ಗೋವಾದಲ್ಲಿ ಶಾಸಕರು ಪಕ್ಷ ಬದಲಾಯಿಸಿದ್ದು ಭಾರತದಲ್ಲೇ ದಾಖಲೆ !

ಶೇಕಡಾ 60 ಅಭ್ಯರ್ಥಿಗಳು ಪಕ್ಷಾಂತರ ಪ್ರವೀಣರು...!

Team Udayavani, Jan 23, 2022, 3:40 PM IST

goa

ಪಣಜಿ: ಕೇವಲ 40 ವಿಧಾನಸಭಾ ಸದಸ್ಯ ಬಲ, ೨ ಲೋಕಸಭಾ ಸದಸ್ಯರನ್ನು ಹೊಂದಿರುವ ಗೋವಾ ರಾಜಕೀಯ ಕ್ಷೇತ್ರದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ‘ಸಾಟಿಯಿಲ್ಲದ’ ದಾಖಲೆ ನಿರ್ಮಿಸಿದೆ ಎಂದು ಸಂಘಟನೆಯೊಂದು ವರದಿ ಮಾಡಿದೆ.

ರಾಜ್ಯ ವಿಧಾನಸಭೆಯ ಒಟ್ಟು ಬಲದ ಶೇಕಡಾ 60 ರಷ್ಟಿರುವ ಗೋವಾದ 24 ಶಾಸಕರು ಕಳೆದ ಐದು ವರ್ಷಗಳಲ್ಲಿ ಪಕ್ಷಗಳನ್ನು ಬದಲಾಯಿಸಿದ್ದಾರೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ವರದಿಯಲ್ಲಿ ತಿಳಿಸಿದೆ.

”ಗೋವಾದಲ್ಲಿ ಫೆಬ್ರವರಿ 14 ರಂದು ವಿಧಾನಸಭೆ ಚುನಾವಣೆ ನಡೆಯಲಿದೆ.ಪ್ರಸ್ತುತ ವಿಧಾನಸಭೆಯ ಐದು ವರ್ಷಗಳ ಅವಧಿಯಲ್ಲಿ (2017-2022), 24 ಶಾಸಕರು ತಮ್ಮ ಪಕ್ಷಗಳನ್ನು ಬದಲಾಯಿಸಿದ್ದಾರೆ, ಇದು ಸದನದ ಒಟ್ಟು ಬಲದ ಶೇಕಡಾ 60 ರಷ್ಟಿದೆ. ಇದು ಭಾರತದಲ್ಲಿ ಬೇರೆಲ್ಲಿಯೂ ಸಂಭವಿಸಿಲ್ಲ. ಮತದಾರರ  ಸ್ಪಷ್ಟ ಆದೇಶದ ಸಂಪೂರ್ಣ ಅಗೌರವದ ಪ್ರತಿಬಿಂಬ ಇದು” ಎಂದು ಎಡಿಆರ್ ಹೇಳಿದೆ.

24 ಶಾಸಕರ ಪಟ್ಟಿಯಲ್ಲಿ ವಿಶ್ವಜಿತ್ ರಾಣೆ, ಸುಭಾಷ್ ಶಿರೋಡ್ಕರ್ ಮತ್ತು ದಯಾನಂದ್ ಸೋಪ್ಟೆ ಅವರು 2017 ರಲ್ಲಿ ಕಾಂಗ್ರೆಸ್ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು.

