ಕೈಮಗ್ಗ ನೇಕಾರಿಕೆಗೆ ಮನಸೋತ ಅಧಿಕಾರಿ : ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಮೌರ್ಯ ಭೇಟಿ


Team Udayavani, Jan 23, 2022, 3:08 PM IST

ಕೈಮಗ್ಗ ನೇಕಾರಿಕೆಗೆ ಮನಸೋತ ಅಧಿಕಾರಿ : ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಮೌರ್ಯ ಭೇಟಿ

ಮಹಾಲಿಂಗಪುರ : ನೇಕಾರ ಕರಕುಶಲತೆ ಮತ್ತು ಕೈಮಗ್ಗ ಬಟ್ಟೆಗಳಿಗೆ ಮನಸೋತ ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ ಅವರು ಶನಿವಾರ ಪಟ್ಟಣದ ಹಿರಿಯ ಕೈಮಗ್ಗ ನೇಕಾರರಾದ ಶಿವಶಂಕರ ಮೂಡಲಗಿ, ಮಲ್ಲಪ್ಪ ನಡಕಟ್ನಿ ಅವರ ಮನೆಗಳಿಗೆ ಭೇಟಿ ನೀಡಿದರು.

ಕೈಮಗ್ಗ ನೇಕಾರಿಕೆಯ ನೂಲು(ಖಂಡಕಿ) ಸುತ್ತುವುದು, ಸಂದರಕಿ ಹಾಕುವುದು, ಹಾಸು ಹೊಯ್ಯುವುದು, ವಾಡರ್‌ ಹಾಕುವುದು, ಟಾವೆಲ್‌ ನೇಯ್ಗೆ ಮಾಡುವುದನ್ನು ವೀಕ್ಷಿಸಿ ಮಾಹಿತಿ ಪಡೆದರು. ಸ್ವತಃ ತಾವೇ ಖಂಡಕಿ ಸುತ್ತಿ ಖುಷಿಪಟ್ಟರು. ಮಹಾಲಿಂಗಪ್ಪ ಸೋರಗಾಂವಿ ಅವರ ಮನೆಗೆ ಭೇಟಿ ನೀಡಿ, ಕುಣಿ ಕೈಮಗ್ಗ ವೀಕ್ಷಿಸಿ ಮಾಹಿತಿ ಪಡೆದರು.

ಸುಮಾರು 40ಕ್ಕೂ ಅಧಿಕ ಕೈಮಗ್ಗ ನೇಕಾರರಿಗೆ ಉದ್ಯೋಗ ನೀಡಿ, ಕೈಮಗ್ಗ ಉಳಿವಿಗೆ ಶ್ರಮಿಸುತ್ತಿರುವ ಪಟ್ಟಣದ ಶಿವಶಂಕರ ಮೂಡಲಗಿ ಹಾಗೂ ತಮ್ಮ 75ನೇ ವಯಸ್ಸಿನಲ್ಲಿಯೂ
ನೇಕಾರಿಕೆಯಲ್ಲಿ ತೊಡಗಿರುವ ಮಲ್ಲಪ್ಪ ನಡಕಟ್ನಿ ಅವರನ್ನು ಸನ್ಮಾನಿಸಿದರು.

ನೇಕಾರರನ್ನು ಸನ್ಮಾನಿಸಿ ಮಾತನಾಡಿದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ, ನೇಕಾರಿಕೆ ಅದೊಂದು ಅದ್ಭುತ ಕಲೆಯಾಗಿದೆ. ನೂಲಿನ ಎಳೆ ಎಳೆಗಳನ್ನು ಜೋಡಿಸಿ ಬಟ್ಟೆಗಳನ್ನು ತಯಾರಿಸುವ ಕೈಮಗ್ಗ ನೇಕಾರರ ಸಂಯಮ, ಶ್ರದ್ಧೆ, ಕಾಯಕ ನಿಷ್ಠೆ ಅಗಾಧವಾಗಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ದಾನೇಶ್ವರಿ ಕೈಮಗ್ಗ ಬಟ್ಟೆ ಉತ್ಪಾದನಾ ಘಟಕದ ಮಾಲೀಕ ಶಿವಶಂಕರ ಮೂಡಲಗಿ, ಕೈಮಗ್ಗ ನೇಕಾರಿಕೆ ಬಗ್ಗೆ ಪ್ರೀತಿ, ಅಭಿಮಾನ ಹೊಂದಿರುವ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕ
ರಾಜೇಶಕುಮಾರ ಮೌರ್ಯ ಅವರ ಸರಳತೆ, ಪ್ರೊತ್ಸಾಹವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಹಿರಿಯ ಕೈಮಗ್ಗ ನೇಕಾರ ಮಲ್ಲಪ್ಪ ಮ. ನಡಕಟ್ನಿ ಮಾತನಾಡಿ, ನಮ್ಮನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡು ಸನ್ಮಾನಿಸಿ-ಅಲ್ಲಿಯೇ ಒಂದು ವಾರದವರೆಗೆ ಕೈಮಗ್ಗ ಸ್ಥಾಪಿಸಿ, ನೇಕಾರಿಕೆ ಹಾಗೂ ಕೈಮಗ್ಗ ಬಟ್ಟೆಗಳನ್ನು ಪರಿಚಯಿಸಿದ್ದರು. ಈಗ ನಮ್ಮ ಮನೆಗೆ ಬಂದು ಸನ್ಮಾನಿಸಿ, ಪ್ರೊತ್ಸಾಹಿಸಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಮಹಾಲಿಂಗೇಶ್ವರ ಮಠಕ್ಕೆ ಭೇಟಿ: ನೇಕಾರರ ಮನೆಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಮಹಾಲಿಂಗೇಶ್ವರ
ಮಠದ ಪೀಠಾಧಿ ಪತಿ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಹಿರಿಯ ಕೈಮಗ್ಗ ನೇಕಾರ ಮಲ್ಲಪ್ಪ ನಡಕಟ್ನಿ ಅವರನ್ನು ಸನ್ಮಾನಿಸಿ-ಗೌರವಿಸಿದರು. ಗೋವಿಂದ ಕೆಳಕರ, ಸಂಜು ಹಳ್ಳಿ, ಮಹಾಂತೇಶ ಮೂಡಲಗಿ, ಸೋಮಶೇಖರ ಮೂಡಲಗಿ, ಈಶ್ವರ ಮಠದ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.