ಆಹಾರ ಧ್ಯಾನ ಕಿಟ್ಗಾಗಿ ದಿಢೀರ್ ಪ್ರತಿಭಟನೆ
Team Udayavani, Jan 22, 2022, 12:23 PM IST
ಲಿಂಗಸುಗೂರು: ಪುಡ್ ಕಿಟ್ ಸಮರ್ಪಕವಾಗಿ ಹಂಚಿಕೆ ಮಾಡಿಲ್ಲವೆಂದು ಆರೋಪಿಸಿ ಎಸ್ಡಿಎಂಸಿ ಅಧ್ಯಕ್ಷ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಿಢೀರ್ ಮುಷ್ಕರ ನಡೆಸಿದ ಘಟನೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ನಡೆದಿದೆ.
ಕಳೆದ ಮಾರ್ಚ್ ತಿಂಗಳ ಕೋವಿಡ್ ಸಂದರ್ಭದಲ್ಲಿ ಬಿಸಿಯೂಟ ಬಂದ್ ಮಾಡಿ ಅದರ ಬದಲು ವಿದ್ಯಾರ್ಥಿಗಳಿಗೆ ಪುಡ್ ಕಿಟ್ ವಿತರಣೆ ಮಾಡುವ ವ್ಯವಸ್ಥೆಯನ್ನು ಸರ್ಕಾರ ಜಾರಿ ಮಾಡಿತ್ತು. ಆ ಸಂದರ್ಭದಲ್ಲಿ ಈ ಶಾಲೆಯಲ್ಲಿ ಮುಖ್ಯಶಿಕ್ಷಕರು ಸರ್ಕಾರದಿಂದ ಮಂಜೂರಾದ ಪ್ರಮಾಣದಲ್ಲಿ ಪುಡ್ ಕಿಟ್ ವಿತರಣೆ ಮಾಡಿಲ್ಲ. ನಿಂಗಪ್ಪ ಪೂಜಾರಿ ಇಲ್ಲಿಗೆ ಉಪಪ್ರಾಚಾರ್ಯ ಅಧಿಕಾರ ವಹಿಸಿಕೊಂಡ ದಿನದಿಂದ ಈವರಿಗೂ ಶಾಲೆಯಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಉದ್ಭವಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ ಎಂದು ಆರೋಪಿಸಿ ಎಸ್ ಡಿಎಂಸಿ ಅಧ್ಯಕ್ಷ ಮೌನೇಶ ಕರಡಕಲ್ ವಿದ್ಯಾರ್ಥಿಗಳೊಂದಿಗೆ ಮುಷ್ಕರ ನಡೆಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿ ಸಿಪಿಐ ಮಹಾಂತೇಶ ಸಜ್ಜನ್, ಯಾವುದೇ ಪ್ರತಿಭಟನೆ ಮಾಡಬೇಕಾದರೆ ಇಲಾಖೆ ಅನುಮತಿ ಪಡೆಯಬೇಕು. ಶಾಲೆ ಸಮಸ್ಯೆಗಳನ್ನು ಮುಖ್ಯಶಿಕ್ಷಕರು ಅಥವಾ ಶಿಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಹೇಳಿ ತರಗತಿಗೆ ವಾಪಸ್ ಕಳುಹಿಸಿದರು.
ಕೋವಿಡ್ ಸಂದರ್ಭದಲ್ಲಿ ಆಹಾರ ಹಂಚಿಕೆ ಮಾಡಲು ಇಬ್ಬರು ಶಿಕ್ಷಕರಿಗೆ ಜವಾಬ್ದಾರಿ ವಹಿಸಲಾಗಿತ್ತು. ಮಕ್ಕಳ ಆಹಾರ ಧಾನ್ಯ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಅಗತ್ಯತೆ ನನಗಿಲ್ಲ ಎಂದು ಮುಖ್ಯಶಿಕ್ಷಕ ನಿಂಗಪ್ಪ ಪೂಜಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