ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ: ಜಾಧವ್‌


Team Udayavani, Jan 25, 2022, 11:26 AM IST

4land

ಚಿಂಚೋಳಿ: ತಾಲೂಕಿನ ರೈತರ ಜೀವನಾಡಿ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಪ್ರತಿ ವರ್ಷ ಮಳೆಗಾಲದಲ್ಲಿ ಹೆಚ್ಚುವರಿ ನೀರು ಅನಾವಶ್ಯಕವಾಗಿ ಹರಿದು ಹೋಗುತ್ತಿದೆ. ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆದು ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಿ ಕೊಡುವುದಕ್ಕಾಗಿ ಗ್ರಾಮಸ್ಥರ ಬೇಡಿಕೆಯಂತೆ ಬ್ರಿಡ್ಜ್-ಕಮ್‌-ಬ್ಯಾರೇಜ್‌ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಶಾಸಕ ಡಾ|ಅವಿನಾಶ ಜಾಧವ್‌ ಹೇಳಿದರು.

ತಾಲೂಕಿನ ಕನಕಪುರ ಗ್ರಾಮದಲ್ಲಿ ಸಣ್ಣನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 2021-22ನೇ ಸಾಲಿನ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆ ಅಡಿ ಗಾರಂಪಳ್ಳಿ-ಕನಕಪುರ ಗ್ರಾಮಗಳ ಮಧ್ಯೆ ಹರಿಯುವ ಮುಲ್ಲಾಮಾರಿ ನದಿಗೆ ಅಡ್ಡಲಾಗಿ 5 ಕೋಟಿ ರೂ.ಗಳಲ್ಲಿ ಬ್ರಿಡ್ಜ್-ಕಮ್‌-ಬ್ಯಾರೇಜ್‌ ನಿರ್ಮಾಣ ಕಾಮಗಾರಿ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಇಗಾಗಲೇ ಕೊಟಗಾ, ಕನಕಪುರ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಂದಾಪುರ, ಪೋಲಕಪಳ್ಳಿ, ಗರಗಪಳ್ಳಿ, ಜಟ್ಟೂರ ಗ್ರಾಮಗಳಲ್ಲಿ ಬ್ರಿಡ್ಜ್ ಕಮ್‌ ಬ್ಯಾರೇಜ್‌ ನಿರ್ಮಿಸಿರುವುದರಿಂದ ರೈತರು ನೀರಿನ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಕನಕಪುರ ಬ್ಯಾರೇಜ್‌ ನಿರ್ಮಾಣದಿಂದ ಒಟ್ಟು 375 ಹೆಕ್ಟೇರ್‌ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದರು.

ಕಂಚನಾಳ ಗ್ರಾಮದ ಹತ್ತಿರ ಹರಿಯುವ ನದಿಗೆ ಅಡ್ಡಲಾಗಿ 3.31 ಕೋಟಿ ರೂ.ಗಳಲ್ಲಿ ಬ್ರಿಡ್ಜ ಕಮ್‌ ಬ್ಯಾರೇಜ್‌ ಮಂಜೂರಿಗೊಳಿಸಲಾಗಿದೆ. ಕ್ಷೇತ್ರದ ಜನರ ಬೇಡಿಕೆಯಂತೆ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ನಾನು ರಾಜಕೀಯ ಮಾಡಲು ಬಂದಿಲ್ಲ. ಕೆಲಸ ಮಾಡಿ ತೋರಿಸಲಿಕ್ಕೆ ಬಂದಿದ್ದೇನೆ. 1998 ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನರಾಂಭಕ್ಕೆ ಸಾಕಷ್ಟು ಪ್ರಯತ್ನ ಮಾಡಿರುವುದರಿಂದ ಸಕ್ಕರೆ ಕಾರ್ಖಾನೆ ಕೆಲಸಗಳು ಪ್ರಾರಂಭವಾಗಿವೆ ಎಂದರು.

