ಫೆ. 11: ಶ್ರೀ ರಾಮಾಂಜನೇಯ-ಶಿವಪಂಚಾಕ್ಷರಿ ಯಕ್ಷಗಾನ ಪ್ರದರ್ಶನ


Team Udayavani, Jan 24, 2022, 11:12 AM IST

ಫೆ. 11: ಶ್ರೀ ರಾಮಾಂಜನೇಯ-ಶಿವಪಂಚಾಕ್ಷರಿ ಯಕ್ಷಗಾನ ಪ್ರದರ್ಶನ

ಮುಂಬಯಿ: ನಗರದ ಹೊಟೇಲ್‌ ಉದ್ಯಮಿ, ಸಮಾಜ ಸೇವಕ, ಕಲಾಪೋಷಕ ದಿ| ಮರಾಠ ಸುರೇಶ್‌ ಶೆಟ್ಟಿ ಅವರ ಸ್ಮರಣಾರ್ಥ ಊರಿನ ತೆಂಕು -ಬಡಗು ತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ರಾಮಾಂಜ ನೇಯ-ಶಿವಪಂಚಾಕ್ಷರಿ ಮಹಿಮೆ ಅದ್ದೂರಿ ಯಕ್ಷಗಾನ ಪ್ರದರ್ಶನವು ಫೆ. 11ರಂದು ಅಪರಾಹ್ನ 2ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಲಿದೆ.

ಮೂಲತಃ ಹರ್ಕಾಡಿ ದೊಡ್ಮನೆ ಯವರಾದ ಸುರೇಶ್‌ ಶೆಟ್ಟಿ ಅವರು ತನ್ನ ಹೊಟೇಲ್‌ ಮರಾಠಾ ನಾಮದೊಂದಿಗೆ ಪ್ರಸಿದ್ಧಿಯನ್ನು ಪಡೆದು ಮರಾಠ ಸುರೇಶ್‌ ಶೆಟ್ಟಿ ಎಂದೇ ಚಿರಪರಿಚಿತರು. ಯಕ್ಷಗಾನದ ಅನನ್ಯ ಸೇವಕರಾಗಿ, ಅಪರಿಮಿತ ಗೌರವದೊಂದಿಗೆ ಕಲೆ-ಕಲಾವಿದರಿಗೆ ಬೆಲೆ-ನೆಲೆಯನ್ನು ನೀಡುತ್ತಾ ಕಲಾವಿದರ ಪಾಲಿನ ಆಶಾಕಿರಣವಾಗಿ ತನ್ನೂರ ಅಭಿವೃದ್ಧಿಯಲ್ಲೂ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ಅಕಾಲಿಕ ನಿಧನ ಮುಂಬಯಿ ತುಳು-ಕನ್ನಡಿಗರಿಗೆ ಹಾಗೂ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರತಿ ವರ್ಷ ತಿರುಪತಿಯನ್ನು ಸಂದರ್ಶಿಸುವ ತಿರುಪತಿ ಬಳಗ ಎಂದೇ ಗುರುತಿಸಿಕೊಂಡಿರುವ ಸುರೇಶ್‌ ಶೆಟ್ಟಿ ಅವರ ಆತ್ಮೀಯ ಮಿತ್ರರು ಒಂದಾಗಿ ಅವರ ಪ್ರಥಮ ಪುಣ್ಯಸ್ಮರಣೆ ಯನ್ನು ಅವಿಸ್ಮರಣೀ ಯವಾಗಿಸಲು ಮುಂದಾಗಿದ್ದಾರೆ.

ಯಕ್ಷಧ್ರುವ ಪಟ್ಲ ಸತೀಶ್‌ ಶೆಟ್ಟಿ ಅವರೊಂದಿಗೆ ಸಭೆ :

ಇತ್ತೀಚೆಗೆ ಮುಂಬಯಿಗೆ ಆಗಮಿಸಿದ ಪ್ರಸಿದ್ಧ ಭಾಗವತ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಇದರ ರೂವಾರಿ ಪಟ್ಲ ಸತೀಶ್‌ ಶೆಟ್ಟಿ ಅವರ ಜತೆ ತಿರುಪತಿ ಬಳಗದ ಸದಸ್ಯರಾದ ಮುಲುಂಡ್‌ ಬಂಟ್ಸ್‌ನ ಅಧ್ಯಕ್ಷ ವಸಂತ್‌ ಶೆಟ್ಟಿ ಪಲಿಮಾರು, ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಮುಲುಂಡ್‌ ಬಂಟ್ಸ್‌ನ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್‌ ಅಡ್ಯಂತಾಯ, ಯಕ್ಷಧ್ರುವ ಪಟ್ಲ ಫೌಂಡೇಷನ್‌ ಮುಂಬಯಿ ಸಮಿತಿಯ ಕಾರ್ಯದರ್ಶಿ ಕರ್ನೂರು ಮೋಹನ್‌ ರೈ ಅವರು ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಮಾತುಕತೆ ನಡೆಸಿದರು.

