ನ್ಯಾಯಯುತವಾಗಿ ಮಹದಾಯಿ ನೀರು ನಮಗೆ ಸಿಗಬೇಕು: ಎಂ.ಬಿ ಪಾಟೀಲ್
Team Udayavani, Jan 25, 2022, 9:42 PM IST
ಬೆಳಗಾವಿ: ಮಹದಾಯಿ ಯೋಜನೆಗಾಗಿ ಗೋವಾ ಕೇವಲ ರಾಜಕೀಯಕ್ಕಾಗಿ ವಿರೋಧ ಮಾಡುತ್ತಿದೆ. ನ್ಯಾಯಯುತವಾಗಿ ನಮಗೆ 7.5 ಟಿಎಂಸಿ ಅಡಿ ನೀರು ಸಿಗಬೇಕು ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯಲ್ಲಿ ಕೇವಲ 3.9 ಟಿಎಂಸಿ ಅಡಿ ನೀರು ಯಾವುದಕ್ಕೂ ಸಾಕಾಗುವುದಿಲ್ಲ. ಹೀಗಾಗಿ ನಮಗೆ ಸಂಪೂರ್ಣವಾಗಿ 7.5 ಟಿಎಂಸಿ ಅಡಿ
ನೀರು ಸಿಗಬೇಕು ಎಂಬುದು ನಮ್ಮ ನಿಲುವು. ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿ ಮಹದಾಯಿಗಾಗಿ ಪಾದಯಾತ್ರೆ ನಡೆಸುವ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಈಗಾಗಲೇ ಅಧಿಕೃತವಾಗಿ ಹೇಳಿದ್ದಾರೆ ಎಂದರು. ಖಾನಾಪುರಕ್ಕೆ 1.5 ಟಿಎಂಸಿ ಅಡಿ ನೀರು ಸಿಕ್ಕಿದ್ದು, ಈ ಭಾಗದಲ್ಲಿ ನೀರಾವರಿ ಸೌಲಭ್ಯಕ್ಕಾಗಿ ಇನ್ನೂ ಹೆಚ್ಚಿನ ನೀರು ಸಿಗಬೇಕಿದೆ. 36 ಟಿಎಂಸಿ ಅಡಿ ನೀರಿಗಾಗಿ ಒತ್ತಾಯ ಮಾಡಿದ್ದೆವು. ಅದರಲ್ಲಿ ವಿಶೇಷವಾಗಿ 7.5 ಟಿಎಂಸಿ ಅಡಿ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕು. ನಾನು ಆಗ ಗೋವಾ ಮುಖ್ಯಮಂತ್ರಿ
ಮನೋಹರ್ ಪರೀಕರ್ ಅವರನ್ನು ಭೇಟಿಯಾಗಿ ಬಂದು ಡಿಪಿಆರ್ ಮಾಡಿ, ಆಡಳಿತಾತ್ಮಕ ಅನುಮೋದನೆ ಕೊಟ್ಟ ನಂತರ ಈಗ ಇವರು ಮಾತನಾಡುತ್ತಿದ್ದಾರೆ. ಅಂದು ಎಂ.ಬಿ. ಪಾಟೀಲ್ ಸುಮ್ಮನೆ ಕೂತಿದ್ದರೆ ಏನಾಗುತ್ತಿತ್ತು?
ನಿಮ್ಮ ಸರ್ಕಾರ, ಜಲಸಂಪನ್ಮೂಲ ಇಲಾಖೆ ಇದಕ್ಕೆ ಸ್ಪಷ್ಟೀಕರಣ ನೀಡಲಿ. ಹೊಂದಾಣಿಕೆ ಮಾಡುವಾಗ ಪಕ್ಷದ ವಿಚಾರ ಬರುತ್ತದೆ. ಆದರೆ ನೀರಿನ ಹಕ್ಕು ಬಂದಾಗ ಯಾವುದೇ ರೀತಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