ಎಂಟು ದಿನಗಳಿಂದ ಶಾಲೆಗೆ ಹೋಗದಿದ್ದರೂ ಪಾಸಿಟಿವ್ ವರದಿ; ಆರೋಗ್ಯ ಸಿಬ್ಬಂದಿ ಎಡವಟ್ಟು ಬಹಿರಂಗ


Team Udayavani, Jan 23, 2022, 11:52 AM IST

ಎಂಟು ದಿನಗಳಿಂದ ಶಾಲೆಗೆ ಹೋಗದಿದ್ದರೂ ಪಾಸಿಟಿವ್ ವರದಿ; ಆರೋಗ್ಯ ಸಿಬ್ಬಂದಿ ಎಡವಟ್ಟು ಬಹಿರಂಗ

ಮುಂಡಗೋಡ: ಶಾಲೆಗೆ ಹೋಗದಿದ್ದರೂ ವಿದ್ಯಾರ್ಥಿನಿಯ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಆಕೆಯ ಕೋವಿಡ್ ವರದಿ ಪಾಸಿಟಿವ್ ಬಂದಿದೆ ಎಂದು ಪಾಲಕರೊಬ್ಬರಿಗೆ ಆರೋಗ್ಯ ಸಿಬ್ಬಂದಿ ಹೇಳಿ ಆತಂಕ ಮೂಡಿಸಿದ ಘಟನೆ ಜರುಗಿದೆ.

ಪಟ್ಟಣದ ಹಳೂರಿನ ಆರನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು, ಕರಗಿನಕೊಪ್ಪದ ಲೊಯೋಲ ಶಾಲೆಯ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯುತ್ತಿದ್ದಾಳೆ. ಆಕೆ, ಜನವರಿ 12ರಿಂದ 19ರವರೆಗೆ ಅನಾರೋಗ್ಯ ಇರುವುದರಿಂದ, ಶಾಲೆಗೆ ಹೋಗಿಲ್ಲ. ಆದರೆ, ಲೊಯೋಲ ಶಾಲೆಯಲ್ಲಿ ಜನವರಿ 17ರಂದು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿರುವ ಆರೋಗ್ಯ ಸಿಬ್ಬಂದಿ, ಅದರಲ್ಲಿ ಶಾಲೆಗೆ ಹೋಗದ ಆರನೇ ತರಗತಿಯ ವಿದ್ಯಾರ್ಥಿನಿಯ ಕೋವಿಡ್ ಪರೀಕ್ಷೆ ಮಾಡಿರುವುದಾಗಿ ಹಾಗೂ ವರದಿಯು ಪಾಸಿಟಿವ್ ಅಂತ ಬಂದಿದೆ ಎಂದು ಆಕೆಯ ಪಾಲಕರಿಗೆ ಹೇಳಿ, ಶಾಲೆಗೆ ಪಾಲಕರಿಗೆ ಬರಲು ಹೇಳಿದ್ದಾರೆ.

ಒಮ್ಮೇಲೆ ಆತಂಕಗೊಂಡ ವಿದ್ಯಾರ್ಥಿನಿಯ ತಂದೆಯು, ಇದ್ದ ಕೆಲಸವನ್ನು ಬಿಟ್ಟು, ಲೊಯೋಲ ಶಾಲೆಗೆ ದೌಡಾಯಿಸಿದ್ದಾರೆ. ಅಲ್ಲಿ ಶಿಕ್ಷಕರು, ನಿಮ್ಮ ಮಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕೂಡಲೇ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ವಿದ್ಯಾರ್ಥಿನಿಯ ತಂದೆಯು, ನನ್ನ ಮಗಳು ಎಂಟು ದಿನಗಳಿಂದ ಶಾಲೆಗೆ ಬಂದಿಲ್ಲ. ಕೋವಿಡ್ ಪರೀಕ್ಷೆ ಯಾವಾಗ ಮಾಡಿದ್ದೀರಿ. ನನ್ನ ಮಗಳು ಇವತ್ತು ಮಾತ್ರ ಶಾಲೆಗೆ ಬಂದಿದ್ದಾಳೆ ಎಂದು ವಿವರಿಸಿದ್ದಾರೆ.

