ಹಿಜಾಬ್ ವಿವಾದ: ಉನ್ನತ ಮಟ್ಟದ ಸಮಿತಿ ರಚನೆ ಯಥಾಸ್ಥಿತಿ ಕಾಯುವಂತೆ ನಿರ್ದೇಶನ
Team Udayavani, Jan 26, 2022, 7:45 AM IST
ಉಡುಪಿ: ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ಎದ್ದಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ
ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಮತ್ತು ಯಥಾಸ್ಥಿತಿ ಕಾಯ್ದುಕೊಂಡು ಬರುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.
ತಮ್ಮ ಆಯ್ಕೆ ವಸ್ತ್ರವನ್ನು ಧರಿಸಲು ಅನುಮತಿ ನೀಡುವಂತೆ ಆಗ್ರಹಿಸುತ್ತಿರುವ ಉಡುಪಿ ಬಾಲಕಿಯರ ಸರಕಾರಿ
ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶ ಪಡೆಯುವ ವೇಳೆ ಕಾಲೇಜು ನಿಗದಿ ಮಾಡಿದ್ದ ಸಮವಸ್ತ್ರ/ವಸ್ತ್ರ ಸಂಹಿತೆಯ ಕುರಿತು ಮಾಹಿತಿ ಇದ್ದು, ಅದನ್ನು ಒಪ್ಪಿ ಸ್ವ ಇಚ್ಛೆಯಿಂದ ಕಾಲೇಜಿಗೆ ದಾಖಲಾಗಿದ್ದಾರೆ. ಇಷ್ಟು ದಿನ ಇಲ್ಲದ ಗೊಂದಲವನ್ನು ಹೊಸದಾಗಿ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ.
ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳಲ್ಲಿ ಪದವಿಪೂರ್ವ ತರಗತಿಗಳ ವಿದ್ಯಾರ್ಥಿಗಳಿಗೆ ಜಾರಿಯಲ್ಲಿರುವ ಸಮವಸ್ತ್ರ ನೀತಿ ಸಂಹಿತೆಯನ್ನು ಪರಿಶೀಲಿಸಲು ಹಾಗೂ ಈ ಕುರಿತು ದೇಶದ ಸರ್ವೋಚ್ಚ ನ್ಯಾಯಾಲಯ, ರಾಜ್ಯಗಳ ಉಚ್ಚ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಅವಲೋಕಿಸಿಸುವುದು ಅಗತ್ಯವಾಗಿದೆ. ಸಮಿತಿಯ ಶಿಫಾರಸುಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯ ತನಕ ಯಥಾಸ್ಥಿತಿಯನ್ನು ಮುಂದುವರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