ಡಿಸಿಸಿ ಬ್ಯಾಂಕ್ನಿಂದ ಬಡ್ಡಿ ರಹಿತ ಸಾಲ ವಿತರಣೆ: ಹೇರೂರ
Team Udayavani, Jan 22, 2022, 10:38 AM IST
ವಾಡಿ: ಸಾಲ ಸೌಲಭ್ಯ ಪಡೆದ ಸಣ್ಣ ರೈ„ತರು ಸಕಾಲಕ್ಕೆ ಹಣ ಮರುಪಾವತಿಸಿದರೆ ಹೆಚ್ಚಿನ ಮೊತ್ತದ ಸಾಲ ಪಡೆಯಬಹುದು. ರೈತರ ಪ್ರಾಮಾಣಿಕತೆ ಗಮನಿಸಿ ಕುರಿ ಸಾಕಾಣಿಕೆ, ನೀರಾವರಿ ಬೇಸಾಯಕ್ಕೆ ಮತ್ತು ಟ್ರ್ಯಾಕ್ಟರ್ ಖರೀದಿಗೂ ಸಾಲ ನೀಡುವ ಆಲೋಚನೆಯಿದೆ ಎಂದು ಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಬಸವರಾಜ ಪಾಟೀಲ ಹೇರೂರ ಹೇಳಿದರು.
ಹಳಕರ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 120 ರೈತರಿಗೆ ಬಡ್ಡಿ ರಹಿತ ಸಾಲದ ಚೆಕ್ ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಸಣ್ಣ ರೈತರ ಕೃಷಿ ಚಟುವಟಿಕೆಗೆ ಆರ್ಥಿಕ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ಬಡ್ಡಿ ರಹಿತ ಸಹಾಯ ಧನ ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯೊಳಗೆ ಮರುಪಾವತಿ ಮಾಡಬೇಕು. ಸರ್ಕಾರ ಸಾಲ ಮನ್ನಾ ಮಾಡುತ್ತದೆ ಎನ್ನುವ ನಿರೀಕ್ಷೆಯಲ್ಲಿ ಹಣ ಮರಳಿಸದಿದ್ದರೆ ಹೆಚ್ಚಿನ ಸಾಲ ಸೌಲಭ್ಯದಿಂದ ವಂಚಿತರಾಗಬೇಕಾಗುತ್ತದೆ ಎಂದರು.
ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ರೈತರ ಮಧ್ಯೆ ಕೆಲಸ ಮಾಡಲು ಕ್ರಿಯಾಶೀಲ ವಾಗಿರಬೇಕು. ಬ್ಯಾಂಕ್ ಸಿಬ್ಬಂದಿ ಸಾಲ ಸೌಲಭ್ಯದಿಂದ ವಂಚಿತರಾದ ರೈತರನ್ನು ಗುರುತಿಸಿ ನೆರವಾಗಬೇಕು. ಹೆಚ್ಚು ರೈತರನ್ನು ಬ್ಯಾಂಕ್ ಸದಸ್ಯರನ್ನಾಗಿ ಮಾಡಿಕೊಳ್ಳಬೇಕು. ಶಾಸಕ ಪ್ರಿಯಾಂಕ್ ಖರ್ಗೆ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ ಎಂದು ಹೇಳಿದರು.
ಎಆರ್ಸಿಎಸ್ ಅಕಾರಿ ರವೀಂದ್ರ ಸೇಡಂ, ಕಾಂಗ್ರೆಸ್ ಹಿರಿಯ ಮುಖಂಡ ಜಗದೀಶ ಸಿಂಧೆ, ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಮಲ್ಲಣ್ಣ ಸಾಹು ಸಂಗಶೆಟ್ಟಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಓಂಕಾರೇಶ್ವರ, ಹಳಕರ್ಟಿ ಪಿಕೆಪಿಎಸ್ನ ಆಡಳಿತಾಕಾರಿ ವಿಶ್ವನಾಥ ಸ್ವಾಮಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈರಣ್ಣ ಪಿ.ಗೊಬ್ಬೂರ, ಗ್ರಾಪಂ ಅಧ್ಯಕ್ಷ ಸೋಮು ಚವ್ಹಾಣ, ಮುಖಂಡರಾದ ಸಿದ್ಧು ಮುಗುಟಿ, ಗೋವಿಂದ ಜಾಧವ, ರಾಘವೇಂದ್ರ ಅಲ್ಲಿಪುರ ಹಾಗೂ ರೈತರು ಪಾಲ್ಗೊಂಡಿದ್ದರು. ಇದೇ ವೇಳೆ ಒಟ್ಟು 120 ರೈತರಿಗೆ ಬಡ್ಡಿ ರಹಿತ ಸಾಲದ ಚೆಕ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