ಏನೋ ಎಡವಟ್ಟು ಆದಂತೆ ಕಂಡುಬಂದ ಶಿಕ್ಷಕರು ತರಗತಿಯ ಅಟೆಂಡೆನ್ಸ್ ನೋಡಿದಾಗ, ವಿದ್ಯಾರ್ಥಿನಿಯು ಶಾಲೆಗೆ ಬಂದಿಲ್ಲದಿರುವುದು ಕಂಡುಬಂದಿದೆ. ಆಗ, ಶಿಕ್ಷಕರು ಆರೋಗ್ಯ ಸಿಬ್ಬಂದಿಗೆ ಕರೆ ಮಾಡಿ, ಆ ವಿದ್ಯಾರ್ಥಿನಿ ಶಾಲೆಗೆ ಬಂದಿಲ್ಲ. ಆಕೆಯ ಕೋವಿಡ್ ಟೆಸ್ಟ್ ವರದಿ ಅದಲ್ಲ. ಯಾರದೋ ಮಿಸ್ ಆಗಿ ಬಂದಿರಬಹುದು ಚೆಕ್ ಮಾಡಿ ಎಂದಿದ್ದಾರೆ. ಆರೋಗ್ಯ ಸಿಬ್ಬಂದಿಯು ವಿದ್ಯಾರ್ಥಿನಿಯ ತಂದೆಗೆ ಕರೆ ಮಾಡಿ, ಬೇರೆಯವರ ವರದಿ ಆಗಿದೆ. ನಿಮ್ಮ ಮಗಳದಲ್ಲ. ಈ ವಿಷಯವನ್ನು ಯಾರಿಗೂ ಹೇಳ್ಬೇಡಿ ಎಂದು ವಿದ್ಯಾರ್ಥಿನಿಯ ತಂದೆಗೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಆದರೂ, ಆರೋಗ್ಯ ಸಿಬ್ಬಂದಿಯ ಎಡವಟ್ಟು ಶನಿವಾರ ಸಂಜೆ ಬಹಿರಂಗಗೊಂಡಿದೆ.

ವರದಿ ಯಾರದ್ದು? :

ಶಾಲೆಗೆ ಹೋಗದ ಆರನೇ ತರಗತಿಯ ವಿದ್ಯಾರ್ಥಿನಿಯ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿರುವುದು ನಿಜಕ್ಕೂ ಯಾವ ವಿದ್ಯಾರ್ಥಿಯದ್ದು? ಎಂಬುದನ್ನು ಆರೋಗ್ಯ ಇಲಾಖೆ ಸ್ಪಷ್ಟಪಡಿಸಬೇಕಿದೆ. ನಿಜವಾಗಿ ಪಾಸಿಟಿವ್ ಇದ್ದಂತ ವಿದ್ಯಾರ್ಥಿ ಗೊತ್ತಾಗದೇ, ಇಡಿ ಶಾಲೆಯಲ್ಲಿ ತಿರುಗಾಡಿದರೇ? ಯಾರು ಹೊಣೆ ಎಂದು ಪಾಲಕರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.

ಬಹಿರಂಗ ಮಾಡ್ಬೇಡಿ ಎಂದ ಆರೋಗ್ಯ ಸಿಬ್ಬಂದಿ: ಆರನೇ ತರಗತಿ ವಿದ್ಯಾರ್ಥಿನಿಯ ಕೋವಿಡ್ ಪಾಸಿಟಿವ್ ವರದಿ ಸುಳ್ಳು ಆಗಿರುವುದನ್ನು ಯಾರಿಗೂ ಹೇಳದಂತೆ, ಆರೋಗ್ಯ ಸಿಬ್ಬಂದಿ ವಿದ್ಯಾರ್ಥಿನಿಯ ತಂದೆಗೆ ಎರಡೆರಡು ಬಾರಿ ಕರೆ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಗೊತ್ತಲ್ಲದೇ ತಪ್ಪು ಆಗಿದೆ ಎನ್ನುವದಕ್ಕಿಂತ. ಬೇಜವಾಬ್ದಾರಿಯಿಂದ ವಿದ್ಯಾರ್ಥಿನಿಯ ಭವಿಷ್ಯದ ಜೊತೆ ಚೆಲ್ಲಾಟ ಆಡಿರುವ ಬಗ್ಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.