ಕೋವಿಡ್‌-19ನಿಂದ ಚೇತರಿಸಿಕೊಂಡ ಬಳಿಕ ಹಲ್ಲುಜ್ಜುವ ಬ್ರಶ್‌ ಯಾಕೆ ಬದಲಾಯಿಸಬೇಕು?


Team Udayavani, Jan 23, 2022, 5:39 PM IST

ಕೋವಿಡ್‌-19ನಿಂದ ಚೇತರಿಸಿಕೊಂಡ ಬಳಿಕ ಹಲ್ಲುಜ್ಜುವ ಬ್ರಶ್‌ ಯಾಕೆ ಬದಲಾಯಿಸಬೇಕು?

ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿವೆ. ಒಂದು ಬಾರಿ ಕೊರೊನಾ ವೈರಸ್‌ ಸೋಂಕಿಗೀಡಾಗಿ ಗುಣಮುಖನಾಗಿ ಚೇತರಿಸಿಕೊಂಡ ವ್ಯಕ್ತಿಯು ಮತ್ತೂಮ್ಮೆ ಕೋವಿಡ್‌-19 ಸೋಂಕಿಗೀಡಾಗಬಹುದು ಎಂಬುದು ಈಗಾಗಲೇ ಸಾಬೀತಾಗಿದೆ. ಸೋಂಕನ್ನು ತಡೆಗಟ್ಟಲು ಲಸಿಕೆ ಹಾಕಿಸಿಕೊಳ್ಳುವುದು ಪ್ರಧಾನ ಮಾರ್ಗೋ ಪಾಯವಾಗಿದ್ದರೂ ಎಲ್ಲ ಸನ್ನಿವೇಶಗಳಲ್ಲಿ, ಎಲ್ಲ ಸಮಯದಲ್ಲಿ ಲಸಿಕೆಯಿಂದಲೂ ಪೂರ್ಣ ಪ್ರಮಾಣದ ರಕ್ಷಣೆ ಸಿಗುವುದಿಲ್ಲ ಎಂಬ ಅಭಿಪ್ರಾಯ ತಜ್ಞರದ್ದಾಗಿದೆ.
ಈ ಹಿನ್ನೆಲೆಯಲ್ಲಿ ಇದುವರೆಗೆ ಸೋಂಕಿಗೀಡಾಗದವರು ಮತ್ತು ಇತ್ತೀಚೆಗೆ ಕೋವಿಡ್‌-19ಕ್ಕೆ ಒಳಗಾಗಿ ಚೇತರಿಸಿಕೊಂಡವರು ಮುನ್ನೆಚ್ಚರಿಕೆಗಳನ್ನು ವಹಿಸುವುದು ಬಹಳ ಮುಖ್ಯವಾಗಿದೆ.

ಇತ್ತೀಚೆಗೆ ಕೋವಿಡ್‌-19 ಸೋಂಕಿಗೆ ತುತ್ತಾದವರು ಚೇತರಿಸಿಕೊಂಡ ಕೂಡಲೇ ಹಲ್ಲುಜ್ಜುವ ಬ್ರಶ್‌ ಬದಲಾಯಿಸಿಕೊಳ್ಳು ವುದು ಒಳ್ಳೆಯದು ಎಂದು ದಂತವೈದ್ಯರು ಅಭಿಪ್ರಾಯಪಡುತ್ತಾರೆ. ಇದರಿಂದ ಅವರು ಸ್ವತಃ ಮರಳಿ ಸೋಂಕಿಗೆ ತುತ್ತಾಗುವ ಅಪಾಯ ದೂರವಾಗುವುದಷ್ಟೇ ಅಲ್ಲದೆ ಮನೆಯಲ್ಲಿ ಅದೇ ವಾಶ್‌ರೂಮ್‌ ಉಪಯೋಗಿಸುವ ಇತರರು ಕೂಡ ಸೋಂಕಿಗೆ ತುತ್ತಾಗುವ ಅಪಾಯವನ್ನು ತಡೆಯಬಹುದು ಎನ್ನುತ್ತಾರೆ ದಂತವೈದ್ಯರು.

ಸೋಂಕು ಇನ್ನಷ್ಟು ಮಂದಿಗೆ ಪ್ರಸಾರವಾಗುವುದನ್ನು ತಡೆಯಲು ರೋಗಿಯು ಕೋವಿಡ್‌-19ನಿಂದ ಚೇತರಿಸಿಕೊಂಡ ಕೂಡಲೇ ಹಲ್ಲುಜ್ಜುವ ಬ್ರಶ್‌ ಮತ್ತು ಟಂಗ್‌ ಕ್ಲೀನರ್‌ ಇತ್ಯಾದಿಗಳನ್ನು ಬದಲಾಯಿಸಬೇಕು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಇವುಗಳಲ್ಲಿ ವೈರಾಣುಗಳು ಅಡಗಿರಬಹುದು, ಹೀಗಾಗಿ ಅವುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂಬುದಾಗಿ ಅವರು ಹೇಳುತ್ತಾರೆ.

ನಾವು ಇನ್ನು ಕೂಡ ಕೋವಿಡ್‌-19 ಸಾಂಕ್ರಾಮಿಕದ ವಿರುದ್ಧ ಹೋರಾಟ ನಡೆಸುತ್ತಿದ್ದು, ಹೊಸ ಹೊಸ ರೂಪಾಂತರಿಗಳನ್ನು ಪತ್ತೆಯಾಗುತ್ತಲೇ ಇವೆ. ಹೀಗಾಗಿ ಈ ವೈರಾಣುವಿನ ಪ್ರಸರಣವನ್ನು ತಡೆಯಲು ಎಲ್ಲ ರೀತಿಗಳಲ್ಲಿಯೂ ಸಹಕರಿಸಬೇಕಾದದ್ದು ನಮ್ಮ ಸಾಮಾಜಿಕ ಮತ್ತು ವೈಯಕ್ತಿಕ ಜವಾಬ್ದಾರಿಯಾಗಿದೆ.
ನಾವು ಕೋವಿಡ್‌-19 ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ತತ್‌ಕ್ಷಣ ನಮ್ಮ ಹಲ್ಲುಜ್ಜುವ ಬ್ರಶ್‌ ಮತ್ತು ಟಂಗ್‌ ಕ್ಲೀನರ್‌ ಇತ್ಯಾದಿಗಳನ್ನು ಬದಲಾಯಿಸಿಕೊಳ್ಳುವುದು ನಮ್ಮ ಕುಟುಂಬದವರು ಮತ್ತು ನಿಕಟವರ್ತಿಗಳನ್ನು ಸೋಂಕಿನಿಂದ ಕಾಪಾಡುವಲ್ಲಿ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

-ಡಾ| ಆನಂದದೀಪ್‌ ಶುಕ್ಲಾ
ಅಸೋಸಿಯೇಟ್‌ ಪ್ರೊಫೆಸರ್‌
ಮಣಿಪಾಲ ದಂತವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯ, ಮಾಹೆ, ಮಣಿಪಾಲ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.