ಊರಿನ 35ಕ್ಕೂ ಅಧಿಕ ಪ್ರಸಿದ್ಧ ಕಲಾವಿದರ ಸಮಾಗಮ :

ಶ್ರೀ ರಾಮಾಂಜನೇಯ ಅದ್ದೂರಿ ಯಕ್ಷಗಾನ ಪ್ರದರ್ಶನದಲ್ಲಿ ಭಾಗವತರಾಗಿ ರಾಘವೇಂದ್ರ ಆಚಾರ್ಯ ಜನ್ಸಾಲೆ, ಸುರೇಶ್‌ ಶೆಟ್ಟಿ ಶಂಕರನಾರಾಯಣ, ವಿನಯ್‌ ಶೆಟ್ಟಿ ಬೆಂಗಳೂರು ಹಾಗೂ ಪ್ರಮುಖ ಪಾತ್ರಧಾರಿಗಳಾಗಿ ಶ್ರೀರಾಮನಾಗಿ ಆರೊYàಡು ಮೋಹನ್‌ದಾಸ್‌ ಶೆಣೈ, ಹನುಮಂತನಾಗಿ ಕುಮಟಾ ಗಣಪತಿ ನಾಯಕ್‌ ಸೇರಿದಂತೆ ಬಡಗುತಿಟ್ಟಿನ ಹೆಸರಾಂತ ಮೇಳಗಳ ಕಲಾವಿದರು ಭಾಗವಹಿಸಲಿದ್ದಾರೆ. ತೆಂಕುತಿಟ್ಟಿನ ಕಲಾವಿದರಿಂದ ಶಿವಪಂಚಾಕ್ಷರಿ ಮಹಿಮೆ ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ಪಟ್ಲ ಸತೀಶ್‌ ಶೆಟ್ಟಿ ಅವರ ಸಹಿತ ತೆಂಕು ತಿಟ್ಟಿನ ಖ್ಯಾತ ಕಲಾವಿದರು ಭಾಗವಹಿಸಲಿದ್ದಾರೆ. ಹಾಸ್ಯದಲ್ಲಿ ಸೀತಾರಾಮ್‌ ಕುಮಾರ್‌ ಕಟೀಲು ಅವರು ತೆಂಕು-ಬಡಗು ತಿಟ್ಟಿನ ಎರಡು ಪ್ರಸಂಗಗಳಲ್ಲೂ ಭಾಗವಹಿಸಲಿದ್ದಾರೆ. ಊರಿನ 35ಕ್ಕೂ ಹೆಚ್ಚಿನ ಕಲಾವಿದರ ಸಮ್ಮಿಲನ ಸಮಾರಂಭದ ವಿಶೇಷತೆಯಾಗಿದೆ.

ಕಲಾವಿದರ ಪಾಲಿನ ಕಾಮಧೇನು :

ಮರಾಠ ಸುರೇಶ್‌ ಶೆಟ್ಟಿ ಅವರು ಹೊಟೇಲ್‌ ಉದ್ಯಮಿಯಾಗಿದ್ದುಕೊಂಡು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಊರಿನಿಂದ ಬರುವ ಕಲಾವಿದರಿಗೆ ತನ್ನ ಮನೆ-ಹೊಟೇಲ್‌ಗ‌ಳಲ್ಲಿ ನಿಲ್ಲಲು ವ್ಯವಸ್ಥೆ ಮಾಡುತ್ತಿದ್ದ ಅವರು ಕಲಾವಿದರ ಪಾಲಿನ ಕಾಮಧೇನು ಎಂದೇ ಪ್ರಸಿದ್ಧರಾಗಿದ್ದರು. ಕಷ್ಟ ಎಂದು ಬಂದವರನ್ನು ಎಂದೂ ಕೈಬಿಟ್ಟವರಲ್ಲ. ಆರ್ಥಿಕವಾಗಿ ಹಿಂದುಳಿದ ಹೆಣ್ಮಕ್ಕಳ ಮದುವೆಗೆ ಆರ್ಥಿಕ ನೆರವು, ವೈದ್ಯಕೀಯ ನೆರವನ್ನು ಸಹಕರಿಸುತ್ತಿದ್ದರು. ಕಲಾವಿದರಾಗಿಯೂ ಗುರುತಿಸಿಕೊಂಡಿದ್ದ ಅವರು ತನ್ನ ಭಾಗವತಿಕೆಯ ಮೂಲಕ ಮಿತ್ರ ಬಳಗವನ್ನು ರಂಜಿಸುತ್ತಿದ್ದರು. ಯಕ್ಷಗಾನ ಕಲೆ, ಕಲಾವಿದರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದ ಅವರು ಕಲೆಗೆ ನೀಡುತ್ತಿದ್ದ ಪ್ರೋತ್ಸಾಹ, ಕಲಾವಿದರಿಗೆ ನೀಡುತ್ತಿದ್ದ ಸಹಾಯಹಸ್ತ ಇತರರಿಗೆ ಮಾದರಿಯಾಗಿದೆ. ಅವರ ಸಮಾಜ ಸೇವೆ-ಕಲಾಸೇವೆಯನ್ನು ಉಳಿಸಿ -ಬೆಳೆಸುವುದರೊಂ ದಿಗೆ, ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಳು -ಕನ್ನಡಿಗರು ಸಹಕರಿಸುವಂತೆ ತಿರುಪತಿ ಬಳಗದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.