ಪಶು ಆಸ್ಪತ್ರೆಯ ಸುಸಜ್ಜಿತ ಕಟ್ಟಡ ಸಿದ್ಧ; ಪ್ರಾಣಿಗಳಿಗೆ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ


Team Udayavani, Jan 22, 2022, 5:37 PM IST

ಪಶು ಆಸ್ಪತ್ರೆಯ ಸುಸಜ್ಜಿತ ಕಟ್ಟಡ ಸಿದ್ಧ; ಪ್ರಾಣಿಗಳಿಗೆ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ

ಕೊಡಿಯಾಲಬೈಲ್‌: ದಕ್ಷಿಣ ಕನ್ನಡ ಜಿಲ್ಲಾ ವಿವಿಧೋದ್ದೇಶ ಪಶು ಆಸ್ಪತ್ರೆ (ಪಾಲಿ ಕ್ಲಿನಿಕ್‌)ಯ ನೂತನ ಸುಸಜ್ಜಿತ ಕಟ್ಟಡವು ಪಶು ವೈದ್ಯಕೀಯ ಸೇವೆ ಒದಗಿಸಲು ಸಜ್ಜಾಗಿದೆ.

ಕೊಡಿಯಾಲಬೈಲ್‌ನಲ್ಲಿರುವ ಜಿಲ್ಲಾ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಕಚೇರಿ ಆವರಣದಲ್ಲಿ ಕೇಂದ್ರ ಸರಕಾರದ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಧಿ (ಆರ್‌ಐಡಿಎಫ್‌) ಯೋಜನೆಯ 2.2 ಕೋಟಿ ರೂ. ಅನುದಾನದಲ್ಲಿ ಈ ನೂತನ ಕಟ್ಟಡ ನಿರ್ಮಾಣಗೊಂಡಿದೆ.

ಈ ಆಸ್ಪತ್ರೆಯಲ್ಲಿ ಎಲ್ಲ ಪ್ರಾಣಿಗಳಿಗೆ ತಜ್ಞರಿಂದ ಪಶು ವೈದ್ಯಕೀಯ ಸೇವೆ ಲಭ್ಯವಿದೆ. ಮುಖ್ಯವಾಗಿ ದನ, ಎಮ್ಮೆ, ಆಡು, ಹಂದಿ, ಕೋಳಿ, ನಾಯಿ, ಬೆಕ್ಕು ಮತ್ತಿತರ ಪ್ರಾಣಿಗಳ ರಕ್ತ ತಪಾಸಣೆ, ಸ್ಕ್ಯಾನಿಂಗ್ , ಲ್ಯಾಬ್‌, ಅಗತ್ಯ ಬಿದ್ದರೆ ಶಸ್ತ್ರ ಚಿಕಿತ್ಸೆ ಮತ್ತಿತರ ಸೇವೆಗಳನ್ನು ಒದಗಿಸಲಾಗುತ್ತದೆ.

ವಿಶೇಷವಾಗಿ ತಾಲೂಕು, ಹೋಬಳಿ, ಗ್ರಾಮ ಮಟ್ಟದ ಪಶು ಆಸ್ಪತ್ರೆ ಮತ್ತು ಪ್ರಾಥಮಿಕ ಪಶು ಚಿಕಿತ್ಸಾಲಯಗಳಿಂದ ಹೆಚ್ಚುವರಿ ಚಿಕಿತ್ಸೆಗೆ ಶಿಫಾರಸು ಮಾಡುವ ಪ್ರಾಣಿಗಳಿಗೆ ಇಲ್ಲಿ ಹೊರ ರೋಗಿ ಚಿಕಿತ್ಸೆಯನ್ನು ಕೊಡಲಾಗುತ್ತದೆ. ಅಲ್ಲದೆ ಸ್ಥಳೀಯವಾಗಿ ಕರೆ ತರುವ ನಾಯಿ, ಬೆಕ್ಕುಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ.

ಪಶು ಸಂಜೀವಿನಿ ಆ್ಯಂಬುಲೆನ್ಸ್‌
ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿ ದನ, ಎಮ್ಮೆ, ಹಂದಿ, ಆಡು ಮತ್ತಿತರ ದೊಡ್ಡ ಪ್ರಾಣಿಗಳನ್ನು ಒಂದೆಡೆಯಿಂದ ಇನ್ನೊಂದು ಕಡೆಗೆ ಸಾಗಿಸುವುದು ಕಷ್ಟ ಸಾಧ್ಯವಾದ್ದರಿಂದ ತಜ್ಞ ವೈದ್ಯರು ಅವುಗಳಿರುವ ಸ್ಥಳಕ್ಕೆ ತೆರಳಿ ಶಸ್ತ್ರ ಚಿಕಿತ್ಸೆಯನ್ನು ನೆರವೇರಿಸಲು ಅನು ಕೂಲವಾಗುವಂತೆ ಸುಸಜ್ಜಿತ ವಾಹನ ಪಶು ಸಂಜೀವಿನಿ ಆ್ಯಂಬುಲೆನ್ಸ್‌ ಅನ್ನು ಈ ಆಸ್ಪತ್ರೆ ಹೊಂದಿದೆ.

