ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಒಡಿಶಾ ಪೊಲೀಸರ ಅಸಹಕಾರದಿಂದ ಮೂರು ದಿನ ಅನ್ನಾಹಾರ ಬಿಟ್ಟು ಮೃತದೇಹಕ್ಕೆ ಕಾದಿದ್ದ ತಾಯಿ

Team Udayavani, Jan 23, 2022, 7:55 AM IST

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಸಾಂದರ್ಭಿಕ ಚಿತ್ರ.

ಕಾರ್ಕಳ: ಒಡಿಶಾದ ಖಾಸಗಿ ಕಂಪೆನಿಯಲ್ಲಿ ಕೆಲಸಕಿದ್ದ ಕಾರ್ಕಳ ಮೂಲದ ಯುವಕನೋರ್ವ ವಿಷಾಹಾರ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಚಿಕಿತ್ಸೆ ಫ‌ಲಿಸದೆ ದಾರಿ ಮಧ್ಯೆ ಮೃತಪಟ್ಟಿದ್ದು, ಪುತ್ರನ ಶವ ಪಡೆಯಲು ತಾಯಿ 3 ದಿನಗಳಿಂದ ಅನ್ನಾಹಾರ ಸೇವಿಸಿದೆ ಕಾಯುತ್ತಲಿದ್ದರು. ಒಡಿಶಾ ಪೊಲೀಸರ ಅಸಹಕಾರದಿಂದ ಹಸ್ತಾಂತರ ಪ್ರಕ್ರಿಯೆಗೆ ಅಡ್ಡಿಯಾಗಿತ್ತು. ಕೊನೆಗೆ ಶನಿವಾರ ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಸಹಕಾರದಿಂದ ಪುತ್ರನ ಮೃತದೇಹವನ್ನು ಕಾರ್ಕಳ ಪೊಲೀಸರು ತಾಯಿಗೆ ಹಸ್ತಾಂತರಿಸಿದರು.

ಘಟನೆ ಹಿನ್ನೆಲೆ
ಕಸಾಬಾ ನಿವಾಸಿ ಧಮೇಂದ್ರ ಅವರ ಅಣ್ಣನ ಪುತ್ರ ಕಾರ್ತಿಕ್‌ (25) ಐದು ವರ್ಷಗಳಿಂದ ಮಂಗಳೂರು ಪ್ಲಾನ್‌ ಟೆಕ್‌ ಕಂಪೆನಿಯಲ್ಲಿ ಸೇಫ್ಟಿ ಸೂಪರ್‌ವೈಸರ್‌ ಆಗಿ ಕೆಲಸ ಮಾಡುತ್ತಿದ್ದರು. ಅನಂತರ ಒಡಿಶಾಕ್ಕೆ ತೆರಳಿ ಅದೇ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಜ. 14ರಂದು ಮಂಗಳೂರು ಕಂಪೆನಿಯ ಮ್ಯಾನೇಜರ್‌ ಕುಶಲ್‌ ಅವರು ಧರ್ಮೆಂದ್ರ ಅವರಿಗೆ ಕರೆ ಮಾಡಿ ಕಾರ್ತಿಕ್‌ ವಿಷಾಹಾರ ಸೇವಿಸಿದ್ದಾನೆ. ಆತನ ಸ್ನೇಹಿತರು ಕಟಕ್‌ನ ರಿಲಾಕ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾಗಿ ತಿಳಿಸಿದ್ದಾರೆ. ಧಮೇಂದ್ರವರು ಆತನ ಪೋಷಕರಿಗೆ ವಿಚಾರ ತಿಳಿಸಿ ಸಂಬಂಧಿಕರಾದ ವೇಲು ಮತ್ತು ಕೃಷ್ಣ ಜತೆ ಜ. 17ರಂದು ಕಟಕ್‌ ತಲುಪಿದ್ದರು.

