ಹೆಚ್ಚಾಗುತ್ತಿದೆ ಕೆಮ್ಮು-ನೆಗಡಿ-ಜ್ವರ


Team Udayavani, Jan 24, 2022, 2:43 PM IST

20cold

ದೇವದುರ್ಗ: ಹವಾಮಾನ ಬದಲಾದ ಹಿನ್ನೆಲೆಯಲ್ಲಿ ಶೀತ, ಕೆಮ್ಮು, ಜ್ವರ, ನೆಗಡಿ ಮಕ್ಕಳು ಸೇರಿದಂತೆ ಎಲ್ಲರಿಗೂ ವ್ಯಾಪಿಸಿದೆ. ಸರಕಾರಿ-ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆಯೂ ಹೆಚ್ಚಾಗಿದೆ.

ಪಟ್ಟಣ ಸೇರಿ ತಾಲೂಕಿನಾದ್ಯಂತ ಜನರಲ್ಲಿ ಜ್ವರದ ಬಾಧೆ ಹೆಚ್ಚಾಗುತ್ತಿದ್ದು, ಮಕ್ಕಳಿಂದ ಹಿಡಿದು ವಯಸ್ಕರು,ವೃದ್ಧರವರೆಗೂ ಜ್ವರ ಜೀವ ಹಿಂಡುತ್ತಿದೆ. ಪ್ರತಿದಿನ ರೋಗಿಗಳ ಸಂಖ್ಯೆ 350ರ ಗಡಿ ದಾಟಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲಾ-ಕಾಲೇಜು, ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ಹೆಚ್ಚಾಗಿವೆ.

ಜಾಲಹಳ್ಳಿ ವರಟಗೇರ ಸರಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಕ್ಕಳಿಗೆ ಕೋವಿಡ್‌ ಟೆಸ್ಟ್‌ ಮಾಡಲಾಗಿದೆ. ಶೀತ, ಕೆಮ್ಮು, ನೆಗಡಿ, ಜ್ವರ ಲಕ್ಷಣಗಳು ಕಂಡು ಬಂದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಮೇಲೆ ಶಾಲೆಗಳಿಗೆ ಬರುವಂತೆ ಸೂಚನೆ ನೀಡಲಾಗುತ್ತಿದೆ. ವಾರವಾದರೂ ಜ್ವರ ಕಡಿಮೆ ಆಗದೇ ಇದ್ದಲ್ಲಿ ಅಂತಹ ರೋಗಿಗಳಿಗೆ ಡೆಂಘೀ ರಕ್ತ ಪರೀಕ್ಷೆ ಮಾಡಲಾಗುತ್ತಿದೆ.

ಕೊರೊನಾ ಮೂರನೇ ಅಲೆಯಲ್ಲಿ ಬಹುತೇಕ ಮಕ್ಕಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಆರೋಗ್ಯ ಇಲಾಖೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಮಾಸ್ಕ್, ಹಾಕಿಕೊಳ್ಳುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಳ್ಳಿಗಳಲ್ಲಿ ಜಾಗೃತಿ ಸಾರಿದೆ.

ಬದಲಾದ ಹವಾಮಾನ ಹಿನ್ನೆಲೆಯಲ್ಲಿ ಬಹುತೇಕರಲ್ಲಿ ಕೆಮ್ಮು, ಶೀತ, ನೆಗಡಿ, ಜ್ವರದ ಲಕ್ಷಣಗಳು ಕಂಡು ಬರುತ್ತಿವೆ. ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಒಬ್ಬರಿಂದ ಮತ್ತೂಬ್ಬರಿಗೆ ವೈರಲ್‌ ಹರಡುತ್ತಿದೆ. -ಡಾ|ಬನದೇಶ್ವರ, ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.