ಹೀಗೊಂದು ಹಗರಣ: ಮೂರು ವರ್ಷದಲ್ಲಿ ಐದು ಮರ್ಸಿಡಿಸ್ ಕಾರು ಖರೀದಿ ಮಾಡಿದಾತನ ಬಂಧನ!
Team Udayavani, Jan 27, 2022, 11:00 AM IST
ಹೊಸದಿಲ್ಲಿ: ಮೂರು ವರ್ಷದ ಅವಧಿಯಲ್ಲಿ ಐದು ಮರ್ಸಿಡಿಸ್ ಕಾರುಗಳನ್ನು ಕೊಂಡು ವೆಹಿಕಲ್ ಫೈನಾನ್ಸ್ ಕಂಪನಿಗೆ 2.18 ಕೋಟಿ ರೂ. ವಂಚಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಫೈನಾನ್ಸ್ ಕಂಪನಿಯ ದೂರಿನ ಮೇರೆಗೆ 2018 ರಲ್ಲಿ ಆರೋಪಿ ಪ್ರಮೋದ್ ಸಿಂಗ್ ವಿರುದ್ಧ ಗುರ್ಗಾಂವ್ ನಿವಾಸಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಪೊಲೀಸರ ಪ್ರಕಾರ, ಸಿಂಗ್ ಆರಂಭದಲ್ಲಿ ಮರ್ಸಿಡಿಸ್ ಬೆಂಜ್ ಕಾರನ್ನು ಖರೀದಿಸಲು ಸಂಸ್ಥೆಯಿಂದ 27.5 ರೂ ಲಕ್ಷ ಸಾಲ ಪಡೆದು ಆರಂಭಿಕ ಕಂತುಗಳನ್ನು ಪಾವತಿಸಿದ್ದಾರೆ. ಫೈನಾನ್ಸರ್ ನಂಬಿಕೆ ಗಳಿಸಿದ ನಂತರ, ಅವರು ಇನ್ನೂ ನಾಲ್ಕು ಸಾಲಗಳನ್ನು ಪಡೆದಿದ್ದರು. ಕಂತುಗಳನ್ನು ಸ್ವಲ್ಪ ಸಮಯದವರೆಗೆ ಪಾವತಿಸುವುದನ್ನು ಮುಂದುವರೆಸಿದ ನಂತರ ಪಾವತಿ ಮಾಡುವುದನ್ನು ನಿಲ್ಲಿಸಿದ್ದ.
ಇದನ್ನೂ ಓದಿ:ಒಂದೇ ಯೋಜನೆಗೆ ಸರ್ಕಾರದಿಂದ ಮೂರು ಜಿಲ್ಲೆ ಪ್ರಸ್ತಾವ ಏಕೆ?: ಉದ್ಯಮಿಗಳ ಅಸಮಾಧಾನ
ಸಾರಿಗೆ ಇಲಾಖೆಯ ಕೆಲವು ಅಧಿಕಾರಿಗಳು ಸಿಂಗ್ ಜೊತೆ ಕೈಜೋಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರರ ಪ್ರಕಾರ, ಪ್ರಮೋದ್ ಸಿಂಗ್ ಸಂಸ್ಥೆಗೆ 2,18,34,853 ಬಾಕಿ ಉಳಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಿಂಗ್ ತಲೆಮರೆಸಿಕೊಂಡಿದ್ದ. ಈತನ ಮೇಲೆ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ಪ್ರಮೋದ್ ಸಿಂಗ್ ಮೂರು ವರ್ಷಗಳಲ್ಲಿ ಐದು ಮರ್ಸಿಡಿಸ್ ಕಾರುಗಳನ್ನು ಖರೀದಿ ಮಾಡಿದ್ದ. ವಿಚಿತ್ರವೆಂದರೆ ಎಲ್ಲಾ ಕಾರುಗಳನ್ನು ಖರೀದಿಸುವಾಗಲೇ ಒಂದೇ ಕಡೆ ಸಾಲ ಮಾಡಿದ್ದ. ಸಾರಿಗೆ ಇಲಾಖೆಯ ಕೆಲವು ಅಧಿಕಾರಿಗಳು ವಾಹನಗಳ ಹೈಪೋಥೆಕೇಟೆಡ್ ಸ್ಥಿತಿಯನ್ನು ದಾಖಲೆಗಳಿಂದ ಅಳಿಸಿಹಾಕಿದ್ದಾರೆ. ಹೀಗಾಗಿ ಕಾರುಗಳನ್ನು ಮೋಸದಿಂದ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ಗಳಿಗೆ ಮಾರಾಟ ಮಾಡಬಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