ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ


Team Udayavani, Jan 22, 2022, 5:20 AM IST

ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣಕ್ಕೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್‌ ಸಚಿವಾಲಯ ಅಂತಿಮ ಒಪ್ಪಿಗೆ ನೀಡಿದೆ.

ಮಂಗಳೂರು ಹೊರವಲಯದ ಗಂಜೀಮಠದಲ್ಲಿ 62.77 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಯೋಜನೆ ಶೇ. 50 ಕೇಂದ್ರ ಸರಕಾರ ಮತ್ತು ಉಳಿದ ಶೇ. 50 ಭಾಗವನ್ನು ಕೆಐಎಡಿಬಿ ಹೂಡಿಕೆಯೊಂದಿಗೆ ಅನುಷ್ಠಾನಗೊಳ್ಳಲಿದೆ.

ಇದರಂತೆ ಒಟ್ಟು ಯೋಜನಾ ಮೊತ್ತದ‌ಲ್ಲಿ ಕೇಂದ್ರ ಸರಕಾರ 31.38 ಕೋ.ರೂ. ಹಾಗೂ ಕೆಐಎಡಿಬಿ 31.38 ಕೋ.ರೂ. ಹೂಡಿಕೆ ಮಾಡಲಿವೆ. ಕೇಂದ್ರದ ಶೇ. 50 ಪಾಲು ಹಣ ಬಿಡುಗಡೆಗೆ ಅಂತಿಮ ಆದೇಶ ನೀಡಲಾಗಿದೆ. ಒಟ್ಟು ಮೊತ್ತದಲ್ಲಿ 29.82 ಕೋ.ರೂ. ಮೂಲಸೌಕರ್ಯಗಳಿಗೆ ಹಾಗೂ 30.95 ಕೋ.ರೂ. ಇತರ ಸೌಲಭ್ಯಗಳ ನಿರ್ಮಾಣಕ್ಕೆ ಮೀಸಲಿರಿಸಲಾಗಿದೆ.

ದೇಶದಲ್ಲಿ ಬಹುತೇಕ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಹೊರ ದೇಶಗಳಿಂದಲೇ ಆಮದು ಮಾಡಿಕೊಳ್ಳಬೇಕಾಗಿದೆ. ಇದನ್ನು ನಿವಾರಿಸುವುದಕ್ಕಾಗಿ ದೇಶದ ವಿವಿಧೆಡೆ ಪ್ಲಾಸ್ಟಿಕ್‌ ಪಾರ್ಕ್‌ಗಳ ಸ್ಥಾಪನೆಗೆ ಕೇಂದ್ರದ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್‌ ಸಚಿವಾಲಯವು ಮುಂದಾಗಿತ್ತು. ಅದರಂತೆ ಮಂಗಳೂರಿನಲ್ಲೂ ಪ್ಲಾಸ್ಟಿಕ್‌ ಪಾರ್ಕ್‌ ಯೋಜನೆಗೆ ಸಚಿವಾಲಯದಿಂದ ತಾತ್ವಿಕ ಅನುಮೋದನೆ ಈ ಹಿಂದೆಯೇ ಲಭಿಸಿದ್ದು ಅಂತಿಮ ಅನುಮೋದನೆ ಬಾಕಿಯುಳಿದಿತ್ತು.

ಈಗ ಅಂತಿಮ ಅನುಮೋದನೆ ದೊರೆಯು ವುದರೊಂದಿಗೆ ಕಳೆದ ಹಲವು ವರ್ಷಗಳಿಂದ ನೆನೆಗುದಿಯಲ್ಲಿದ್ದ ಬಹುನಿರೀಕ್ಷಿತ “ಪ್ಲಾಸ್ಟಿಕ್‌ ಪಾರ್ಕ್‌’ ಯೋಜನೆ ಸಾಕಾರಕ್ಕೆ ಚಾಲನೆ ದೊರೆತಂತಾಗಿದೆ.

ಪ್ಲಾಸ್ಟಿಕ್‌ ತ್ಯಾಜ್ಯದ
ಸಮರ್ಪಕ ವಿಲೇವಾರಿ
ಎಂಆರ್‌ಪಿಎಲ್‌ನಿಂದ ಪಾಲಿ ಪ್ರೊಪಲಿನ್‌ ಘಟಕ ಆರಂಭವಾಗುತ್ತಿ ದ್ದಂತೆಯೇ ಕರಾವಳಿಯಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ಬೇಡಿಕೆ ಗರಿಗೆದರಿತ್ತು. ಪಾರ್ಕ್‌ಗೆ ಸ್ಥಾಪಿಸುವಂತೆ ಕೆನರಾ ಪ್ಲಾಸ್ಟಿಕ್‌ ಮ್ಯಾನುಫ್ಯಾಕ್ಚರರ್ಸ್‌ ಆಂಡ್‌ ಟ್ರೇಡರ್ಸ್‌ ಅಸೋಸಿಯೇಶನ್‌ ವತಿಯಿಂದಲೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪಾಲಿಪ್ರೊಪಲಿನ್‌ ಘಟಕದ ತ್ಯಾಜ್ಯವನ್ನು ಪ್ಲಾಸ್ಟಿಕ್‌ ಪಾರ್ಕ್‌ನ ಕಚ್ಚಾ ವಸ್ತುವಾಗಿ ಬಳಕೆ ಮಾಡಬಹುದಾಗಿದೆ. ಪ್ಲಾಸ್ಟಿಕ್‌ ಪಾರ್ಕ್‌ ಯೋಜನೆಯಲ್ಲಿ ಪ್ಲಾಸ್ಟಿಕ್‌ ತಯಾರಿಕೆಯ ಜತೆಗೆ, ಪ್ಲಾಸ್ಟಿಕ್‌ನ ಮರುಬಳಕೆ ತಂತ್ರಜ್ಞಾನಕ್ಕೂ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಲಾಗಿದೆ. ಇದರಿಂದ ಪ್ಲಾಸ್ಟಿಕ್‌ ತ್ಯಾಜ್ಯದ ಸಮರ್ಪಕ ವಿಲೇವಾರಿ ಆಗಲಿದ್ದು, ಇನ್ನೊಂದೆಡೆ ದೇಶದಲ್ಲಿ ಬೇಡಿಕೆ ಇರುವ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತಯಾರಿಸಲು ಸಾಧ್ಯವಾಗಲಿದೆ.

ನಳಿನ್‌ ಅಭಿನಂದನೆ
ಪ್ಲಾಸ್ಟಿಕ್‌ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಕೇಂದ್ರದ ರಾಸಾಯನಿಕ ಖಾತೆ ಸಚಿವ ಭಗವಂತ್‌ ಕೂಬಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.