2019 ರಲ್ಲಿ ಹತ್ತು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಜಿಗಿದಿದ್ದರು. ಅವರಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಚಂದ್ರಕಾಂತ್ ಕಾವ್ಲೇಕರ್ (ಕ್ವಿಪೆಮ್ ಕ್ಷೇತ್ರ) ಸೇರಿದ್ದರು.ಬಿಜೆಪಿಗೆ ಸೇರಿದ ಇತರ ಕಾಂಗ್ರೆಸ್ ಶಾಸಕರೆಂದರೆ – ಜೆನ್ನಿಫರ್ ಮೊನ್ಸೆರೆಟ್ (ತಲೆಗಾವೊ), ಫ್ರಾನ್ಸಿಸ್ಕೊ ​​​​ಸಿಲ್ವೇರಿಯಾ (ಸೇಂಟ್ ಆಂಡ್ರೆ), ಫಿಲಿಪ್ ನೆರಿ ರೋಡ್ರಿಗಸ್ (ವೆಲಿಮ್), ವಿಲ್ಫ್ರೆಡ್ ನಜರೆತ್ ಮೆನಿನೊ ಡಿಸಾ (ನುವೆಮ್), ಕ್ಲಾಫಾಸಿಯೊ ಡಯಾಸ್ (ಕಂಕೋಲಿಮ್), ಆಂಟೋನಿಯೊ ಕ್ಯಾರೊನೊ ಫೆರ್ನಾಂಡಿಸ್ (ಸೇಂಟ್ ಕ್ರೂಜ್), ನೀಲಕಾಂತ್ ಹಲರ್ಕರ್ (ಟಿವಿಮ್), ಇಸಿಡೋರ್ ಫೆರ್ನಾಂಡಿಸ್ (ಕಾನ್ ಕೋನಾ), ಅಟಾನಾಸಿಯೊ ಮಾನ್ಸೆರೆಟ್ (ಮನೋಹರ್ ಪರಿಕ್ಕರ್ ಅವರ ನಿಧನದ ನಂತರ 2019 ರಲ್ಲಿ ಪಣಜಿ ಚುನಾವಣೆಯಲ್ಲಿ ಗೆದ್ದವರು).

ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಶಾಸಕರಾದ ದೀಪಕ್ ಪೌಸ್ಕರ್ (ಸಾನ್ವೋರ್ಡೆಮ್) ಮತ್ತು ಮನೋಹರ್ ಅಜ್ಗಾಂವ್ಕರ್ (ಪೆರ್ನೆಮ್) ಸಹ ಇದೇ ಅವಧಿಯಲ್ಲಿ ಬಿಜೆಪಿಗೆ ಸೇರಿದ್ದರು.

ಸಾಲಿಗಾವ್‌ನಿಂದ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ)ಯ ಜಯೇಶ್ ಸಲ್ಗೋಂಕರ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಇತ್ತೀಚೆಗೆ, ಗೋವಾದ ಮಾಜಿ ಮುಖ್ಯಮಂತ್ರಿ,ಪೋಂಡಾದ ಕಾಂಗ್ರೆಸ್ ಶಾಸಕ ರವಿ ನಾಯ್ಕ್, ಆಡಳಿತಾರೂಢ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಚುನಾವಣಾ ಅದೃಷ್ಟವನ್ನು ಪರೀಕ್ಷಿಸುತ್ತಿರುವ ತೃಣಮೂಲ ಕಾಂಗ್ರೆಸ್ ಗೆ ಮತ್ತೊಬ್ಬ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಲೂಯಿಜಿನ್ಹೋ ಫಲೈರೊ (ನವೇಲಿಮ್) ಸೇರಿದ್ದರು.

2017ರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಟಿಕೆಟ್‌ನಲ್ಲಿ ಗೆದ್ದಿದ್ದ ಮಾಜಿ ಸಿಎಂ ಚರ್ಚಿಲ್ ಅಲೆಮಾವೊ ಕೂಡ ಇತ್ತೀಚೆಗೆ ಟಿಎಂಸಿಗೆ ಸೇರಿದ್ದಾರೆ.