ದಾರಿ ಮಧ್ಯೆ ಸಾವು!
ಕಟಕ್‌ನ ರಿಲಾಕ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕಾರ್ತಿಕ್‌ ಆ ವೇಳೆ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಆತನ ಚಿಕಿತ್ಸೆಗೆ ಹೆಚ್ಚಿನ ಹಣದ ಆವಶ್ಯಕತೆ ಬಗ್ಗೆ ಆಸ್ಪತ್ರೆಯವರು ತಿಳಿಸಿದ್ದರು. 94 ಸಾವಿರ ರೂ. ಆಸ್ಪತ್ರೆ ಬಿಲ್‌ ಕೂಡ ಆಗಿತ್ತು. ಆಸ್ಪತ್ರೆಯಿಂದ ಅಲ್ಲಿನ ಮಂಗಲ್‌ ಬಾಗ್‌ ಪೊಲೀಸ್‌ ಠಾಣೆಗೆ ಮಾಹಿತಿ ಬಂದು ಪೊಲೀಸರು ಆಸ್ಪತ್ರೆಗೆ ತೆರಳಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಕಾರ್ತಿಕ್‌ನನ್ನು ಅಲ್ಲಿನ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಆ್ಯಂಬುಲೆನ್ಸ್‌ನಲ್ಲಿ ಉಡುಪಿ ಕಡೆಗೆ ಕರೆ ತರುತ್ತಿದ್ದ ವೇಳೆ ಜ. 19ರ ಮಧ್ಯಾಹ್ನ ದಾರಿ ಮಧ್ಯೆ ಜೂಸ್‌ ಕುಡಿಸಿದ್ದರು. ಕಾರ್ಕಳ ತಲುಪುವ ವೇಳೆ ಆತ ತೀರಾ ಅಸ್ವಸ್ಥನಾಗಿದ್ದ. ಸರಕಾರಿ ಆಸ್ಪತ್ರೆಗೆ ಕರೆ ತಂದಾಗ ಅಲ್ಲಿ ವೈದ್ಯರು ಆತ ಮೃತಪಟ್ಟಿದ್ದನ್ನು ಖಚಿತಪಡಿಸಿದ್ದರು.

ದೂರು ಸ್ವೀಕರಿಸದ
ಒಡಿಶಾ ಪೊಲೀಸರು
ಘಟನೆ ಬಗ್ಗೆ ಮಾಹಿತಿ ಪಡೆದ ಕಾರ್ಕಳ ನಗರ ಪೊಲೀಸ್‌ ಠಾಣೆ ಯವರು ಕಾರ್ತಿಕ್‌ ಒಡಿಶಾ ರಾಜ್ಯದ ಪಾರಾದೀಪ್‌ ಲಾಕ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರಣದಿಂದ ಪ್ರಕರಣದ ಬಗ್ಗೆ ಒಡಿಶಾದ ಪಾರಾದೀಪ್‌ ಲಾಕ್‌ ಪೊಲೀಸ್‌ ಠಾಣೆಗೆ ಸೂಚನ ಪತ್ರ ಕಳುಹಿಸಿ ಮಾಹಿತಿ ನೀಡಿದ್ದರು. ಕಾರ್ತಿಕ್‌ನ ಮೃತದೇಹ ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಒಡಿಶಾ ಪಾರಾದೀಪ್‌ ಲಾಕ್‌ ಠಾಣೆಯ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಬಿಟ್ಟುಕೊಡದೆ ಇರುವುದರಿಂದ ಮೃತದೇಹವು ಮೂರು ದಿನಗಳಿಂದ ಶವಗಾರದಲ್ಲೇ ಇರುವಂತಾಗಿದೆ. ಈ ಬಗ್ಗೆ ಜಿಲ್ಲಾ ಎಸ್‌ಪಿಯವರು ಮುತುವರ್ಜಿ ವಹಿಸಿ ಒಡಿಶಾ ಎಸ್‌ಪಿಯವರಲ್ಲಿ ಮಾತುಕತೆ ನಡೆಸಿದರೂ, ಅಲ್ಲಿನ ಪೊಲೀಸರು ಕಾರ್ಕಳಕ್ಕೆ ಬರಲು ಹಿಂದೇಟು ಹಾಕಿದ್ದರು. ಕೊನೆಗೆ ಎಸ್‌ಪಿಯವರು ಸ್ವಯಂ ನಿರ್ಧಾರ ಕೈಗೊಂಡು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಪ್ರಕ್ರಿಯೆಗಳ ಮೂಲಕ ತಾಯಿಗೆ ಮೃತದೇಹವನ್ನು ಹಸ್ತಾಂತರಿಸಲು ಕಿರಿಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ಅದರಂತೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.