ಮುಖ್ಯಾಧಿಕಾರಿ ಕಾರ್ಯವೈಖರಿಗೆ ಸದಸ್ಯರು ಗರಂ


Team Udayavani, Jan 22, 2022, 2:33 PM IST

18officers

ಮುದಗಲ್ಲ: ಇಲ್ಲಿನ ಪುರಸಭೆ ಮುಖ್ಯಾಧಿಕಾರಿಗಳು ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಕೇವಲ ದಾಖಲೆಗಳಿಗೆ ಮಾತ್ರ ಮುಖ್ಯಾಧಿಕಾರಿಗಳು ಎನ್ನುವಂತಾಗಿದೆ ಎಂದು ಕೆಲವು ಸದಸ್ಯರು ಆಕ್ಷೇಪಿಸಿದರು.

ಇದರ ಜತೆಗೆ ಕಾರ್ಯವೈಖರಿ ಸುಧಾರಿಸಿಕೊಳ್ಳದಿದ್ದರೆ ಮುಂದಿನ ಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಡಿ.ಎಸ್‌.ಹೂಲಗೇರಿ ಮುಖ್ಯಾಧಿಕಾರಿಗಳನ್ನು ಎಚ್ಚರಿಸಿದರು.

ಪುರಸಭೆ ಸಭಾ ಭವನದಲ್ಲಿ ಪುರಸಭೆ ಅಧ್ಯಕ್ಷೆ ಅಮೀನಾಬೇಗಂ ಮಹಿಬೂಬ ಬಾರಿಗಿಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮುಖ್ಯಾಧಿಕಾರಿ ಮರಿಲಿಂಗಪ್ಪ ಸ್ವಾಗತಿಸಿ, ವಿಷಯಗಳನ್ನು ವ್ಯವಸ್ಥಾಪಕ ಮಲ್ಲಿಕಾರ್ಜುನ ಮಂಡಿಸಿದರು.

ಹಿಂದಿನ ನಡವಳಿಕೆ ಹಾಗೂ ಲೆಕ್ಕಪತ್ರಕ್ಕೆ ಅನುಮೋದನೆಗೆ ವಿಷಯ ಓದಿರುವುದನ್ನು ಸದಸ್ಯರಾದ ಎಸ್‌. ಆರ್‌. ರಸೂಲ ಮತ್ತು ಗುಂಡಪ್ಪ ಗಂಗಾವತಿ ಆಕ್ಷೇಪಿಸಿದರು. ಬರೀ ಜಮಾ-ಖರ್ಚು ಮಾತ್ರ ಹೇಳುತ್ತಿದ್ದೀರಿ. ಯಾವುದಕ್ಕೆ ಎಷ್ಟು ಖರ್ಚು ಮಾಡಿರುವದು ಎನ್ನುವ ವಿವರವಾದ ಮಾಹಿತಿ ನೀಡಿಲ್ಲ. ಹಿಂದಿನ ಸಭೆಯ ನಡವಳಿಕೆಗಳ ಪಟ್ಟಿಯನ್ನು ನೀಡುವದಿಲ್ಲ. ಇದೇನು ಸಾಮಾನ್ಯ ಸಭೆಯೋ? ನೀವು ಹೇಳುವದನ್ನು ಕೇಳಿ ಹೊರಟು ಹೋಗುವುದೋ? ಎಂದು ಆಕ್ಷೇಪಿಸಿದರು. ಆಗ ಶಾಸಕ ಹೂಲಗೇರಿಯವರು ಕೂಡ ಅಸಮಾಧಾನ ವ್ಯಕ್ತಪಡಿಸಿ, ನೀವು ಸದಸ್ಯರಿಗೆ ಮಾಹಿತಿ ಕೊಡದೇ ಇನ್ಯಾರಿಗೆ ಮಾಹಿತಿ ಕೊಡುತ್ತೀರಿ ಎಂದು ಮುಖ್ಯಾಧಿಕಾರಿಗಳಿಗೆ ಪ್ರಶ್ನಿಸಿದರು. ‘

ಕೋಟಿ-ಕೋಟಿ ಹಣವಿದ್ದರೂ ಕೂಡ ಮುಖ್ಯಾಧಿಕಾರಿಗಳು ಪೌರ ಕಾರ್ಮಿಕರಿಗೆ ವೇತನ ಕೊಡದೇ ಇರುವುದನ್ನು ಪ್ರಶ್ನಿಸಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸದಸ್ಯ ಗುಂಡಪ್ಪ ಗಂಗಾವತಿ, ಕಾರ್ಮಿಕರನ್ನು ನಿರ್ಲಕ್ಷಿಸಬೇಡಿ. ಅವರು ಪಟ್ಟಣದ ಸ್ವತ್ಛತೆ ಮಾಡುತ್ತಾರೆ. ಕುಡಿಯುವ ನೀರಿನ ಕಾರ್ಮಿಕರಿಗೂ ವೇತನ ನೀಡದೇ ನಿರ್ಲಕ್ಷಿಸಬೇಡಿ ಎಂದರು.

ಕಾರ್ಮಿಕರಿಗೆ ಬೆಳಗಿನ ಉಪಾಹಾರವನ್ನು ಕಳೆದ ತಿಂಗಳಿಂದ ತಡೆಹಿಡಿಯಲಾಗಿದೆ. ಕಾರ್ಮಿಕರು ಮುಂಜಾನೆ ಪಟ್ಟಣದ ಸ್ವತ್ಛತೆಗೆ ಆಗಮಿಸುತ್ತಿದ್ದರೂ ಮುಖ್ಯಾಧಿಕಾರಿಗಳು ನಿರ್ಲಕ್ಷ ಭಾವನೆ ತಾಳಿದ್ದಾರೆ ಎಂದು ಸದಸ್ಯ ಗುಂಡಪ್ಪ ಗಂಗಾವತಿ ಆರೋಪಿಸಿದರು.

ಇದಕ್ಕೆ ಕೆಲ ಸದಸ್ಯರು ಸಹಮತ ವ್ಯಕ್ತಪಡಿಸಿ, ಉಪಾಹಾರದ ಟೆಂಡರ್‌ ಯಾರಿಗೆ ಕೊಟ್ಟಿದ್ದೀರಿ ಎಂದು ಕೇಳಿದರು. ಶಾಸಕರು ಮಧ್ಯಪ್ರವೇಶಿಸಿ ಮುಖ್ಯಾಧಿಕಾರಿಗಳನ್ನು ಕೇಳಿದರೆ ಉಪಾಹಾರ ಮಾಡಲು ಯಾರೂ ಮುಂದೆ ಬರುತ್ತಿಲ್ಲ ಎಂದು ಸಮಜಾಯಿಸಿದರು.

ಪಟ್ಟಣದಲ್ಲಿಯ ರಸ್ತೆ ಅಭಿವೃದ್ಧಿಗಾಗಿ ವ್ಯಕ್ತಿಪ್ರತಿಷ್ಠೆ ಕೈಬಿಟ್ಟು ಅಭಿವೃದ್ಧಿಗೆ ಸಹಕರಿಸಿ, ಅರಣ್ಯ ಇಲಾಖೆಯಿಂದ ಮರಗಳ ತೆರವಿಗೆ ಪರವಾನಗಿ ಬಂದಿದೆ. ಎಲ್ಲ ಸದಸ್ಯರು ಸಹಕರಿಸಬೇಕೆಂದು ಶಾಸಕರು ಸದಸ್ಯರೆಲ್ಲರಿಗೂ ಮನವಿ ಮಾಡಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.