ಎರಡನೇ ವರ್ಗಕ್ಕೆ ಸೇರಿದ ಮಕ್ಕಳನ್ನು ಅನಾಥರೆಂದು ಗುರುತಿಸಲಾಗಿದೆ. ದ.ಕ.ದಲ್ಲಿ 6 ವರ್ಷದ ಇಬ್ಬರು, 8 ಮತ್ತು 9 ವರ್ಷದ ತಲಾ ಒಬ್ಬರು ಹಾಗೂ 17 ವರ್ಷದ ಮೂವರು ಸೇರಿದಂತೆ 10 ಮಂದಿ ಅನಾಥರಿದ್ದಾರೆ. ಮೂವರು ಹೆಣ್ಣು, 7 ಗಂಡು ಮಕ್ಕಳು.

ಉಡುಪಿ ಜಿಲ್ಲೆಯಲ್ಲಿ 14 ವರ್ಷದ ಹುಡುಗಿ ಮತ್ತು ಹುಡುಗ ಹಾಗೂ 17 ವರ್ಷದ ಹುಡುಗಿಯನ್ನು ಗುರುತಿಸಲಾಗಿದೆ. ಬಹುತೇಕ ಎಲ್ಲರೂ ಸಂಬಂಧಿಕರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ.

ಪಾಸಿಟಿವ್‌ ದಾಖಲೆಯೂ ಸಾಕು
ಮೃತಪಟ್ಟ ಪ್ರತಿಯೋರ್ವರ ಕುಟುಂಬಕ್ಕೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾದಿಂದ ಮೃತಪಟ್ಟಿರುವ ಬಗ್ಗೆ ಮರಣಪತ್ರ ಇಲ್ಲವೆಂಬ ಕಾರಣಕ್ಕೆ ಪರಿಹಾರ ವಂಚಿತರಾಗಿರುವವರು ಪಾಸಿಟಿವ್‌ ಆಗಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಹರಿಗೆ ಪರಿಹಾರ ದೊರಕಿಸಿಕೊಡಲಾಗುವುದು.
– ಡಾ| ರಾಜೇಂದ್ರ ಕೆ.ವಿ. / ಕೂರ್ಮಾ ರಾವ್‌, ದ.ಕ., ಉಡುಪಿ ಜಿಲ್ಲಾಧಿಕಾರಿಗಳು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.