ಸಾಧನೆಗೆ ಅಸಾಧ್ಯವಾಗದ್ದುಯಾವುದೂ ಇಲ್ಲ
Team Udayavani, Jan 25, 2022, 12:13 PM IST
ಶಹಾಬಾದ: ಸಾಧನೆಗೆ ಅಸಾಧ್ಯವಾಗದ್ದು ಯಾವುದು ಇಲ್ಲ.ಆದರೆ ಸಾ ಸುವ ಛಲ ಇದ್ದರೇ ಜೀವನದಲ್ಲಿ ಏನಾದರೂ ಆಗಬಹುದು ಎಂಬುದಕ್ಕೆ ಸುಧಾರಾಣಿ ನಾಟೇಕಾರ ಅವರ ಪರಿಶ್ರಮವೇ ಸಾಕ್ಷಿ ಎಂದು ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ ಹೇಳಿದರು.
ನಗರದ ಜಿಇ ಕಾಲೋನಿಯ ನಿವಾಸಿ ಸುಧಾರಾಣಿ ನಾಟೇಕಾರ ಅವರು ಪಿಎಸ್ಐ ಆಗಿ ಆಯ್ಕೆಯಾಗಿರುವುದಕ್ಕೆ ಆಯೋಜಿಸಲಾದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೇ ಮಾತ್ರ ನೌಕರಿಯನ್ನು ಗಿಟ್ಟಿಸಿಕೊಳ್ಳಬಹುದು ಎಂಬುದಕ್ಕೆ ಅಪವಾದ ಎಂಬಂತೆ ಅಪ್ಪಟ ಕನ್ನಡ ಮಾಧ್ಯಮದಲ್ಲಿ ಓದಿದಲ್ಲದೇ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದು ಪಿಎಸ್ಐ ಆಗಿ ನೇಮಕವಾಗಿದ್ದಾರೆ. ಅವರ ಸತತ ಪರಿಶ್ರಮ, ಅಭ್ಯಾಸ ಅವರನ್ನು ಇಲ್ಲಿಗೆ ತಂದು ನಿಲ್ಲಿಸಿದೆ. ಅವರ ಅಭ್ಯಾಸ ನಿರಂತರವಾಗಿರಲಿ. ಇನ್ನೂ ಹೆಚ್ಚಿನ ಹುದ್ದೆಯನ್ನು ಪಡೆದುಕೊಳ್ಳುವಂತಾಗಲಿ ಎಂದು ಶುಭಕೋರಿದರು.
ಕಲಬುರಗಿ ದಕ್ಷಿಣ ವಿಧಾನಸಭಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್ ಮಾತನಾಡಿ, ವಿದ್ಯೆ ಗುಡಿಸಲಿನಲ್ಲಿ ಹುಟ್ಟಿದರೂ ಅರಮನೆಯಲ್ಲಿ ಅರಳುವ ಶಕ್ತಿ ಅದಕ್ಕಿದೆ. ಸಮಯದ ಪರಿಪಾಲನೆ, ಸತತ ಅಧ್ಯಯನ ಹಾಗೂ ಪರಿಶ್ರಮದ ಮೂಲಕವೇ ಏನಾದರೂ ಸಾಧಿಸಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ಎಂದರೆ ಸುಧಾರಾಣಿ ನಾಟೇಕಾರ ಅವರು ಪಿಎಸ್ಐ ಆಗಿ ನೇಮಕವಾಗಿರುವುದು ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿಕೊಂಡು ಮಾತನಾಡಿದ ಸುಧಾರಾಣಿ ನಾಟೇಕಾರ, ಸ್ಪಷ್ಟ ಗುರಿ, ಸಾಧಿ ಸುವ ಛಲ ಇದ್ದಾಗಲೂ ಸೋಲು ಕಾಣುತ್ತೆವೆ. ಎಡವಿದಾಗ ಕೈಚೆಲ್ಲದೇ ಮರಳಿ ಯತ್ನ ಮಾಡಬೇಕು. ಹಿಂದೆ ಮಾಡಿದ ತಪ್ಪುಗಳನ್ನು ಮರುಕಳಿಸದಂತೆ ತಿದ್ದುಕೊಳ್ಳಬೇಕು ಅಲ್ಲದೇ ಕಾಟಾಚಾರಕ್ಕೆ ಪರೀಕೆಗಳನ್ನು ಬರೆಯದೇ ಜೀವನದಲ್ಲಿ ಏನಾದರೂ ಸಾ ಧಿಸಬೇಕೆಂಬ ಅದಮ್ಯ ಬಯಕೆಯೊಂದಿಗೆ ಪರೀಕ್ಷೆಗೆ ಸಿದ್ಧರಾದರೇ ಸಾಧನೆ ತಾನಾಗಿ ಒಲಿಯುತ್ತದೆ ಎಂದರು.
ಈ ಸಂದರ್ಭದಲ್ಲಿ ಸಾಜ್ಜಿದ್ ಗುತ್ತೆದಾರ, ಕಿರಣಬಾಬು ಕೋರೆ, ಬಾಬು, ಡಾ| ಆಂಜನೇಯ, ನಾಗೇಂದ್ರ ನಾಟೇಕಾರ, ವೆಂಕಟೇಶ (ಲೇಖು), ಸಂತೋಷ ಉಳ್ಳಾಗಡ್ಡಿ, ಶಿವರಾಜ ನಾಟೇಕಾರ, ರವಿ, ಸಂತೋಷ ಉಳ್ಳಾಗಡ್ಡಿ, ವಿದ್ಯಾಸಾಗರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್