ಯುವಕರು ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣನ ಆದರ್ಶ ಪಾಲಿಸಬೇಕು:ಶಾಸಕ ಪರಣ್ಣ ಮುನವಳ್ಳಿ
Team Udayavani, Jan 26, 2022, 6:59 PM IST
ಗಂಗಾವತಿ: ಸ್ವಾತಂತ್ರ್ಯ ಸೇನಾನಿ ಬ್ರಿಟಿಷರಿಗೆ ಸಿಂಹಸ್ವಪ್ನಾವಾಗಿದ್ದ ಸಂಗೊಳ್ಳಿರಾಯಣ್ಣನ ಆದರ್ಶವನ್ನು ಯುವಕರು ಪಾಲನೆ ಮಾಡುವ ಮೂಲಕ ದೇಶಕ್ಕಾಗಿ ಸರ್ವ ತ್ಯಾಗಕ್ಕೂ ಸಿದ್ದರಾಗುವಂತೆ ಶಾಸಕ ಪರಣ್ಣ ಮುನವಳ್ಳಿ ಕರೆ ನೀಡಿದರು.
ಅವರು ಬುಧವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಾಯಣ್ಣನ ಶೌರ್ಯದಿನದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಯಣ್ಣ ಒಬ್ಬ ಅಪ್ಪಟ ದೇಶಪ್ರೇಮಿ ನಂಬಿಕೆಯ ಇನ್ನೊಂದು ಹೆಸರೇ ರಾಯಣ್ಣ ಆಗಿದ್ದಾರೆ. ರಾಣಿ ಚನ್ನಮ್ಮನ ಸಂಸ್ಥಾನದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ರಾಯಣ್ಣ ಜನಿಸಿದ್ದು ಆ.15 ರಂದು ಹುತಾತ್ಮರಾಗಿದ್ದು ಜ.26 ರಂದು ಇಂತಹ ಸೇನಾನಿಯನ್ನು ಸದಾ ಸ್ಮರಣೆ ಮಾಡಬೇಕೆಂದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಬಿ.ರಾಮಣ್ಣ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣಕ್ಕೆ ಒಂದು ಲಕ್ಷ ರೂ.ದೇಣಿಗೆ ಸಮರ್ಪಣೆ ಮಾಡುವ ವಾಗ್ದಾನ ಮಾಡಿ ಶೀಘ್ರ ರಾಯಣ್ಣ ಮೂರ್ತಿ ಸ್ಥಾಪನೆಯಾಗಲಿ ಎಂದು ಮನವಿ ಮಾಡಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ,ನಿರ್ದೇಶಕ ಟಿ.ನಾಗಪ್ಪ,ಶಿವಪ್ಪ, ಕೆ.ನಾಗೇಶ, ಬಕ್ಕಂಡಿ ಬಸವರಾಜ, ಯಮನೂರಪ್ಪ, ಪುಂಡಗೌಡ, ಬಿ.ವೆಂಕಟೇಶ, ಶ್ರೀಧರ ಡ್ಯಾಗಿ,ಅಡ್ಡಿ ಶ್ಯಾಮಣ್ಣ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