ಒಕ್ಕಲಿಗರು ಜೆಡಿಎಸ್‌ ತೊರೆಯುತ್ತಿದ್ದಾರೆ: ಲಕ್ಷ್ಮಣ್‌


Team Udayavani, Jan 24, 2022, 12:30 PM IST

ಒಕ್ಕಲಿಗರು ಜೆಡಿಎಸ್‌ ತೊರೆಯುತ್ತಿದ್ದಾರೆ: ಲಕ್ಷ್ಮಣ್‌

ಮೈಸೂರು: ಒಕ್ಕಲಿಗ ಸಮುದಾಯಕ್ಕೆ ನಾನೇ ಪ್ರಬಲ ನಾಯಕ ಎಂದುಕೊಂಡಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ, ಈಗ ಆ ಸಮುದಾಯಜೆಡಿಎಸ್‌ನಿಂದ ವಿಮುಖವಾಗುವ ಮೂಲಕ ಶಾಕ್‌ನೀಡುತ್ತಿದೆ. ಅದಕ್ಕಾಗಿ ಅವರು ಮಾನಸಿಕ ಸ್ಥಿಮಿತಕಳೆದುಕೊಂಡವರಂತೆ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂದು ಎಂ. ಲಕ್ಷ್ಮಣ್‌ ವ್ಯಂಗ್ಯವಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ವಾಗ್ಧಾಳಿ ನಡೆಸಿದ್ದರಸಂಬಂಧ ನಗರದ ಕಾಂಗ್ರೆಸ್‌ಕಚೇರಿಯಲ್ಲಿ ಭಾನುವಾರ ಮಧ್ಯಾಹ್ನ ಸುದ್ದಿಗೋಷ್ಠಿನಡೆಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಇದೇ ಮೊದಲಿಗೆ ವಿರೋಧ ಪಕ್ಷವೊಂದನ್ನು ಮತ್ತೂಂದು ವಿರೋಧ ಪಕ್ಷ ಟೀಕಿಸುವ, ಆರೋಪ ಮಾಡುತ್ತಿರುವುದು ರಾಜ್ಯದಲ್ಲಿ ನಡೆಯುತ್ತಿದೆ. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಆಡಳಿತಪಕ್ಷದ ಜನ ವಿರೋಧಿ ನೀತಿ ವಿರೋಧಿಸುವ ಬದಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಅಸಂಸದೀಯ ಪದ ಬಳಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅವರು ತಮ್ಮನ್ನು ಒಕ್ಕಲಿಗರ ಚಾಂಪಿಯನ್‌ ಅಂದುಕೊಂಡಿದ್ದರು. ಆದರೆ ಒಕ್ಕಲಿಗರು ಜೆಡಿಎಸ್‌ ಬಿಟ್ಟು ಹೋಗುತ್ತಿದ್ದಾರೆ. 5 ವರ್ಷಗಳ ಹಿಂದೆ 08 ಮಂದಿ ಒಕ್ಕಲಿಗ ನಾಯಕರು ಕಾಂಗ್ರೆಸ್‌ ಸೇರಿದ್ದರು. ಈಗ 4-5 ಮಂದಿ ಸೇರಿದ್ದರೆ, ಮುಂದಿನ ದಿನಗಳಲ್ಲಿ 15ಮಂದಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಲುಮಾತುಕತೆ ನಡೆಸಿದ್ದಾರೆ. ಇವರಲ್ಲಿ 10 ಜನ ಒಕ್ಕಲಿಗರೇಆಗಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಎಚ್‌ಡಿಕೆಯವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಅದಕ್ಕಾಗಿ ಕೀಳು ಪದಗಳಲ್ಲಿ ವಿಪಕ್ಷ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆಂದರು. ಮೈಸೂರು ಜಿಲ್ಲಾಡಳಿತ ಮಕ್ಕಳ ಸೋಂಕು ಕುರಿತಂತೆ ಅಂಕಿ ಅಂಶ ಮುಚ್ಚಿಡುತ್ತಿದೆ ಎಂದರು.

