ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾನ್ “ಮಾಸ್ಟರ್ ಸ್ಟ್ರೋಕ್’!
ಕಾಂಗ್ರೆಸ್ ನಾಯಕರ ನಡುವೆ ಗೆರೆ ಎಳೆದ ಮುಖ್ಯಮಂತ್ರಿ; ಮಧ್ಯಪ್ರದೇಶ ರಾಜಕೀಯ ರಂಗದಲ್ಲಿ ಹೊಸ ಚರ್ಚೆಗೆ ನಾಂದಿ
Team Udayavani, Jan 23, 2022, 6:45 AM IST
ಭೋಪಾಲ: ಅವರಿಬ್ಬರೂ ಮಧ್ಯಪ್ರದೇಶದ ಮಾಜಿ ಸಿಎಂಗಳು. ಒಬ್ಬರು – ದಿಗ್ವಿಜಯ್ ಸಿಂಗ್, ಮತ್ತೊಬ್ಬರು – ಕಮಲ್ನಾಥ್. ಇಬ್ಬರಿಗೂ ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾನ್ರನ್ನು ಪ್ರತ್ಯೇಕವಾಗಿ ಭೇಟಿಗಾಗಿ ಸಮಯದ ಅವಕಾಶ ಕೋರಿದ್ದರು. ದಿಗ್ವಿಜಯ್ ಸಿಂಗ್ ಅವರಿಗೆ ಭೇಟಿ ನಿಗದಿಗೆ ಅವಕಾಶ ನೀಡಿದ್ದ ಸಿಎಂ ಚೌಹಾನ್, ಕೊನೆ ಕ್ಷಣದಲ್ಲಿ ಅದನ್ನು ರದ್ದು ಮಾಡಿ, ಕಮಲ್ನಾಥ್ರನ್ನು ಭೇಟಿಯಾಗಿದ್ದಾರೆ!
ಇದು, ಮಧ್ಯಪ್ರದೇಶದ ರಾಜಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಇದು ಮಾಸ್ಟರ್ ಸ್ಟ್ರೋಕ್ ಎಂದು ಬಣ್ಣಿಸಲಾಗಿದೆ.
ಇಬ್ಬರು ಮಾಜಿ ಸಿಎಂಗಳೂ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡೇ ಸಿಎಂ ಭೇಟಿಗೆ ಅವಕಾಶ ಕೋರಿದ್ದರು. ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಕ್ಕೆ ದಿಗ್ವಿಜಯ್ ಸಿಂಗ್, ಸಿಎಂ ನಿವಾಸದ ಮುಂದೆ ರೈತರೊಂದಿಗೆ ಧರಣಿ ಕುಳಿತರು. ಅತ್ತ, ಸಿಎಂರನ್ನು ಭೇಟಿ ಮಾಡಿದ ಕಮಲ್ನಾಥ್, ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಧಾವಿಸಿ ಬಂದು ರೈತರಿಗೆ ಸಿಎಂ ಅಭಯ ನೀಡಿರುವ ವಿಚಾರ ತಿಳಿಸಿದರು. ಜತೆಗೆ ಮಾಜಿ ಸಿಎಂ ದಿಗ್ವಿಜಯ ಸಿಂಗ್ ಅವರನ್ನು ಶೀಘ್ರವೇ ಭೇಟಿಯಾಗಲಿದ್ದಾರೆ ಎಂದೂ ಕಮಲ್ನಾಥ್ ತಿಳಿಸಿದ್ದಾರೆ.
ಇದನ್ನೂ ಓದಿ:ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ
ದಿಗ್ವಿಜಯ್ ಅವರನ್ನು ನಿರ್ಲಕ್ಷಿಸಿ ಕಮಲ್ನಾಥ್ರನ್ನು ಭೇಟಿ ಮಾಡಿರುವುದು ಉಭಯ ನಾಯಕರು ಹಾಗೂ ಅವರ ಬೆಂಬಲಿಗರಲ್ಲಿ ಬಿರುಕು ಮೂಡಿಸುವ ಪ್ರಯತ್ನ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್