ಕರ್ಟೋರಿಮ್‌ನ ಕಾಂಗ್ರೆಸ್ ಶಾಸಕ ಅಲೆಕ್ಸೊ ರೆಜಿನಾಲ್ಡೊ ಲೌರೆಂಕೊ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಸೇರ್ಪಡೆಗೊಂಡು ಬಳಿಕ ರಾಜೀನಾಮೆ ನೀಡಿ ಮತ್ತೆ ಕಾಂಗ್ರೆಸ್‌ಗೆ ಮರಳಲು ಬಯಸಿದ್ದರಾದರೂ ಪಕ್ಷ ತೆಗೆದುಕೊಳ್ಳದ ಕಾರಣ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

2019ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮತ್ತೋರ್ವ ಶಾಸಕ ವಿಲ್ಫ್ರೆಡ್ ಡಿಸಾ ಅವರು ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ದೀಪಕ್ ಪೌಸ್ಕರ್ ಕೂಡ ಬಿಜೆಪಿ ತೊರೆದಿದ್ದಾರೆ.

ಸ್ವತಂತ್ರ ಶಾಸಕರಾದ ರೋಹನ್ ಖೌಂಟೆ (ಪೋರ್ವೊರಿಮ್) ಮತ್ತು ಗೋವಿಂದ್ ಗೌಡೆ (ಪ್ರಿಯೋಲ್) ಬಿಜೆಪಿಗೆ ಸೇರ್ಪಡೆಗೊಂಡರೆ, ಮತ್ತೊಬ್ಬ ಸ್ವತಂತ್ರ ಶಾಸಕ ಪ್ರಸಾದ್ ಗಾಂವ್ಕರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಪಕ್ಷ ತೊರೆದ ಬಿಜೆಪಿ ಶಾಸಕರೆಂದರೆ, ಈಗ ಎಂಜಿಪಿಗೆ ಸೇರ್ಪಡೆಗೊಂಡಿರುವ ಪ್ರವೀಣ್ ಜಾಂತ್ಯೆ (ಮೇಮ್), ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಮೈಕೆಲ್ ಲೋಬೋ (ಕಲಾಂಗುಟ್), ಜೋಸ್ ಲೂಯಿಸ್ ಕಾರ್ಲೋಸ್ ಅಲ್ಮೇಡಾ (ವಾಸ್ಕೋ ಡ ಗಾಮಾ) ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಅಲೀನಾ ಸಲ್ಡಾನ್ಹಾ (ಕೋರ್ಟಲಿಮ್) ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಗೊಂಡಿದ್ದಾರೆ.

ಪಕ್ಷಾಂತರ ಮತ್ತು ಶಾಸಕರ ರಾಜೀನಾಮೆ ನಂತರ ಸದನದಲ್ಲಿ ಕಾಂಗ್ರೆಸ್‌ನ ಪ್ರಸ್ತುತ ಸಂಖ್ಯಾಬಲ ಎರಡಾಗಿದ್ದರೆ, ಬಿಜೆಪಿಯ ಬಲ 27 ಆಗಿದೆ.

ಟಿಎಂಸಿಯ ಪ್ರವೇಶ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿಯ ಆಕ್ರಮಣಕಾರಿ ಪ್ರಚಾರದೊಂದಿಗೆ ಗೋವಾದ ಚುನಾವಣಾ ಕದನವು ಬಹು-ಕೋನವಾಗಿದೆ. ಇಲ್ಲಿಯವರೆಗೆ, ಪ್ರಾದೇಶಿಕ ಎಂಜಿಪಿ ಮತ್ತು ಟಿಎಂಸಿ ನಡುವೆ ಮತ್ತು ಕಾಂಗ್ರೆಸ್ ಮತ್ತು ಜಿಎಫ್‌ಪಿ ನಡುವೆ ಚುನಾವಣಾ ಮೈತ್ರಿಗಳನ್ನು ರೂಪಿಸಲಾಗಿದೆ.

2017 ರ ಚುನಾವಣೆಯಲ್ಲಿ, 40 ಸದಸ್ಯ ಬಲದ ಸದನದಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು, ಆದರೆ 13 ಸ್ಥಾನಗಳನ್ನು ಗಳಿಸಿದ ಬಿಜೆಪಿ ಕೆಲವು ಪಕ್ಷೇತರರು ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.