ಉಸ್ತುವಾರಿ ಸಚಿವರ ಕೊಡುಗೆ ಶೂನ್ಯ: ಮೈಸೂರು ಜಿಲ್ಲೆಗೆ ಉಸ್ತುವಾರಿ ಮಂತ್ರಿಯಾಗಿ ಬಂದಿರುವ ಎಸ್‌.ಟಿ.ಸೋಮಶೇಖರ್‌ ಅವರು ಕಳೆದ ಒಂದೂವರೆ ವರ್ಷದಿಂದ ಒಂದು ನಯಾ ಪೈಸೆ ಅನುದಾನ ತಂದಿಲ್ಲ.ಕೆಲವರು ಮುಡಾ ಕಚೇರಿಯನ್ನು ರಿಯಲ್‌ ಎಸ್ಟೇಟ್‌ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮುಡಾ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದರು.

ರಾತ್ರಿ 7 ಗಂಟೆ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾರಿಗೂ ಸಿಗುತ್ತಿಲ್ಲ. ಅವರು ಹಿರಿಯ ಸಚಿವರೊಬ್ಬರ ಬಳಿ ಟ್ಯೂಷನ್‌ಗೆ ಹೋಗುತ್ತಿದ್ದಾರೆ ಎಂದು ಜನರೇ ಮಾತನಾಡುತ್ತಿದ್ದಾರೆ. ಇತ್ತ ಗೃಹ ಸಚಿವರು ಮಾಧ್ಯಮ ಹೇಳಿಕೆಗೆ ಸೀಮಿತವಾಗಿದ್ದಾರೆಂದು ಲೇವಡಿ ಮಾಡಿದರು.

ಫ್ಯಾಮಿಲಿ ಟ್ರಸ್ಟ್ ಎಂಬುದು ಸ್ಪಷ್ಟವಾಗಿದೆ :

ಕುಮಾರಸ್ವಾಮಿ ಅವರು ಒಕ್ಕಲಿಗರನ್ನು ಗುತ್ತಿಗೆ ತೆಗೆದುಕೊಂಡಿಲ್ಲ. ಒಕ್ಕಲಿಗರಿಗೆ ಜೆಡಿಎಸ್‌ ಫ್ಯಾಮಿಲಿಟ್ರಸ್ಟ್ ಎಂಬುದು ಸ್ಪಷ್ಟವಾಗಿದೆ. ರಾಮನಗರ,ಚನ್ನಪಟ್ಟಣ ಕ್ಷೇತ್ರದಲ್ಲಿ ನಿಮ್ಮ ಕುಟುಂಬದವರ ಬದಲಿಗೆಒಕ್ಕಲಿಗ ಸಮುದಾಯ ಮುಖಂಡರಿಗೆ ಟಿಕೆಟ್‌ ನೀಡಿಎಂದು ಸವಾಲು ಹಾಕಿದ ಅವರು, ಜೆಡಿಎಸ್‌ನಲ್ಲಿ ನಿಮ್ಮಮುಂದೆ ಮತ್ತೂಬ್ಬ ಒಕ್ಕಲಿಗ ನಾಯಕನನ್ನು ಬೆಳೆಯಲುಬಿಟ್ಟಿಲ್ಲ. ಕಂತ್ರಿ ರಾಜಕಾರಣ ಮಾಡುತ್ತಿರುವವರುಯಾರು ಎಂಬುದು ಜನರಿಗೆ ಗೊತ್ತಿದೆ. ಹೀಗಾಗಿಶೇ.80 ಮಂದಿ ಒಕ್ಕಲಿಗ ಸಮುದಾಯ ಜೆಡಿಎಸ್‌ನಿಂದ ದೂರವಾಗಿದೆ ಎಂದು ಲಕ್ಷ್ಮಣ್‌ ದೂರಿದರು.

ಬಿಜೆಪಿಗೆ ಕನ್ನಡ ಭಾಷೆ ಮೇಲೆಅಸಡ್ಡೆ. 2008ರಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನನೀಡಿತ್ತು. ಆದರೆ ಇಲ್ಲಿಯವರೆಗೆ ಸ್ವಂತಕಟ್ಟಡ ಸಿಕ್ಕಿಲ್ಲ. ಸಂಸ್ಕೃತ ಭಾಷೆಗೆ 1200 ಕೋಟಿ, ತೆಲುಗು ಭಾಷೆಗೆ 75ಕೋಟಿ, ತಮಿಳು ಭಾಷೆಗೆ 50ನೀಡಿರುವ ಕೇಂದ್ರ ಸರ್ಕಾರ, ಕನ್ನಡಭಾಷೆಗೆ ಕೇವಲ 08 ಕೋಟಿ ನೀಡುವಮೂಲಕ ಕರ್ನಾಟಕವನ್ನು ಕಡೆಗಣಿಸುತ್ತಲೇ ಬಂದಿದೆ. ಎಂ.ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.