ಉಪ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ನಮ್ಮ ಸರಕಾರ ರೈತರ ಬೇಡಿಕೆ ಈಡೇರಿಸಿದೆ. ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಸಕ್ಕರೆ ಕಾರ್ಖಾನೆಯನ್ನು 40ಕೋಟಿ ರೂ.ಗಳಲ್ಲಿ ಟೆಂಡರ್‌ ಪಡೆದುಕೊಂಡಿದ್ದಾರೆ. ಬರುವ ಅಕ್ಟೋಬರ್ ತಿಂಗಳಲ್ಲಿ ಇಥೆನಾಲ್‌ ಪ್ರಾರಂಭ ಆಗಲಿದೆ. ರೈತರು ಹೆಚ್ಚು ಕಬ್ಬು ಬೆಳೆಯಬೇಕು. ಚಿಂಚೋಳಿ ತಾಲೂಕಿನಲ್ಲಿ ಬಾಪೂರ- ಮಹೆಬೂಬನಗರ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತಿದೆ. ನಮ್ಮ ತಾಲೂಕಿನಲ್ಲಿ ಒಟ್ಟು 50 ಕಿ.ಮೀ ಇರುತ್ತದೆ. ಕೇಂದ್ರ ಭೂಸಾರಿಗೆ ಸಚಿವ ನಿತೀನ್‌ ಗಡ್ಕರಿ 703.68 ಕೋಟಿ ರೂ.ಅನುದಾನ ನೀಡಿರುವುದರಿಂದ ಕೇಂದ್ರ ಸರಕಾರ ತಾಲೂಕಿಗೆ ದೊಡ್ಡ ಕೊಡುಗೆ ನೀಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕನಕಪುರ ತಾಪಂ ಮಾಜಿ ಸದಸ್ಯ ಬಸವಣ್ಣಪ್ಪ ಕುಡಹಳ್ಳಿ ಮಾತನಾಡಿ, ಗ್ರಾಮದ ಅನೇಕ ವರ್ಷಗಳ ಬೇಡಿಕೆ ಈಡೇರಿದೆ. ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗಾಗಿ ಹಾಸ್ಟೇಲ್‌ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಿಗೊಳಿಸಬೇಕು ಎಂದು ಶಾಸಕರಿಗೆ ಒತ್ತಾಯಿಸಿದರು. ಎಇಇ ಶಿವಶರಣಪ್ಪ ಕೇಶ್ವಾರ ಮಾತನಾಡಿ, ಬರುವ 6 ತಿಂಗಳಲ್ಲಿ ಬ್ಯಾರೇಜ್‌ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ತಾಪಂ ಇಒ ಅನಿಲಕುಮಾರ ರಾಠೊಡ, ಗ್ರಾಪಂ ಅಧ್ಯಕ್ಷೆ ಜಗದೇವಿ ಸಂಜೀವಕುಮಾರ ವಗ್ಗಿ, ಉಪಾಧ್ಯಕ್ಷ ಪ್ರಕಾಶರೆಡ್ಡಿ ಹುವಿನಬಾವಿ, ಮಹೇಶ ಯಲಕಪಳ್ಳಿ, ಸಂಗಪ್ಪ ಕನಕಪುರ, ನರಸಮ್ಮ ಆವಂಟಿ, ಜಗಮ್ಮ ಮೇತ್ರಿ, ತಿಪ್ಪಣ್ಣ ತಾಜಲಾಪುರ, ಶಾಮರಾವ್‌, ಶಾಮರಾವ್‌ ರುಸ್ತಂಪುರ, ನಾಗರೆಡ್ಡಿ ರುಸ್ತಂಪುರ, ಪ್ರಕಾಶರೆಡ್ಡಿ ಹೂವಿನಬಾವಿ, ಹನ್ನುಮಿಯ ಹೂವಿನಬಾವಿ, ಜಗನ್ನಾಥ ಹೂವಿನಬಾವಿ, ಹಣಮಂತ ಯಲಕಪಳ್ಳಿ, ಮಹಾಂತಗೌಡ, ಉಮೇಶ ನೀಲಪ್ಪ, ಗೌತಮ ಬೇನೂರ, ಹಣಮಂತರಾವ್‌ ದೇಸಾಯಿ ಇನ್ನಿತರಿದ್ದರು. ಲಕ್ಷ್ಮಣ ಆವಂಟಿ ಪ್ರಸ್ತಾವಿಕ ಮಾತನಾಡಿದರು. ರೇವಣಸಿದ್ದಯ್ಯ ಸ್ವಾಮಿ ಸ್ವಾಗತಿಸಿದರು. ಶ್ರೀಧರ ವಗ್ಗಿ ವಂದಿಸಿದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.