ಇಂದಾದರೂ ಸಿಗುತ್ತಾ ಜಯ? ಕೈ ಹಿಡಿಯುತ್ತಾ ಕೇಪ್ ಟೌನ್: ಟೀಂ ಇಂಡಿಯಾದಲ್ಲಿ ನಾಲ್ಕು ಬದಲಾವಣೆ
Team Udayavani, Jan 23, 2022, 1:32 PM IST
ಕೇಪ್ ಟೌನ್: ಏಕದಿನ ಸರಣಿಯಲ್ಲಿ ಈಗಾಗಲೇ ಆಡಿರುವ ಎರಡು ಪಂದ್ಯಗಳನ್ನು ಸೋತಿರುವ ಟೀಂ ಇಂಡಿಯಾ ಇಂದಿನ ಅಂತಿಮ ಪಂದ್ಯದಲ್ಲಾದರೂ ಸಮಾಧಾನಕರ ಗೆಲುವು ಪಡೆಯಲು ಸಿದ್ದತೆ ನಡೆಸಿದೆ. ಪಾರ್ಲ್ ಮೈದಾನದಲ್ಲಿ ಕೈಕೊಟ್ಟ ಅದೃಷ್ಟ ಕೇಪ್ ಟೌನ್ ನಲ್ಲಿ ಕೈಹಿಡಿಯುತ್ತಾ ಎಂದು ಕಾದು ನೋಡಬೇಕಾಗಿದೆ.
ಇಲ್ಲಿನ ನ್ಯೂಲ್ಯಾಂಡ್ಸ್ ನಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ಕೆ.ಎಲ್ ರಾಹುಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.
ಭಾರತ ತಂಡ ಇಂದಿನ ಪಂದ್ಯಕ್ಕೆ ನಾಲ್ಕು ಬದಲಾವಣೆ ಮಾಡಿಕೊಂಡಿದೆ. ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್ ಮತ್ತು ವೆಂಕಟೇಶ್ ಅಯ್ಯರ್ ಬದಲಿಗೆ ಸೂರ್ಯ ಕುಮಾರ್, ಜಯಂತ್ ಯಾದವ್, ಪ್ರಸಿದ್ ಕೃಷ್ಣ ಮತ್ತು ದೀಪಕ್ ಚಾಹರ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಸರಣಿಯಲ್ಲಿ ಕೆ.ಎಲ್ ರಾಹುಲ್ ನಾಯಕತ್ವ ವಹಿಸಿದ ಮೂರೂ ಪಂದ್ಯಗಳಲ್ಲಿ ಭಾರತ ಪರಾಭವಗೊಂಡಿದೆ. ಹೀಗಾಗಿ ಯಶಸ್ಸಿಗಾಗಿ ಇರುವುದು ಒಂದೇ ಅವಕಾಶ. ಇದರಲ್ಲಿ ಗೆದ್ದರೆ ರಾಹುಲ್ ಜತೆಗೆ ಭಾರತ ತಂಡದ ಪ್ರತಿಷ್ಠೆಯೂ ಒಂದು ಮಟ್ಟದಲ್ಲಿ ಉಳಿದಂತಾಗುತ್ತದೆ.
ಆದರೆ ದಕ್ಷಿಣ ಆಫ್ರಿಕಾ ಎಂದಿನಂತೆ ನಿಶ್ಚಿಂತೆಯಲ್ಲಿದೆ. ಸೆಂಚುರಿಯನ್ ಟೆಸ್ಟ್ ಪಂದ್ಯ ಸೋತ ಬಳಿಕ ಎಚ್ಚೆತ್ತುಕೊಂಡು ಹೋರಾಟ ಸಂಘಟಿಸಿದ ಆತಿಥೇಯರ ಆಟ ನಿಜಕ್ಕೂ ನಮ್ಮವರಿಗೊಂದು ಪಾಠವಾಗಬೇಕಿತ್ತು. ಆದರೆ ಹಾಗಾಗಲಿಲ್ಲ.
ತಂಡಗಳು
ಭಾರತ: ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ಪ್ರಸಿದ್ಧ್ ಕೃಷ್ಣ, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ಜಾನೆಮನ್ ಮಲಾನ್, ಟೆಂಬ ಬವುಮ (ನಾಯಕ), ಐಡನ್ ಮಾರ್ಕ್ರಮ್, ರಸ್ಸಿ ವಾನ್ ಡರ್ ಡುಸೆನ್, ಡೇವಿಡ್ ಮಿಲ್ಲರ್, ಆ್ಯಂಡಿಲ್ ಫೆಲುಕ್ವಾಯೊ, ಕೇಶವ್ ಮಹಾರಾಜ್, ಡ್ವೇನ್ ಪ್ರಿಟೋರಿಯಸ್, ಮಾರ್ಕೊ ಜಾನ್ಸೆನ್, ಸಿಸಾಂಡ ಮಗಾಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು