ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ


Team Udayavani, Jan 22, 2022, 7:44 PM IST

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆರಂಭವಾಗಿರುವ ಹುಲಿ ಗಣತಿ ಕಾರ್ಯ ಶನಿವಾರ ಮೊದಲ ಹಂತದಲ್ಲಿ ನಾಲ್ಕು ವಲಯಗಳಲ್ಲಿ ನಡೆಯಿತು. ಬಂಡೀಪುರ, ಗೋಪಾಲಸ್ವಾಮಿಬೆಟ್ಟ, ಕುಂದುಕೆರೆ ಮತ್ತು ಮದ್ದೂರು ವಲಯದಲ್ಲಿ ನುರಿತ ಐಸಿಟಿ ಪದವೀಧರರು, ವಿಶೇಷ ಹುಲಿ ಸಂರಕ್ಷಣಾ ದಳದ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ನೌಕರರು ಗಣತಿ ನಡೆಸಿದ್ದು, ಮೊಬೈಲ್ ಆ್ಯಪ್‍ನಲ್ಲಿ ದತ್ತಾಂಶ ದಾಖಲಿಸುವ ಕೆಲಸ ಮಾಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯುವ ಗಣತಿಗೆ 300 ಮಂದಿ ನೌಕರರನ್ನು ನಿಯೋಜಿಸಲಾಗಿದೆ. ವೀಕ್ಷಕರು, ಮೊಬೈಲ್ ನಿರ್ವಹಣೆ ಮಾಡುವವರು ಹಾಗೂ ಒಬ್ಬ ಗಾರ್ಡ್ ಒಳಗೊಂಡ ಮೂವರ ತಂಡ ರಚಿಸಲಾಗಿದೆ. ಇವರು ಲಭ್ಯವಾದ ದೈನಂದಿನ ಮಾಹಿತಿಯನ್ನು ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡುತ್ತಾರೆ.

ಹಿಂದೆ ಕ್ಯಾಮರಾ ಟ್ರ್ಯಾಪಿಂಗ್, ಟ್ರಾನ್ಜಾಕ್ಟ್ ಲೈನ್ ಮೂಲಕ ಹುಲಿ ಗಣತಿ ನಡೆಯುತ್ತಿತ್ತು. ಆದರೆ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಎಂ ಸ್ಟ್ರೈಪ್ಸ್ ಮಾನಿಟರಿಂಗ್ ಸಿಸ್ಟಮ್ ಫಾರ್ ಟೈಗರ್ಸ್ ಇಂಟೆನ್ಸಿವ್ ಪ್ರೆಟೆಕ್ಷನ್  ಹಾಗೂ ಇಕಾಲಾಜಿಕಲ್ ಸ್ಟೇಟಸ್ ಎಂಬ ಆ್ಯಪ್ ಮೂಲಕ ಗಣತಿ ನಡೆಸಲಾಗುತ್ತಿದೆ.

ಗಣತಿ ಕಾರ್ಯ ಸುಲಭವಾಗಲೆಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಿಭಾಗದಲ್ಲೂ ಆರು ದಿನ ಗಣತಿ ನಡೆಯಲಿದ್ದು, ಮೊದಲ ಮೂರು ದಿನ ನಿಗಧಿಯಾದ ಸ್ಥಳದಲ್ಲಿ ಆನೆ, ಜಿಂಕೆ, ಕಡವೆ, ಕಾಡೆಮ್ಮೆ ಮತ್ತು ಹುಲಿ ವಾಸಕ್ಕೆ ಅನುಕೂಲಕರವಾದ ಪರಿಸ್ಥಿತಿ ಇದೆಯೇ ಎಂಬುದು ಗಮನಿಸಲಾಗುತ್ತದೆ. ನಂತರದ ಮೂರು ದಿನ ಟ್ರಾಂಜೆಕ್ಟ್ ಲೈನಿನಲ್ಲಿ 5 ಕಿ.ಮೀ. ದೂರ ಕ್ರಮಿಸಿ ವಿವಿಧ ರೀತಿಯ ಮಾಹಿತಿ ಕಲೆ ಹಾಕಲಾಗುತ್ತದೆ. ಒಂದನೇ ಕ್ಷೇತ್ರದಲ್ಲಿ ಜ.22 ರಿಂದ 27. ಎರಡರಲ್ಲಿ ಜ.28 ರಿಂದ ಫೆ.2,  ಮತ್ತು  ಮೂರರಲ್ಲಿ ಫೆ. 3ರಿಂದ 8 ರವರೆಗೆ ಗಣತಿ ನಡೆಯಲಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿ ಕಾರ್ಯ ಮೊದಲ ದಿನ ಮಾಂಸಹಾರಿ ಪ್ರಾಣಿಗಳು ಮತ್ತು ದೊಡ್ಡ ಸಸ್ಯಹಾರಿ ಪ್ರಾಣಿಗಳ ಪ್ರತ್ಯೇಕ್ಷ ಮತ್ತು ಪರೋಕ್ಷ ಸಾಕ್ಷ್ಯಗಳನ್ನು ಗುರುತಿಸುವ ಮೂಲಕ ಗಣತಿ ಆರಂಭಿಸಲಾಗಿದೆ. ಪ್ರಾಣಿಗಳ ಚಲಲನವಲನ, ಹೆಜ್ಜೆ ಗುರುತು, ಲದ್ದಿ ಸೇರಿದಂತೆ ಇತರೆ ಆಧಾರ ಮೇಲೆ ಮಾಹಿತಿ ದಾಖಲಿಸಲಾಗುತ್ತಿದೆ.ಕೆ.ಪರಮೇಶ್, ಎಸಿಎಫ್ ಬಂಡೀಪುರ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.