ನೂತನ ಕಟ್ಟಡದಲ್ಲಿ ಸಣ್ಣ ಮತ್ತು ದೊಡ್ಡ ಪ್ರಾಣಿಗಳಿಗೆ ಚಿಕಿತ್ಸೆ ಒದಗಿಸಲು ಪ್ರತ್ಯೇಕವಾದ ವಿಶಾಲವಾದ ಸ್ಥಳಾವ ಕಾಶ ಇದೆ. ಈ ಕಟ್ಟಡದಲ್ಲಿ ಪಶು ವೈದ್ಯಕೀಯ ಚಿಕಿತ್ಸೆ ಮತ್ತು ಸೇವೆಯನ್ನು ಒದಗಿಸಲು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದು, ಅಧಿಕೃತ ಉದ್ಘಾಟನೆ ಇನ್ನಷ್ಟೇ ಆಗಬೇಕಾಗಿದೆ.

ತಜ್ಞ ವೈದ್ಯರ 2 ಹುದ್ದೆ ಖಾಲಿ
ಈ ಪಾಲಿ ಕ್ಲಿನಿಕ್‌ಗೆ ಓರ್ವ ಮುಖ್ಯ ತಜ್ಞ ಪಶು ವೈದ್ಯರು ಮತ್ತು ಇಬ್ಬರು ತಜ್ಞ ಪಶು ವೈದ್ಯರ ಹುದ್ದೆ ಮಂಜೂರಾಗಿದ್ದು, ಪ್ರಸ್ತುತ ಮುಖ್ಯ ತಜ್ಞ ಪಶು ವೈದ್ಯರು ಮಾತ್ರ ಇದ್ದಾರೆ. ತಜ್ಞ ಪಶು ವೈದ್ಯರ 2 ಹುದ್ದೆಗಳು ಖಾಲಿ ಇವೆ. ಎಕ್ಸ್‌ರೇ ಯಂತ್ರ ಕೆಟ್ಟು ಹೋಗಿದ್ದು, ಹೊಸ ಎಕ್ಸ್‌ರೇ ಯಂತ್ರ ಶೀಘ್ರ ಬರಲಿದೆ. ಸ್ಕ್ಯಾನಿಂಗ್ ಯಂತ್ರವೂ ಹಾಳಾಗಿದ್ದು, ಅದನ್ನು ದುರಸ್ತಿಗಾಗಿ ಗುರ್ಗಾಂವ್‌ಗೆ ಕಳುಹಿಸಲಾಗಿದ್ದು, ಶೀಘ್ರದಲ್ಲಿ ದುರಸ್ತಿಯಾಗಿ ಬರಲಿದೆ ಎಂದು ಆಸ್ಪತ್ರೆಯ ಉಪ ನಿರ್ದೇಶಕ ಡಾ| ರಾಮ ಪ್ರಕಾಶ್‌ ಡಿ. ಅವರು ಉದಯವಾಣಿ ಸುದಿನಕ್ಕೆ ಮಾಹಿತಿ ನೀಡಿದ್ದಾರೆ.

ಸೇವೆಗೆ ಸಿದ್ಧವಾಗಿದೆ
ಈ ಹೊಸ ಕಟ್ಟಡಕ್ಕೆ ನನ್ನಿಂದಲೇ ಶಿಲಾನ್ಯಾಸ ನೆರವೇರಿತ್ತು. ಇದೀಗ ಕಟ್ಟಡ ಕಾಮಗಾರಿ ಪೂರ್ಣಗೊಂಡು ಸೇವೆಗೆ ಸಿದ್ಧವಾಗಿದೆ. ಹೈನುಗಾರರಿಗೆ, ಸಾಕು ಪ್ರಾಣಿ ಮತ್ತು ಇತರ ಪ್ರಾಣಿಗಳಿಗೆ ಸಂಬಂಧಿಸಿದ ವಿವಿಧ ಆರೋಗ್ಯ ಸೌಲಭ್ಯ ಒದಗಿಸಲು ಸರಕಾರ ಈ ಕಟ್ಟಡವನ್ನು ಒದಗಿಸಿದ್ದು, ಜಿಲ್ಲೆಯ ಜನರು ಇದರ ಪ್ರಯೋಜನ ಪಡೆಯಬೇಕು.
-ಡಿ. ವೇದವ್ಯಾಸ ಕಾಮತ್‌,
ಶಾಸಕರು, ಮಂಗಳೂರು ದಕ್ಷಿಣ

-ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.