ಮೋದಿ ಅಭಿಮಾನಿಗಳಿಂದ ಮಂತ್ರಾಲಯಕ್ಕೆ ಪಾದಯಾತ್ರೆ
Team Udayavani, Jan 22, 2022, 1:34 PM IST
ಮಸ್ಕಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ಪ್ರಾಪ್ತಿ ಹಾಗೂ ಕುಡಚಿ ಶಾಸಕ ಪಿ.ರಾಜೀವ್, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರಿಗೆ ಉತ್ತಮ ಸ್ಥಾನ-ಮಾನ ದೊರೆಯಲಿ ಎಂದು ಹರಕೆ ಹೊತ್ತು ಮಾರಲದಿನ್ನಿ ತಾಂಡಾದ ಯುವಕ ನಾಗರಾಜ ಪವಾರ್ ಮಂತ್ರಾಲಯಕ್ಕೆ ಬರಿಗಾಲಲ್ಲಿ ಪಾದಯಾತ್ರೆ ನಡೆಸಿದರು.
ಪಟ್ಟಣದ ಬ್ರಮಾರಂಭ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಆವರಣದ ಮುಂಭಾಗದಲ್ಲಿ ಪಾದಯಾತ್ರೆ ಆರಂಭಿಸಿದರು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಪಾದಯಾತ್ರೆಗೆ ಚಾಲನೆ ನೀಡಿದರು.
ನಂತರ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ರಾಷ್ಟ್ರ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವ ದೋಷ ದೂರವಾಗಬೇಕು ಎಂದು ಮಸ್ಕಿ ಪಟ್ಟಣದಿಂದ 125 ಕಿ.ಮೀ. ಪಾದಯಾತ್ರೆಯನ್ನು ಕ್ಷೇತ್ರದ ಮಾರಲದಿನ್ನಿಯ ಬಿಜೆಪಿ ಕಾರ್ಯಕರ್ತರು ಹಾಗೂ ನನ್ನ ಅಭಿಮಾನಿಯಾದ ನಾಗರಾಜ ಅವರು ಬರಿಗಾಗಲಿನಲ್ಲಿ ಪ್ರಧಾನಿ ಮೋದಿ ಆರೋಗ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಇದರಿಂದ ದೇಶದ ಪ್ರಧಾನಿಯವರಿಗೆ ಅವರ ಅಭಿಮಾನಿಗಳ ಹಾರೈಕೆಯಂತೆ ದೇವರು ಆರೋಗ್ಯ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿ ಮಾಡಲಿ ಎಂದರು.
ಮುಖಂಡರಾದ ಮಹಾದೇವಪ್ಪ ಗೌಡ ಪಾಟೀಲ್, ಡಾ| ಶಿವಶರಣಪ್ಪ ಇತ್ಲಿ, ಅಂದಾನಪ್ಪ ಗುಂಡಳ್ಳಿ, ಬಸನಗೌಡ ಪೊಲೀಸ್ ಪಾಟೀಲ್, ಪುರಸಭೆ ಸದಸ್ಯರಾದ ರವಿಗೌಡ ಪಾಟೀಲ್, ಮೌನೇಶ ಮುರಾರಿ, ಚೇತನ ಪಾಟೀಲ್, ಶರಣಯ್ಯ ಸೊಪ್ಪಮಠ, ಮಸೂದ್ ಪಾಶ, ರಿìಸ್ವಾಮಿ, ಗೌಸ ಪಾಶ, ಬಸವರಾಜ ಬುಕ್ಕಣ್ಣ ಇದ್ದರು.
ಪ್ರಧಾನಿ ಮೋದಿಯವರ ಆರೋಗ್ಯ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿಗಾಗಿ ಪಾದಯಾತ್ರೆ ಕೈಗೊಂಡಿರುವ ಅಭಿಮಾನಿಗಳಿಗೆ ಪ್ರತಾಪಗೌಡ ಪಾಟೀಲ್ ಫೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಅವರು ಸನ್ಮಾನಿಸಿ ಕಿರು ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಫೌಂಡೇಶನ್ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